AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 3rd ODI: ಕೊನೆಯ ಪಂದ್ಯವಾದರೂ ಗೆಲ್ಲುತ್ತಾ?: ಭಾರತ-ಆಸ್ಟ್ರೇಲಿಯಾ 3ನೇ ಏಕದಿನ ಯಾವಾಗ?, ಎಲ್ಲಿ?

India vs Australia 3rd ODI Live Streaming Details: ಎರಡನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತವನ್ನು 2 ವಿಕೆಟ್‌ಗಳಿಂದ ಸೋಲಿಸಿ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಇದೀಗ ಉಳಿದಿರುವ ಕೊನೆಯ ಪಂದ್ಯವನ್ನಾದರೂ ಗೆದ್ದು ಮಾನ ಉಳಿಸುವ ಪ್ಲ್ಯಾನ್ನಲ್ಲಿ ಗಿಲ್ ಪಡೆ ಇದೆ. ಹಾಗಾದರೆ, ಭಾರತ-ಆಸ್ಟ್ರೇಲಿಯಾ ತೃತೀಯ ಏಕದಿನ ಯಾವಾಗ?, ಎಲ್ಲಿ?, ಈ ಕುರಿತ ಮಾಹಿತಿ ಇಲ್ಲಿದೆ.

IND vs AUS 3rd ODI: ಕೊನೆಯ ಪಂದ್ಯವಾದರೂ ಗೆಲ್ಲುತ್ತಾ?: ಭಾರತ-ಆಸ್ಟ್ರೇಲಿಯಾ 3ನೇ ಏಕದಿನ ಯಾವಾಗ?, ಎಲ್ಲಿ?
Ind Vs Aus 3rd Odi
ಪ್ರೀತಿ ಭಟ್​, ಗುಣವಂತೆ
| Updated By: Vinay Bhat|

Updated on: Oct 24, 2025 | 9:04 AM

Share

ಬೆಂಗಳೂರು (ಅ. 24): ಆಸ್ಟ್ರೇಲಿಯಾದಲ್ಲಿ ಭಾರತೀಯ ಕ್ರಿಕೆಟ್ ತಂಡದ (Indian Cricket Team) ಕೆಟ್ಟ ಕಾಲ ಮುಗಿಯುವಂತೆ ಕಾಣುತ್ತಿಲ್ಲ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ ನಂತರ, ತಂಡವು ಏಕದಿನ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ಮುಂದುವರಿಸುವ ಭರವಸೆಯಲ್ಲಿತ್ತು, ಆದರೆ ಆಸ್ಟ್ರೇಲಿಯಾ ಮೂರು ಪಂದ್ಯಗಳ ಸರಣಿಯ ಮೊದಲ ಎರಡು ಏಕದಿನ ಪಂದ್ಯಗಳನ್ನು ಗೆಲ್ಲುವ ಮೂಲಕ ಈ ಭರವಸೆಯನ್ನು ಹುಸಿಗೊಳಿಸಿದೆ. ಎರಡನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತವನ್ನು 2 ವಿಕೆಟ್‌ಗಳಿಂದ ಸೋಲಿಸಿ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಇದೀಗ ಉಳಿದಿರುವ ಕೊನೆಯ ಪಂದ್ಯವನ್ನಾದರೂ ಗೆದ್ದು ಮಾನ ಉಳಿಸುವ ಪ್ಲ್ಯಾನ್​ನಲ್ಲಿ ಗಿಲ್ ಪಡೆ ಇದೆ. ಹಾಗಾದರೆ, ಭಾರತ-ಆಸ್ಟ್ರೇಲಿಯಾ ತೃತೀಯ ಏಕದಿನ ಯಾವಾಗ?, ಎಲ್ಲಿ?, ಈ ಕುರಿತ ಮಾಹಿತಿ ಇಲ್ಲಿದೆ.

ಭಾರತ- ಆಸ್ಟ್ರೇಲಿಯಾ ಏಕದಿನ ಸರಣಿಯ ಮೂರನೇ ಪಂದ್ಯ ಯಾವಾಗ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಎರಡನೇ ಮತ್ತು ಮೂರನೇ ಪಂದ್ಯಗಳ ನಡುವೆ ಕೇವಲ ಒಂದು ದಿನಗಳ ಅಂತರವಿದೆಯಷ್ಟೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ vs ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯ ಶನಿವಾರ (ಅಕ್ಟೋಬರ್ 24) ನಡೆಯಲಿದೆ.

ಇದನ್ನೂ ಓದಿ
Image
ಟೀಮ್ ಇಂಡಿಯಾ ಸೋಲಿಗೆ ಕಾರಣ ವಿವರಿಸಿದ ಗಿಲ್: ಏನು ಹೇಳಿದ್ರು?
Image
ಪಾಕಿಸ್ತಾನದ ಸೋಲು ಭಾರತಕ್ಕೆ ಲಾಭವಾಯ್ತು
Image
ಟೀಂ ಇಂಡಿಯಾಕ್ಕೆ ಮುಳುವಾಗ್ತಿದ್ಯಾ ಗೌತಮ್ ಗಂಭೀರ್ ಹಠಮಾರಿತನ
Image
3ಕ್ಯಾಚ್ ಡ್ರಾಪ್, 1 ರನೌಟ್.. ಭಾರತ ಪಂದ್ಯ ಸೋತಿದ್ದು ಎಲ್ಲಿ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ vs ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯ ಸಿಡ್ನಿಯ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

IND vs AUS 2nd ODI: ಟೀಮ್ ಇಂಡಿಯಾ ಸೋಲಿಗೆ ಕಾರಣ ವಿವರಿಸಿದ ಗಿಲ್: ಏನು ಹೇಳಿದ್ರು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ vs ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯವು ಸ್ಥಳೀಯ ಸಮಯ ಮಧ್ಯಾಹ್ನ 2:00 ಗಂಟೆಗೆ ಪ್ರಾರಂಭವಾಗುತ್ತದೆ. ಆದಾಗ್ಯೂ, ಭಾರತದಲ್ಲಿ ಪಂದ್ಯವು ಬೆಳಿಗ್ಗೆ 9:00 ಗಂಟೆಗೆ ಪ್ರಾರಂಭವಾಗುತ್ತದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದ ನೇರ ಪ್ರಸಾರವನ್ನು ನಾನು ಎಲ್ಲಿ ವೀಕ್ಷಿಸಬಹುದು?

ಭಾರತ vs ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯದ ನೇರ ಪ್ರಸಾರ ಜಿಯೋಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬಹುದು?

ಭಾರತ vs ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯದ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಲಭ್ಯವಿರುತ್ತದೆ.

ಭಾರತದಲ್ಲಿ ಬದಲಾವಣೆ ಖಚಿತ:

ಮೊದಲ ಎರಡು ಪಂದ್ಯಗಳಲ್ಲಿ ಎರಡು ಸೋಲುಗಳನ್ನು ಕಂಡ ನಂತರ, ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಡುವ XI ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಬಹುದು. ಬ್ಯಾಟಿಂಗ್ ಕಳಪೆಯಾಗಿದ್ದು, ಬೌಲರ್‌ಗಳು ಹೆಚ್ಚಿನ ಪರಿಣಾಮ ಬೀರದ ಕಾರಣ ಭಾರತ ಸರಣಿಯಲ್ಲಿ ಕಳಪೆಯಾಗಿ ಕಾಣುತ್ತಿದೆ. ವೈಟ್‌ವಾಶ್ ತಪ್ಪಿಸಲು ಭಾರತ ಎರಡೂ ವಿಭಾಗಗಳಲ್ಲಿ ಬದಲಾವಣೆ ಮಾಡಬಹುದು. ಕೆಎಲ್ ರಾಹುಲ್​ಗೆ ವಿಶ್ರಾಂತಿ ನೀಡಿ ಯಶಸ್ವಿ ಜೈಸ್ವಾಲ್ ಅವರನ್ನು ಆಡಿಸಬಹುದು ಬಹುತೇಕ ಖಚಿತ. ಉಳಿದಂತೆ ತಂಡದಲ್ಲಿ ಏನೆಲ್ಲ ಬದಲಾವಣೆ ಆಗಬಹುದು ಎಂಬುದು ನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ