AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಶೂನಲ್ಲಿ ಬಿಯರ್ ಕುಡಿದ ಆಟಗಾರರು: ಆಸ್ಟ್ರೇಲಿಯನ್ನರ ವಿಚಿತ್ರ ಸಂಭ್ರಮಾಚರಣೆ

T20 World Cup 2021 Final: ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್, ನಾಯಕ ಕೇನ್ ವಿಲಿಯಮ್ಸನ್ ಅವರ ಅಮೋಘ 85 ರನ್​ಗಳ ನೆರವಿನಿಂದ 172 ರನ್​ ಪೇರಿಸಿತು.

T20 World Cup: ಶೂನಲ್ಲಿ ಬಿಯರ್ ಕುಡಿದ ಆಟಗಾರರು: ಆಸ್ಟ್ರೇಲಿಯನ್ನರ ವಿಚಿತ್ರ ಸಂಭ್ರಮಾಚರಣೆ
Australian players
TV9 Web
| Edited By: |

Updated on: Nov 15, 2021 | 2:45 PM

Share

ಟಿ20 ವಿಶ್ವಕಪ್​ನಲ್ಲಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಆಸ್ಟ್ರೇಲಿಯಾ (Australia) ತಂಡದ ಸಂಭ್ರಮ ಮುಗಿಲುಮುಟ್ಟಿತ್ತು. ನ್ಯೂಜಿಲೆಂಡ್ (New Zealand) ತಂಡವನ್ನು 8 ವಿಕೆಟ್​ಗಳಿಂದ ಮಣಿಸಿ ಮೊದಲ ಬಾರಿಗೆ ಟಿ20 ಕಿರೀಟ ಮುಡಿಗೇರಿಸಿಕೊಂಡ ಆಸೀಸ್​ ಆಟಗಾರರು ತಡರಾತ್ರಿಯವರೆಗೆ ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಇದೇ ವೇಳೆ ಶೂನಲ್ಲಿ ಬಿಯರ್ ಸುರಿದು ಕುಡಿಯುವ ಮೂಲಕ ಗಮನ ಸೆಳೆದರು. ಸೋಷಿಯಲ್ ಮೀಡಿಯಾದಲ್ಲಿ ಐಸಿಸಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಆಸ್ಟ್ರೇಲಿಯಾ ವಿಕೆಟ್ ಕೀಪರ್ ಬ್ಯಾಟರ್ ಮ್ಯಾಥ್ಯೂ ವೇಡ್, ತನ್ನ ಎಡ ಶೂ ತೆಗೆದು ಅದರಲ್ಲಿ ಬಿಯರ್ ಸುರಿದು ಕುಡಿದಿದ್ದಾರೆ. ಇದರ ಬೆನ್ನಲ್ಲೇ ಮಾರ್ಕಸ್​ ಸ್ಟೊಯಿನಿಸ್ ಕೂಡ ವೇಡ್ ಶೂ ಅನ್ನು ಬಿಯರ್‌ನಿಂದ ತೊಳೆದು, ಬಳಿಕ ಶೂ ಒಳಗೆ ಬಿಯರ್ ಸುರಿದು ಕುಡಿದರು. ಇನ್ನು ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಕೂಡ ಅದೇ ರೀತಿ ಮಾಡಿದರು.

ಸಾಮಾನ್ಯವಾಗಿ ಆಸ್ಟ್ರೇಲಿಯಾದಲ್ಲಿ ಶೂ ನಲ್ಲಿ ಬಿಯರ್ ಸುರಿದು ಕುಡಿಯುವುದು ಸಂಭ್ರಮದ ಒಂದು ಭಾಗ. ಅದರಲ್ಲೂ ಅದೃಷ್ಟದ ಗೆಲುವು ಅಥವಾ ರೋಮಾಂಚನಕಾರಿ ಜಯದ ಬಳಿಕ ಆಟಗಾರರು ಅಥವಾ ಇನ್ನಿತರ ಸೆಲೆಬ್ರಿಟಿಗಳು ಈ ರೀತಿಯಾಗಿ ವಿಭಿನ್ನವಾಗಿ ಸಂಭ್ರಮಿಸುತ್ತಾರೆ. ಅದೇ ಮಾದರಿಯಲ್ಲೇ ಮ್ಯಾಥ್ಯೂ ವೇಡ್ ಕೂಡ ಚೊಚ್ಚಲ ಟಿ20 ವಿಶ್ವಕಪ್​ ಗೆಲುವಿನ ಸಂಭ್ರಮಾಚರಣೆ ಮಾಡಿದ್ದರು. ವೇಡ್​ ಅವರ ನಡೆಯಿಂದ ಸಂತಸಗೊಂಡ ಮಾರ್ಕಸ್ ಸ್ಟೊಯಿನಿಸ್ ಕೂಡ ಶೂ-ಬಿಯರ್ ಸಂಭ್ರಮಕ್ಕೆ ಕಿಚ್ಚು ಹಚ್ಚಿದರು. ಈ ಸಖತ್ ಸಂಭ್ರಮದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದಕ್ಕೂ ಮುನ್ನ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್, ನಾಯಕ ಕೇನ್ ವಿಲಿಯಮ್ಸನ್ ಅವರ ಅಮೋಘ 85 ರನ್​ಗಳ ನೆರವಿನಿಂದ 172 ರನ್​ ಪೇರಿಸಿತು. ಆದರೆ ಆಸ್ಟ್ರೇಲಿಯಾ ಬ್ಯಾಟರುಗಳಾದ ಡೇವಿಡ್ ವಾರ್ನರ್ (53), ಮಿಚೆಲ್ ಮಾರ್ಷ್​ (77) ಅಬ್ಬರಕ್ಕೆ ಅದು ಸುಲಭ ಸವಾಲಾಗಿತ್ತು. ಅದರಂತೆ 18.5 ಓವರ್​ಗಳಲ್ಲಿ 173 ರನ್ ಬಾರಿಸುವ ಮೂಲಕ ಆಸ್ಟ್ರೇಲಿಯಾ ಚೊಚ್ಚಲ ಬಾರಿ ಟಿ20 ವಿಶ್ವಕಪ್​ಗೆ ಮುತ್ತಿಕ್ಕಿತು.

ಇದನ್ನೂ ಓದಿ: T20 World Cup 2021: ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾಗೆ ಸಿಕ್ಕ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: T20 World Cup Winners: 7 ಟಿ20 ವಿಶ್ವಕಪ್​: ಚಾಂಪಿಯನ್​ ಪಟ್ಟಕ್ಕೇರಿದ 6 ತಂಡಗಳು

ಇದನ್ನೂ ಓದಿ:  Sourav Ganguly: ದ್ರಾವಿಡ್ ಅವರ ಮಗ ಕರೆ ಮಾಡಿ ಅಪ್ಪ ತುಂಬಾ ಕಟ್ಟುನಿಟ್ಟು, ನೀವು ಅವರನ್ನು ಕರ್ಕೊಂಡು ಹೋಗಿ ಎಂದರು..!

(Australian players drink from shoe to celebrate T20 World Cup win)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ