AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 181 ರನ್​ಗೆ ಆಸ್ಟ್ರೇಲಿಯಾ ಆಲೌಟ್: 6 ವಿಕೆಟ್ ಕಳೆದುಕೊಂಡ ಟೀಮ್ ಇಂಡಿಯಾ

Australia vs India, 5th Test: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದೆ. ಇನ್ನು ಮೂರನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಹಾಗೆಯೇ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದ್ದು, ಇದೀಗ ಐದನೇ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ಸಮಬಲದಲ್ಲಿ ಕೊನೆಗೊಳಿಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

IND vs AUS: 181 ರನ್​ಗೆ ಆಸ್ಟ್ರೇಲಿಯಾ ಆಲೌಟ್: 6 ವಿಕೆಟ್ ಕಳೆದುಕೊಂಡ ಟೀಮ್ ಇಂಡಿಯಾ
Ind Vs Aus
ಝಾಹಿರ್ ಯೂಸುಫ್
|

Updated on: Jan 04, 2025 | 12:52 PM

Share

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಅಂತ್ಯಗೊಂಡಿದೆ. ಎರಡನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡವು 181 ರನ್​ಗಳಿಗೆ ಆಲೌಟ್ ಆದರೆ, ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತು.

ಪ್ರಥಮ ಇನಿಂಗ್ಸ್​ನಲ್ಲಿ ರಿಷಭ್ ಪಂತ್ ಅವರ 40 ರನ್​ಗಳ ಹಾಗೂ ಜಸ್​ಪ್ರೀತ್ ಬುಮ್ರಾ ಅವರ 22 ರನ್​ಗಳ ಕೊಡುಗೆಯೊಂದಿಗೆ ಭಾರತ ತಂಡವು 185 ರನ್​ಗಳಿಸಿ ಆಲೌಟ್ ಆಗಿತ್ತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ಬ್ಯಾಟರ್​ಗಳ ಟೀಮ್ ಇಂಡಿಯಾ ಬೌಲರ್​ಗಳ ಕರಾರುವಾಕ್ ದಾಳಿ ಮುಂದೆ ರನ್​ಗಳಿಸಲು ಪರದಾಡಿದರು. ಪರಿಣಾಮ ಆಸೀಸ್ ಪಡೆ ತವರು ಮೈದಾನದಲ್ಲಿ ಕೇವಲ 181 ರನ್​​ಗಳಿಗೆ ಆಲೌಟ್ ಆಯಿತು.

ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ತಲಾ 3 ವಿಕೆಟ್ ಪಡೆದರೆ, ನಿತೀಶ್ ಕುಮಾರ್ ರೆಡ್ಡಿ ಹಾಗೂ ಜಸ್​ಪ್ರೀತ್ ಬುಮ್ರಾ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

ದ್ವಿತೀಯ ಇನಿಂಗ್ಸ್​:

ಮೊದಲ ಇನಿಂಗ್ಸ್​ನಲ್ಲಿ 4 ರನ್​ಗಳ ಅಲ್ಪ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ 13 ರನ್​ಗಳಿಸಿ ಔಟಾದರೆ, ಇದರ ಬೆನ್ನಲ್ಲೇ ಯಶಸ್ವಿ ಜೈಸ್ವಾಲ್ (22) ಕೂಡ ವಿಕೆಟ್ ಒಪ್ಪಿಸಿದರು.

ಇನ್ನು ಶುಭ್​ಮನ್ ಗಿಲ್ (13) ಹಾಗೂ ವಿರಾಟ್ ಕೊಹ್ಲಿ (6) ಬಂದ ವೇಗದಲ್ಲೇ ಹಿಂತಿರುಗಿದರು. ಪರಿಣಾಮ ಟೀಮ್ ಇಂಡಿಯಾ 78 ರನ್​​ಗಳಿಗೆ 4 ವಿಕೆಟ್ ಕಳೆದುಕೊಂಡಿತು.

ರಿಷಭ್ ಪಂತ್ ಅಬ್ಬರ:

ಈ ಹಂತದಲ್ಲಿ ಕಣಕ್ಕಿಳಿದ ರಿಷಭ್ ಪಂತ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಆಸ್ಟ್ರೇಲಿಯಾ ಬೌಲರ್​​ಗಳನ್ನು ಮನಸೋ ಇಚ್ಛೆ ದಂಡಿಸಿದ ಪಂತ್ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 33 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್​​ಗಳೊಂದಿಗೆ 61 ರನ್ ಸಿಡಿಸಿದರು.

ಆದರೆ ಪಂತ್ ಔಟಾದ ಬೆನ್ನಲ್ಲೇ ನಿತೀಶ್ ಕುಮಾರ್ ರೆಡ್ಡಿ (4) ಸುಲಭ ಕ್ಯಾಚ್ ನೀಡಿ ನಿರಾಸೆ ಮೂಡಿಸಿದರು. ಈ ಹಂತದಲ್ಲಿ ಜೊತೆಗೂಡಿದ ರವೀಂದ್ರ ಜಡೇಜಾ (8) ಹಾಗೂ ವಾಷಿಂಗ್ಟನ್ ಸುಂದರ್ (6) 2ನೇ ದಿನದಾಟದ ಅಂತ್ಯದವರೆಗೆ ಬ್ಯಾಟಿಂಗ್ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು.

ಅದರಂತೆ ಟೀಮ್ ಇಂಡಿಯಾ ದ್ವಿತೀಯ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 141 ರನ್​ ಕಲೆಹಾಕಿದೆ. ಈ ಮೂಲಕ ದ್ವಿತೀಯ ಇನಿಂಗ್ಸ್​ನಲ್ಲಿ ಒಟ್ಟು 145 ರನ್​ಗಳ ಮುನ್ನಡೆಯನ್ನು ಪಡೆದುಕೊಂಡಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಸ್ಯಾಮ್ ಕೊನ್​ಸ್ಟಾಸ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್ , ಟ್ರಾವಿಸ್ ಹೆಡ್ , ಬ್ಯೂ ವೆಬ್​ಸ್ಟರ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಸ್ಕಾಟ್ ಬೋಲ್ಯಾಂಡ್.

ಇದನ್ನೂ ಓದಿ: IND vs AUS: ಮೈದಾನ ತೊರೆದ ಜಸ್​ಪ್ರೀತ್ ಬುಮ್ರಾ: ವಿರಾಟ್ ಕೊಹ್ಲಿ ಕ್ಯಾಪ್ಟನ್

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ಕೆಎಲ್ ರಾಹುಲ್ , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ರಿಷಬ್ ಪಂತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ನಿತೀಶ್ ಕುಮಾರ್ ರೆಡ್ಡಿ , ವಾಷಿಂಗ್ಟನ್ ಸುಂದರ್ , ಜಸ್​ಪ್ರೀತ್ ಬುಮ್ರಾ (ನಾಯಕ) , ಪ್ರಸಿದ್ಧ್ ಕೃಷ್ಣ , ಮೊಹಮ್ಮದ್ ಸಿರಾಜ್.

Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!