AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತ ತಂಡಕ್ಕೆ 275 ರನ್​ಗಳ ಗುರಿ ನೀಡಿದ ಆಸ್ಟ್ರೇಲಿಯಾ

Australia vs India, 3rd Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಬ್ರಿಸ್ಬೇನ್​ನಲ್ಲಿ ನಡೆಯುತ್ತಿದೆ. ಪರ್ತ್​ನಲ್ಲಿ ನಡೆದ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​​ಗಳ ಜಯ ಸಾಧಿಸಿದೆ. ಇನ್ನು ಅಡಿಲೇಡ್​ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ಗೆಲುವು ದಾಖಲಿಸಿದೆ. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

IND vs AUS: ಭಾರತ ತಂಡಕ್ಕೆ 275 ರನ್​ಗಳ ಗುರಿ ನೀಡಿದ ಆಸ್ಟ್ರೇಲಿಯಾ
Ind Vs Aus
ಝಾಹಿರ್ ಯೂಸುಫ್
|

Updated on:Dec 18, 2024 | 10:01 AM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯವು ರಣರೋಚಕಘಟ್ಟದತ್ತ ಸಾಗುತ್ತಿದೆ. ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 445 ರನ್​ ಕಲೆಹಾಕಿದರೆ, ಟೀಮ್ ಇಂಡಿಯಾ 260 ರನ್​ಗಳಿಸಿ ಆಲೌಟ್ ಆಗಿತ್ತು. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 18 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 89 ರನ್ ಕಲೆಹಾಕಿ ಡಿಕ್ಲೇರ್ ಘೋಷಿಸಿದೆ.

ಮೊದಲ ಇನಿಂಗ್ಸ್​ ಹಿನ್ನಡೆಯೊಂದಿಗೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲು 275 ರನ್​​ಗಳನ್ನು ಕಲೆಹಾಕಬೇಕಿದೆ. ಇತ್ತ ಪಂದ್ಯವು 5ನೇ ದಿನದಾಟದ 2ನೇ ಸೆಷನ್​ನಲ್ಲಿದ್ದು, ಹೀಗಾಗಿ ಈ ಟಾರ್ಗೆಟ್ ಬೆನ್ನತ್ತುವುದು ಕಷ್ಟಸಾಧ್ಯ ಎನ್ನಬಹುದು.

ಇದಾಗ್ಯೂ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡದಿದ್ದರೆ ಭಾರತ ತಂಡವು ಕನಿಷ್ಠ 52 ಓವರ್​​ಗಳನ್ನು ಎದುರಿಸಲಿದ್ದು, ಈ ಮೂಲಕ 275 ರನ್​ ಕಲೆಹಾಕಿ ಗೆಲುವು ಸಾಧಿಸಬಹುದು. ಅತ್ತ ಆಸ್ಟ್ರೇಲಿಯಾ ತಂಡವು ಈ ಪಂದ್ಯದಲ್ಲಿ ಗೆಲುವು ಸಾಧಿಸಬೇಕಿದ್ದರೆ ಟೀಮ್ ಇಂಡಿಯಾವನ್ನು ಆಲೌಟ್ ಮಾಡಬೇಕು.

275 ರನ್​ಗಳ ಒಳಗೆ ಭಾರತ ತಂಡವನ್ನು ಆಲೌಟ್ ಮಾಡುವ ತಂತ್ರದೊಂದಿಗೆ ಡಿಕ್ಲೇರ್ ಘೋಷಿಸಿರುವ ಆಸ್ಟ್ರೇಲಿಯಾ ಪರ ಮೂವರು ವೇಗಿಗಳು ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ ಹಾಗೂ ಮಿಚೆಲ್ ಮಾರ್ಷ್ ಆಸ್ಟ್ರೇಲಿಯಾ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ.

ಆದರೆ ಮೊದಲ ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದ ಜೋಶ್ ಹ್ಯಾಝಲ್​ವುಡ್ ಗಾಯದ ಕಾರಣ ದ್ವಿತೀಯ ಇನಿಂಗ್ಸ್​ಗೆ ಅಲಭ್ಯರಾಗಿದ್ದಾರೆ. ಇದು ಟೀಮ್ ಇಂಡಿಯಾ ಪಾಲಿಗೆ ಪ್ಲಸ್ ಪಾಯಿಂಟ್. ಈ ಪ್ಲಸ್ ಪಾಯಿಂಟ್ ಅನ್ನು ಸದುಪಯೋಗಪಡಿಸಿಕೊಂಡು ಭಾರತೀಯ ಬ್ಯಾಟರ್​​ಗಳು ಗೆಲುವು ದಕ್ಕಿಸಿಕೊಳ್ಳಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಪಾಕಿಸ್ತಾನ್ ಪರ ಕಣಕ್ಕಿಳಿದ ಇಬ್ಬರು ಹಿಂದೂ ಕ್ರಿಕೆಟಿಗರು ಯಾರು ಗೊತ್ತಾ?

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

Published On - 10:00 am, Wed, 18 December 24

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ