AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗಾದಲ್ಲಿ ಟಿ20 ವಿಶ್ವಕಪ್​ನಿಂದ ಆಸ್ಟ್ರೇಲಿಯಾ ಔಟ್..!

T20 World Cup 2026: ಟಿ20 ವಿಶ್ವಕಪ್ 2026 ರಲ್ಲಿ ಆಸ್ಟ್ರೇಲಿಯಾ ತಂಡ ಆಘಾತಕಾರಿ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಆಸೀಸ್ ಪಡೆ ಗ್ರೂಪ್-ಬಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಹೀಗಾಗಿ ಮುಂದಿನ ಹಂತಕ್ಕೇರಲು ಆಸ್ಟ್ರೇಲಿಯಾ ತಂಡ ಎರಡೂ ಪಂದ್ಯಗಳಲ್ಲೂ ಜಯ ಸಾಧಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಹೀಗಾದಲ್ಲಿ ಟಿ20 ವಿಶ್ವಕಪ್​ನಿಂದ ಆಸ್ಟ್ರೇಲಿಯಾ ಔಟ್..!
Australia
ಝಾಹಿರ್ ಯೂಸುಫ್
|

Updated on:Feb 14, 2026 | 9:36 AM

Share

T20 World Cup 2026: ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ಝಿಂಬಾಬ್ವೆ ತಂಡ ಭರ್ಜರಿ ಜಯ ಸಾಧಿಸಿದೆ. ಅದು ಸಹ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು 169 ರನ್​ಗಳು ಮಾತ್ರ.

ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಮ್ಯಾಟ್​ ರೆನ್​ಶಾ 65 ರನ್ ಸಿಡಿಸಿದ್ದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಆಸೀಸ್ ಪಡೆ 19.3 ಓವರ್​ಗಳಲ್ಲಿ 146 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ 23 ರನ್​ಗಳಿಂದ ಆಸ್ಟ್ರೇಲಿಯಾ ಸೋಲೊಪ್ಪಿಕೊಂಡಿದೆ.

ಈ ಸೋಲಿನೊಂದಿಗೆ ಆಸ್ಟ್ರೇಲಿಯಾಗೆ ಸೂಪರ್-8 ಹಂತದ ಹಾದಿಯು ತುಸು ಕಷ್ಟಕರವಾಗಿ ಪರಿಣಮಿಸಿದೆ. ಏಕೆಂದರೆ ಆಸೀಸ್ ಪಡೆಯುವ ಮುಂದಿನ ಹಂತಕ್ಕೇರಲು ಮುಂದಿನ ಎರಡು ಮ್ಯಾಚ್​ಗಳಲ್ಲೂ ಜಯ ಸಾಧಿಸಬೇಕು. ಒಂದು ವೇಳೆ ಇನ್ನೊಂದು ಪಂದ್ಯದಲ್ಲಿ ಸೋತರೆ ಆಸ್ಟ್ರೇಲಿಯಾದ ಲೆಕ್ಕಾಚಾರಗಳೇ ತಲೆ ಕೆಳಗಾಗಲಿದೆ.

  • ಫೆಬ್ರವರಿ 16 ರಂದು ನಡೆಯಲಿರುವ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿದರೆ ಆಸ್ಟ್ರೇಲಿಯಾ ತಂಡದ ಅಂಕ 4 ಕ್ಕೇರಲಿದೆ.
  • ಫೆಬ್ರವರಿ 20 ರಂದು ನಡೆಯಲಿರುವ ಒಮಾನ್ ವಿರುದ್ಧದ ಪಂದ್ಯದಲ್ಲಿ ಗೆಲುವು ದಾಖಲಿಸಿದರೆ 6 ಅಂಕಗಳನ್ನು ಪಡೆಯಲಿದೆ.

ಈ ಎರಡು ಗೆಲುವುಗಳ ಹೊರತಾಗಿಯೂ ಆಸ್ಟ್ರೇಲಿಯಾ ನೇರವಾಗಿ ಸೂಪರ್-8 ಹಂತಕ್ಕೇರುವುದಿಲ್ಲ. ಏಕೆಂದರೆ ಅತ್ತ ಶ್ರೀಲಂಕಾ ಹಾಗೂ ಝಿಂಬಾಬ್ವೆ ತಂಡಗಳು ತಲಾ 4 ಅಂಕಗಳನ್ನು ಹೊಂದಿದೆ. ಈ ಎರಡೂ ತಂಡಗಳಿಗೂ ಇನ್ನೂ 2 ಪಂದ್ಯಗಳಿವೆ. ಹೀಗಾಗಿ ಈ ಟೀಮ್​ಗಳು ಕೂಡ 6 ಅಂಕಗಳನ್ನು ಪಡೆಯಲು ಉತ್ತಮ ಅವಕಾಶವಿದೆ.

ಇಲ್ಲಿ ಆಸ್ಟ್ರೇಲಿಯಾ, ಝಿಂಬಾಬ್ವೆ ಮತ್ತು ಶ್ರೀಲಂಕಾ ತಂಡಗಳು ತಲಾ 6 ಅಂಕಗಳನ್ನು ಪಡೆದರೆ ನೆಟ್​ ರನ್​ ರೇಟ್ ಪರಿಗಣನೆಗೆ ಬರಲಿದೆ. ಹೀಗಾಗಿ ಆಸ್ಟ್ರೇಲಿಯಾ ತಂಡವು ತನ್ನ ಮುಂದಿನ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ದಾಖಲಿಸಿ ನೆಟ್ ರನ್ ರೇಟ್ ಅನ್ನು ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಕೂಡ ಇದೆ.

ಹೀಗಾದಲ್ಲಿ ಆಸ್ಟ್ರೇಲಿಯಾ ಔಟ್:

ಮುಂದಿನ ಎರಡು ಮ್ಯಾಚ್​ಗಳಲ್ಲಿ ಆಸ್ಟ್ರೇಲಿಯಾ ಪಾಲಿಗೆ ಗೆಲುವು ಅನಿವಾರ್ಯ. ಒಂದು ವೇಳೆ ಶ್ರೀಲಂಕಾ ವಿರುದ್ಧ ಸೋತರೆ ಆಸೀಸ್ ಪಡೆ ಟಿ20 ವಿಶ್ವಕಪ್​ನಿಂದ ಹೊರಬೀಳುವುದು ಬಹುತೇಕ ಖಚಿತ. ಏಕೆಂದರೆ ಆಸೀಸ್ ವಿರುದ್ಧ ಗೆದ್ದರೆ ಶ್ರೀಲಂಕಾ 6 ಅಂಕಗಳನ್ನು ಪಡೆಯುವುದಲ್ಲದೇ ತನ್ನ ನೆಟ್ ರನ್ ರೇಟ್​ ಅನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲಿದೆ.

ಅತ್ತ ಸೋಲುವ ಆಸ್ಟ್ರೇಲಿಯಾ ತಂಡದ ನೆಟ್ ರನ್ ರೇಟ್ ಕುಸಿಯಲಿದೆ. ಇದರ ನಡುವೆ ಝಿಂಬಾಬ್ವೆ ತಂಡವು ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ 6 ಅಂಕಗಳೊಂದಿಗೆ ನೆಟ್ ರನ್​ ರೇಟ್​ ಅನ್ನು ವೃದ್ಧಿಸಿಕೊಳ್ಳಲಿದೆ. ಇದರಿಂದ ಕೊನೆಯ ಮ್ಯಾಚ್​ನಲ್ಲಿ ಆಸ್ಟ್ರೇಲಿಯಾ ತಂಡ ಗೆದ್ದರೂ ನೆಟ್ ರನ್​ ರೇಟ್​ನಲ್ಲಿ ಹಿಂದೆ ಉಳಿಯುವ ಸಾಧ್ಯತೆ ಹೆಚ್ಚು.

  • ಶ್ರೀಲಂಕಾ ತಂಡವು ಆಸ್ಟ್ರೇಲಿಯಾವನ್ನು ಸೋಲಿಸಿದರೆ ಟಿ20 ವಿಶ್ವಕಪ್​ನಿಂದ ಹೊರಬೀಳುವುದು ಬಹುತೇಕ ಖಚಿತ.
  • ಝಿಂಬಾಬ್ವೆ ಐರ್ಲೆಂಡ್ ಮತ್ತು ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದರೆ ಆಸ್ಟ್ರೇಲಿಯಾ ತಂಡ ಹೊರಬೀಳುವ ಸಾಧ್ಯತೆ ಹೆಚ್ಚು.
  • ಶ್ರೀಲಂಕಾ ತಂಡ ಆಸ್ಟ್ರೇಲಿಯಾ ವಿರುದ್ಧ ಸೋತು, ಝಿಂಬಾಬ್ವೆ ವಿರುದ್ಧ ಗೆದ್ದರೂ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಅಲಂಕರಿಸಲಿದೆ.
  • ಝಿಂಬಾಬ್ವೆ ತಂಡವು ಶ್ರೀಲಂಕಾ ವಿರುದ್ಧ ಸೋತು, ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಉತ್ತಮ ನೆಟ್​ ರನ್ ರೇಟ್​ನೊಂದಿಗೆ ದ್ವಿತೀಯ ಸ್ಥಾನವನ್ನು ಕಾಯ್ದುಕೊಳ್ಳಲಿದೆ.

ಅಂದರೆ ಆಸ್ಟ್ರೇಲಿಯಾ ತಂಡವು ಸೂಪರ್-8 ಹಂತಕ್ಕೇರಬೇಕಿದ್ದರೆ ಮುಂದಿನ ಎರಡು ಮ್ಯಾಚ್​ಗಳಲ್ಲಿ ಗೆಲ್ಲುವುದರ ಜೊತೆಗೆ ನೆಟ್ ರನ್ ರೇಟ್​ ಅನ್ನು ಹೆಚ್ಚಿಸಿಕೊಳ್ಳಬೇಕಿರುವುದು ಅನಿವಾರ್ಯ. ಇದರಲ್ಲಿ ಒಂದು ಪಂದ್ಯ ಸೋತರೂ ಆಸೀಸ್ ಪಡೆ ಟಿ20 ವಿಶ್ವಕಪ್​ನಿಂದ ಹೊರಬೀಳುವುದು ಬಹುತೇಕ ಖಚಿತವಾಗಲಿದೆ.

ಇದನ್ನೂ ಓದಿ: IND vs PAK: ಮಳೆಯಿಂದ ಪಂದ್ಯ ರದ್ದಾದ್ರೆ ಯಾರಿಗೆ ಲಾಭ?

ಗ್ರೂಪ್-ಬಿ ಪಾಯಿಂಟ್ಸ್ ಟೇಬಲ್ಸ್ ನೆಟ್ ರನ್​ ರೇಟ್​:

  • ಶ್ರೀಲಂಕಾ: +3.125
  • ಝಿಂಬಾಬ್ವೆ: +1.984
  • ಆಸ್ಟ್ರೇಲಿಯಾ: +1.100

ಅಂದರೆ ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಮುಂದಿನ ಪಂದ್ಯಗಳಲ್ಲಿ ಒಂದು ಗೆಲುವು ದಾಖಲಿಸಿದರೆ, ಆಸ್ಟ್ರೇಲಿಯಾ ತಂಡವು ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಲು ಎರಡೂ ಮ್ಯಾಚ್​ಗಳಲ್ಲೂ ಕನಿಷ್ಠ 50 ರನ್​ಗಳ ಅಂತರದಿಂದ ಗೆಲ್ಲಬೇಕಾಗುತ್ತದೆ. ಇಲ್ಲದಿದ್ದರೆ ಮೂರನೇ ಸ್ಥಾನದೊಂದಿಗೆ ಟಿ20 ವಿಶ್ವಕಪ್​ನಿಂದ ಹೊರಬೀಳುವುದು ಬಹುತೇಕ ಖಚಿತ.

Published On - 9:33 am, Sat, 14 February 26

Follow Us
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ