AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾ ಎಡವಟ್ಟು… ಅವೇಶ್ ಖಾನ್​ಗೆ ಬ್ಯಾನ್ ಭೀತಿ..!

Avesh Khan Controversy: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 'ಹೆಲ್ಮೆಟ್' ಸಂಭ್ರಮದ ಮೂಲಕ ದಂಡದ ಶಿಕ್ಷೆಗೆ ಗುರಿಯಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ ವೇಗಿ ಅವೇಶ್ ಖಾನ್ ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಈ ಬಾರಿ ಮಾಡಿಕೊಂಡಿರುವ ಎಡವಟ್ಟಿನ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

ಮಹಾ ಎಡವಟ್ಟು... ಅವೇಶ್ ಖಾನ್​ಗೆ ಬ್ಯಾನ್ ಭೀತಿ..!
Avesh Khan
ಝಾಹಿರ್ ಯೂಸುಫ್
|

Updated on: Apr 07, 2026 | 8:22 PM

Share

IPL 2026: ಲಕ್ನೋ ಸೂಪರ್ ಜೈಂಟ್ಸ್ (LSG) ವೇಗಿ ಅವೇಶ್ ಖಾನ್ ಮತ್ತೊಮ್ಮೆ ತಮ್ಮ ವಿಲಕ್ಷಣ ಸಂಭ್ರಮಾಚರಣೆಯ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ರೋಚಕ ಪಂದ್ಯದಲ್ಲಿ ರಿಷಭ್ ಪಂತ್ ಬಾರಿಸಿದ ವಿನ್ನಿಂಗ್ ಶಾಟ್ ಬೌಂಡರಿ ಗೆರೆ ದಾಟುವ ಮೊದಲೇ, ಹೊರಗಡೆ ನಿಂತಿದ್ದ ಅವೇಶ್ ಖಾನ್ ಬ್ಯಾಟ್‌ನಿಂದ ಚೆಂಡನ್ನು ತಡೆದು ಸಂಭ್ರಮಿಸಿದ್ದು ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಏನಿದು ಘಟನೆ?

ಹೈದರಾಬಾದ್​ನಲ್ಲಿ ನಡೆದ ಐಪಿಎಲ್​ನ 10ನೇ ಪಂದ್ಯದ ಕೊನೆಯ ಎರಡು ಎಸೆತಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 1 ರನ್ ಬೇಕಿದ್ದಾಗ, ಪಂತ್ ಅವರು ಲಾಂಗ್-ಆನ್ ಕಡೆಗೆ ಚೆಂಡನ್ನು ಬಾರಿಸಿದರು. ಮುಂದಿನ ಬ್ಯಾಟರ್ ಆಗಿ ಕ್ರೀಸ್‌ಗೆ ಬರಲು ಪ್ಯಾಡ್ ಧರಿಸಿ ಸಜ್ಜಾಗಿದ್ದ ಅವೇಶ್ ಖಾನ್, ಬೌಂಡರಿ ಗೆರೆಯ ಹೊರಭಾಗದಲ್ಲಿ ನಿಂತಿದ್ದರು.

ಇತ್ತ ರಿಷಭ್ ಪಂತ್ ಬಾರಿಸಿದ ಚೆಂಡು ಬೌಂಡರಿ ಗೆರೆ ದಾಟುವ ಮೊದಲೇ ಉತ್ಸಾಹದಲ್ಲಿ ಓಡಿ ಬಂದ ಅವೇಶ್ ಖಾನ್, ತಮ್ಮ ಬ್ಯಾಟ್‌ನಿಂದ ಚೆಂಡನ್ನು ಮತ್ತೆ ಮೈದಾನದ ಒಳಕ್ಕೆ ಹೊಡೆದು ಸಂಭ್ರಮಿಸಿದರು.

ನಿಯಮ ಏನು ಹೇಳುತ್ತದೆ?

ಕ್ರಿಕೆಟ್‌ನ ನಿಯಮ 41 (ಅನ್ ಫೇರ್ ಪ್ಲೇ) ಮತ್ತು ನಿಯಮ 20.1 (ಡೆಡ್ ಬಾಲ್) ಪ್ರಕಾರ, ಮೈದಾನದ ಹೊರಗಿರುವ ಆಟಗಾರ ಪಂದ್ಯದ ಅವಧಿಯಲ್ಲಿ ಚೆಂಡನ್ನು ಉದ್ದೇಶಪೂರ್ವಕವಾಗಿ ಸ್ಪರ್ಶಿಸಿದರೆ ಅದನ್ನು ‘ಡೆಡ್ ಬಾಲ್’ ಎಂದು ಘೋಷಿಸಬಹುದು. ಅಲ್ಲದೆ, ಎದುರಾಳಿ ತಂಡಕ್ಕೆ 5 ಪೆನಾಲ್ಟಿ ರನ್‌ಗಳನ್ನು ನೀಡುವ ಅವಕಾಶವೂ ಇರುತ್ತದೆ.

ಸನ್ ರೈಸರ್ಸ್ ಹೈದರಾಬಾದ್ ತಂಡವು ಈ ಘಟನೆ ಸೇರಿದಂತೆ ಅಂಪೈರಿಂಗ್ ಕುರಿತಾದ ಇತರ ದೂರುಗಳ ಬಗ್ಗೆ ಬಿಸಿಸಿಐಗೆ ಅಧಿಕೃತವಾಗಿ ಪತ್ರ ಬರೆಯಲು ನಿರ್ಧರಿಸಿದೆ ಎಂದು ವರದಿಯಾಗಿದೆ.

ಒಂದು ವೇಳೆ ಈ ಘಟನೆಯನ್ನು ಮ್ಯಾಚ್ ರೆಫರಿ ಗಂಭೀರವಾಗಿ ಪರಿಗಣಿಸಿದರೆ, ಐಸಿಸಿ ನಿಯಮಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಒಂದು ಪಂದ್ಯದ ನಿಷೇಧ ಹೇರಬಹುದು ಎಂದು ಕೆಲವು ವರದಿಗಳು ಸೂಚಿಸಿವೆ.

ಬಿಸಿಸಿಐ ಇದನ್ನು “ನಡವಳಿಕೆ ಸಂಹಿತೆ” (Code of Conduct) ಉಲ್ಲಂಘನೆ ಎಂದು ಪರಿಗಣಿಸಿದರೆ ಮಾತ್ರ ಈ ಕ್ರಮ ಕೈಗೊಳ್ಳಬಹುದು. ಹೀಗಾಗಿ ಇಲ್ಲಿ ಮ್ಯಾಚ್ ರೆಫರಿಯ ಪರಿಗಣನೆಯೊಂದಿಗೆ, ಬಿಸಿಸಿಐ ತೆಗೆದುಕೊಳ್ಳುವ ಕ್ರಮ ಕೂಡ ಮುಖ್ಯವಾಗುತ್ತದೆ.

ಆದರೆ ಈ ಬಗ್ಗೆ ಸನ್​ರೈಸರ್ಸ್ ಹೈದರಾಬಾದ್ ಆಟಗಾರರು ಯಾವುದೇ ಅಪೀಲ್ ಮಾಡಿರಲಿಲ್ಲ. ಇದಾಗ್ಯೂ ಇದೀಗ ಅವೇಶ್ ಖಾನ್ ಅವರ ಮಹಾ ಎಡವಟ್ಟಿನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ಆಟಗಾರನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅನೇಕರು ಆಗ್ರಹಿಸಿದ್ದಾರೆ.

ಹಳೆಯ ನೆನಪು:

ಈ ಹಿಂದೆ 2023ರಲ್ಲಿ ಆರ್ ಸಿಬಿ ವಿರುದ್ಧ ಗೆದ್ದಾಗ ಅವೇಶ್ ಖಾನ್ ತಮ್ಮ ಹೆಲ್ಮೆಟ್ ಅನ್ನು ನೆಲಕ್ಕೆ ಅಪ್ಪಳಿಸಿ ಸಂಭ್ರಮಿಸಿದ್ದರು. ಆಗ ಅವರಿಗೆ ಪಂದ್ಯದ ಶುಲ್ಕದಲ್ಲಿ ದಂಡ ವಿಧಿಸಲಾಗಿತ್ತು. ಈಗ ಮತ್ತೆ ಇಂತಹದ್ದೇ ಒಂದು ‘ಅನಗತ್ಯ’ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ಇದನ್ನೂ ಓದಿ: PSL 2026: ಡೇವಿಡ್ ವಾರ್ನರ್​ ಬಂಧನ

ಒಟ್ಟಾರೆಯಾಗಿ, ಈ ಘಟನೆಯನ್ನು “ಅನ್ ಫೇರ್ ಪ್ಲೇ” (Unfair Play) ಎಂದು ಪರಿಗಣಿಸಿ ಬಿಸಿಸಿಐ ಕ್ರಮ ಕೈಗೊಳ್ಳುತ್ತದೆಯೇ ಎಂದು ಕಾದು ನೋಡಬೇಕಿದೆ. ಒಂದು ವೇಳೆ ನಿಷೇಧ ಹೇರಲ್ಪಟ್ಟರೆ, ಅವೇಶ್ ಖಾನ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮುಂದಿನ ಪಂದ್ಯದಿಂದ ಹೊರಗುಳಿಯಬೇಕಾಗುತ್ತದೆ.

Follow Us
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!