ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!

Chloe Amanda Bailey-Michael Vaughan: ಇಂಗ್ಲೆಂಡ್ ತಂಡವು ಕೇವಲ 68 ರನ್​ಗಳಿಗೆ ಆಲೌಟಾದ ಬೆನ್ನಲ್ಲೇ ಆಸ್ಟ್ರೇಲಿಯಾದ ಮಹಿಳಾ ಪತ್ರಕರ್ತೆ ಕೋಲ್ ಅಮಂಡಾ ಬೈಲಿ ಇಂಗ್ಲೆಂಡ್ ಮಾಜಿ ನಾಯಕ ಮೈಕೆಲ್ ವಾನ್ ಅವರ ಹಳೆಯ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದಾರೆ.

ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!
Chloe Amanda Bailey-Michael Vaughan
Follow us
| Updated By: ಝಾಹಿರ್ ಯೂಸುಫ್

Updated on: Dec 28, 2021 | 2:59 PM

ಅದು 2019…ಭಾರತ ತಂಡವು ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿತ್ತು. ಐದು ಪಂದ್ಯಗಳ ಏಕದಿನ ಸರಣಿಯ 4ನೇ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ದ ಮುಗ್ಗರಿಸಿತ್ತು. ಅದು ಕೂಡ ಅತ್ಯಂತ ಹೀನಾಯವಾಗಿ ಎಂಬುದು ವಿಶೇಷ. ಹೌದು, ಅಂದು ಟೀಮ್ ಇಂಡಿಯಾ 30.5 ಓವರ್​ನಲ್ಲಿ ಕೇವಲ 92 ರನ್​ಗಳಿಗೆ ಆಲೌಟ್ ಆಗಿತ್ತು. ಭಾರತ ತಂಡದ ಈ ಕಳಪೆ ಬ್ಯಾಟಿಂಗ್ ಬೆನ್ನಲ್ಲೇ ಇಂಗ್ಲೆಂಡ್ ಮಾಜಿ ನಾಯಕ ಮೈಕೆಲ್ ವಾನ್ ಟೀಮ್ ಇಂಡಿಯಾವನ್ನು ಗೇಲಿ ಮಾಡಿದ್ದರು. ಭಾರತ 92 ಕ್ಕೆ ಆಲೌಟ್ ಎಂದು ವಾನ್ ಟ್ವೀಟ್ ಮಾಡಿದ್ದ ವಾನ್, ಈ ದಿನಗಳಲ್ಲಿ ಒಂದು ತಂಡವು 100 ಕ್ಕಿಂತ ಕಡಿಮೆ ರನ್ ಗಳಿಸುತ್ತದೆ ಎಂದರೆ ನಂಬಲಾಗುತ್ತಿಲ್ಲ ಎಂದು ಕಿಚಾಯಿಸಿದ್ದರು.

ಇದೀಗ ಎರಡು ವರ್ಷಗಳ ಹಿಂದಿನ ಮೈಕೆಲ್ ವಾನ್ ಅವರ ಟ್ವೀಟ್ ವೈರಲ್ ಆಗಿದೆ. ಹೀಗೆ ಹಳೆಯ ಟ್ವೀಟ್ ವೈರಲ್ ಆಗಲು ಕಾರಣ ಇಂಗ್ಲೆಂಡ್ ತಂಡವು ಕೇವಲ 68 ರನ್​ಗಳಿಗೆ ಆಲೌಟ್ ಆಗಿರುವುದು. ಹೌದು, ಪ್ರತಿಷ್ಠಿತ ಆ್ಯಶಸ್ ಸರಣಿಯ 3ನೇ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ವಿರುದ್ದ ಇಂಗ್ಲೆಂಡ್ ಕೇವಲ 68 ರನ್​ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಇಂಗ್ಲೆಂಡ್ ತಂಡವನ್ನು ಇನಿಂಗ್ಸ್ ಹಾಗೂ 14 ರನ್​ಗಳ ಅಂತರದಿಂದ ಮಣಿಸಿ ಆಸ್ಟ್ರೇಲಿಯಾ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದೆ.

ಇತ್ತ ಇಂಗ್ಲೆಂಡ್ ತಂಡವು ಕೇವಲ 68 ರನ್​ಗಳಿಗೆ ಆಲೌಟಾದ ಬೆನ್ನಲ್ಲೇ ಆಸ್ಟ್ರೇಲಿಯಾದ ಮಹಿಳಾ ಪತ್ರಕರ್ತೆ ಕೋಲ್ ಅಮಂಡಾ ಬೈಲಿ ಇಂಗ್ಲೆಂಡ್ ಮಾಜಿ ನಾಯಕ ಮೈಕೆಲ್ ವಾನ್ ಅವರ ಹಳೆಯ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದಾರೆ. ಭಾರತ ತಂಡವನ್ನು ಗೇಲಿ ಮಾಡಿದ್ದ ಎರಡು ವರ್ಷಗಳ ಹಿಂದಿನ ಟ್ವೀಟ್​ಗೆ ಉತ್ತರಿಸಿರುವ ಅಮಂಡಾ ಇಂಗ್ಲೆಂಡ್ 68 ರನ್​ಗೆ ಆಲೌಟ್​ ಆಗಿರುವುದನ್ನು ಪ್ರಸ್ತಾಪಿಸಿ ಹೀಗೂ ಆಗುತ್ತೆ ಎಂಬುದು ಈಗ ತಿಳಿಯಿತು ಎಂದು ಮೈಕೆಲ್ ವಾನ್ ಅವರ ಕಾಲೆಳೆದಿದ್ದಾರೆ.

ಇನ್ನೊಂದೆ ಟೀಮ್ ಇಂಡಿಯಾ ಮಾಜಿ ಆಟಗಾರ ವಾಸಿಂ ಜಾಫರ್ ಕೂಡ ಮೈಕೆಲ್ ವಾನ್ ಅವರ ಕಾಲೆಳೆದಿದ್ದು, 68 ರನ್​ಗಳಿಗೆ ಇಂಗ್ಲೆಂಡ್ ಆಲೌಟ್ ಆಗಿರುವುದನ್ನು ಪ್ರಸ್ತಾಪಿಸಿ ವಾನ್ ಅವರ ಹಳೆಯ ಟ್ವೀಟ್​ ಅನ್ನು ಮತ್ತೆ ನೆನಪಿಸಿದ್ದಾರೆ. ಒಟ್ಟಿನಲ್ಲಿ ಪ್ರತಿಷ್ಠಿತ ಆ್ಯಶಸ್ ಸರಣಿಯಲ್ಲಿ ಈ ಬಾರಿ ಇಂಗ್ಲೆಂಡ್ ತಂಡವು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದು, ಸರಣಿಯ ನಿರ್ಣಾಯಕ ಪಂದ್ಯವನ್ನು ಮೂರನೇ ದಿನಕ್ಕೆ ಅಂತ್ಯಗೊಳಿಸಿ ಇಂಗ್ಲೆಂಡ್ ತಂಡವು ಸೋಲೊಪ್ಪಿಸಿಕೊಂಡಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ 3-0 ಅಂತರದಿಂದ ಮುನ್ನಡೆಸಿ ಸಾಧಿಸಿ ಆಸ್ಟ್ರೇಲಿಯಾ ಆಶ್ಯಸ್ ಟ್ರೋಫಿಯನ್ನು ವಶಪಡಿಸಿಕೊಂಡಿದೆ.

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(Australian Journalist Defended India And Trolled Michael Vaughan)

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು