AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 4ನೇ ದಿನದಾಟ ಅಂತ್ಯ: ಆಲೌಟ್ ಆಗದ ಆಸ್ಟ್ರೇಲಿಯಾ

Australia vs India, 4th Test: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​ಗಳ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್​ಗಳ ಗೆಲುವು ದಾಖಲಿಸಿತು. ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಇದೀಗ ಉಭಯ ತಂಡಗಳು ನಾಲ್ಕನೇ ಪಂದ್ಯದಲ್ಲಿ ಗೆಲ್ಲಲು ಶತಪ್ರಯತ್ನ ಮುಂದುವರೆಸಿದ್ದಾರೆ.

IND vs AUS: 4ನೇ ದಿನದಾಟ ಅಂತ್ಯ: ಆಲೌಟ್ ಆಗದ ಆಸ್ಟ್ರೇಲಿಯಾ
Ind Vs Aus
ಝಾಹಿರ್ ಯೂಸುಫ್
|

Updated on: Dec 29, 2024 | 12:43 PM

Share

ಮೆಲ್ಬೋರ್ನ್​​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದ ನಾಲ್ಕನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 9 ವಿಕೆಟ್ ಕಳೆದುಕೊಂಡು 228 ರನ್ ಕಲೆಹಾಕಿದೆ. 173 ರನ್​ಗಳಿಗೆ 9 ವಿಕೆಟ್ ಕಬಳಿಸಿದ್ದ ಟೀಮ್ ಇಂಡಿಯಾ ಬೌಲರ್​​ಗಳು ಕೊನೆಯ ವಿಕೆಟ್​ಗಾಗಿ ಪರದಾಡಿದರು. ಅತ್ತ 10ನೇ ವಿಕೆಟ್​ಗೆ ಕೆಚ್ಚೆದೆಯ ಹೋರಾಟ ಪ್ರದರ್ಶಿಸಿದ ನಾಥನ್ ಲಿಯಾನ್ ಹಾಗೂ ಸ್ಕಾಟ್ ಬೋಲ್ಯಾಂಡ್ 55 ರನ್​​ಗಳ ಜೊತೆಯಾಟವಾಡಿದರು.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಸ್ಟೀವ್ ಸ್ಮಿತ್ (140) ಅವರ ಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 474 ರನ್​​ಗಳಿಸಿ ಆಲೌಟ್ ಆಗಿತ್ತು. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಪರ ನಿತೀಶ್ ಕುಮಾರ್ ರೆಡ್ಡಿ (114) ಶತಕ ಸಿಡಿಸಿದ್ದರು. ಈ ಶತಕದ ಸಹಾಯದಿಂದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 369 ರನ್ ಪೇರಿಸಿತು.

ಮೊದಲ ಇನಿಂಗ್ಸ್​ನಲ್ಲಿ 105 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಸ್ಯಾಮ್ ಕೊನ್​ಸ್ಟಾಸ್ 8 ರನ್​ಗಳಿಸಿ ಔಟಾದರೆ, ಉಸ್ಮಾನ್ ಖ್ವಾಜಾ 21 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಇದಾಗ್ಯೂ ಒಂದೆಡೆ ಕ್ರೀಸ್ ಕಚ್ಚಿ ನಿಂತ ಮಾರ್ನಸ್ ಲಾಬುಶೇನ್ ಎಚ್ಚರಿಕೆಯ ಆಟದೊಂದಿಗೆ ರನ್ ಪೇರಿಸುತ್ತಾ ಸಾಗಿದರು. ಆದರೆ ಮತ್ತೊಂದೆಡೆ ಬಿಗು ದಾಳಿ ಸಂಘಟಿಸಿದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಟ್ರಾವಿಸ್ ಹೆಡ್ (1), ಮಿಚೆಲ್ ಮಾರ್ಷ್ (0) ವಿಕೆಟ್ ಕಬಳಿಸಿ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು.

ಇನ್ನು ಸ್ಟೀವ್ ಸ್ಮಿತ್​ (13) ಹಾಗೂ 70 ರನ್​ಗಳಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದ್ದ ಲಾಬುಶೇನ್​ಗೆ​ ಪೆವಿಲಿಯನ್ ಹಾದಿ ತೋರಿಸುವಲ್ಲಿ ಮೊಹಮ್ಮದ್ ಸಿರಾಜ್ ಯಶಸ್ವಿಯಾದರು. ಇದರ ಬೆನ್ನಲ್ಲೇ ಮಿಚೆಲ್ ಸ್ಟಾರ್ಕ್ (5) ರನೌಟ್ ಆಗಿ ನಿರ್ಗಮಿಸಿದರು.

ಈ ಹಂತದಲ್ಲಿ ಜವಾಬ್ದಾರಿಯು ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ಪ್ಯಾಟ್ ಕಮಿನ್ಸ್ 41 ರನ್​​ಗಳ ಕೊಡುಗೆ ನೀಡಿದರು. ಆದರೆ ಅರ್ಧಶತಕದ ಹೊಸ್ತಿಲಲ್ಲಿ ಜಡೇಜಾಗೆ ವಿಕೆಟ್ ಒಪ್ಪಿಸಿದರು. ಆದರೆ ಕೊನೆಯ ವಿಕೆಟ್​ಗೆ ಜೊತೆಗೂಡಿದ ನಾಥನ್ ಲಿಯಾನ್ (41) ಹಾಗೂ ಸ್ಕಾಟ್ ಬೋಲ್ಯಾಂಡ್ (10) 55 ರನ್​ಗಳ ಜೊತೆಯಾಟವಾಡಿದರು. ಈ ಮೂಲಕ 4ನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ತಂಡದ 228 ಕ್ಕೆ ತಲುಪಿಸಿದರು. ಭಾರತದ ಪರ ಜಸ್​ಪ್ರೀತ್ ಬುಮ್ರಾ 4 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಸಿರಾಜ್ 3 ವಿಕೆಟ್ ಪಡೆದು ಮಿಂಚಿದರು.

ಇನ್ನು ಕೊನೆಯ ದಿನದಾಟ ಮಾತ್ರ ಉಳಿದಿದ್ದು, ಭಾರತ ತಂಡವು ಈ ಪಂದ್ಯದಲ್ಲಿ ಗೆಲ್ಲಬೇಕಿದ್ದರೆ ಸೋಮವಾರ ಆಸ್ಟ್ರೇಲಿಯಾ ನೀಡುವ 333+ ರನ್​ಗಳನ್ನು ಚೇಸ್ ಮಾಡಬೇಕಿದೆ. ಅದರೊಳಗೆ ಆಸೀಸ್ ಬೌಲರ್​​ಗಳು 10 ವಿಕೆಟ್ ಪಡೆದರೆ ಜಯ ಆಸ್ಟ್ರೇಲಿಯಾ ಪಾಲಾಗಲಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ , ಸ್ಯಾಮ್ ಕೊನ್​ಸ್ಟಾಸ್ , ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್ , ಟ್ರಾವಿಸ್ ಹೆಡ್ , ಮಿಚೆಲ್ ಮಾರ್ಷ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಸ್ಕಾಟ್ ಬೋಲ್ಯಾಂಡ್.

ಇದನ್ನೂ ಓದಿ: ಛೇ ಇದೆಂತಾ ನೀಚತನ… ವಿರಾಟ್ ಕೊಹ್ಲಿ ತಂದೆ ವಿಷಯದಲ್ಲಿ ಕ್ಷುದ್ರತೆ ಮೆರೆದ ಆಸ್ಟ್ರೇಲಿಯಾ ಪತ್ರಿಕೆ..!

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ಕೆಎಲ್ ರಾಹುಲ್ , ರೋಹಿತ್ ಶರ್ಮಾ (ನಾಯಕ) , ವಿರಾಟ್ ಕೊಹ್ಲಿ , ರಿಷಬ್ ಪಂತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ನಿತೀಶ್ ಕುಮಾರ್ ರೆಡ್ಡಿ , ವಾಷಿಂಗ್ಟನ್ ಸುಂದರ್ , ಜಸ್​ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ