AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Avi Barot: ಶಾಕಿಂಗ್: ಭಾರತ ಅಂಡರ್-19 ತಂಡದ ಮಾಜಿ ನಾಯಕ, 29 ವರ್ಷದ ಸ್ಟಾರ್ ಬ್ಯಾಟ್ಸ್​ಮನ್ ನಿಧನ

Saurashtra cricketer Avi Barot Death: ಸೌರಾಷ್ಟ್ರ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿದ್ದ ಅವಿ ಬರೊತ್ ಶುಕ್ರವಾರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಇವರಿಗೆ 29 ವರ್ಷ ವಯಸ್ಸಾಗಿತ್ತು.

Avi Barot: ಶಾಕಿಂಗ್: ಭಾರತ ಅಂಡರ್-19 ತಂಡದ ಮಾಜಿ ನಾಯಕ, 29 ವರ್ಷದ ಸ್ಟಾರ್ ಬ್ಯಾಟ್ಸ್​ಮನ್ ನಿಧನ
Avi Barot Death
TV9 Web
| Edited By: |

Updated on: Oct 16, 2021 | 9:54 AM

Share

ಭಾರತ ಅಂಡರ್-19 (India U19) ತಂಡದ ಮಾಜಿ ನಾಯಕ ಮತ್ತು ಸೌರಾಷ್ಟ್ರ ತಂಡದ (Saurashtra Cricket) ಕ್ರಿಕೆಟಿಗ ಅವಿ ಬರೊತ್ (Avi Barot) ಶುಕ್ರವಾರ ಹೃದಯ ಸ್ತಂಭನದಿಂದ (Cardiac Arrest) ನಿಧನರಾಗಿದ್ದಾರೆ. ಇವರಿಗೆ ಕೇವಲ 29 ವರ್ಷ ವಯಸ್ಸಾಗಿದ್ದು, ಅವಿ ನಿಧನಕ್ಕೆ ಸೌರಾಷ್ಟ್ರ ಕ್ರಿಕೆಟ್ ಮಂಡಳಿ, ಬಿಸಿಸಿಐ ಸಂತಾಪ ವ್ಯಕ್ತಪಡಿಸಿದೆ.

ಸೌರಾಷ್ಟ್ರ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿದ್ದ ಇವರು 38 ಪ್ರಥಮ ದರ್ಜೆ ಕ್ರಿಕೆಟ್, 38 ಲಿಸ್ಟ್ ಎ ಪಂದ್ಯ ಮತ್ತು 20 ದೇಶೀಯ ಟಿ20 ಪಂದ್ಯಗಳನ್ನು ಇವರು ಆಡಿದ್ದರು. ಈ ಬಗ್ಗೆ ಸೌರಾಷ್ಟ್ರ ಕ್ರಿಕೆಟ್ ಮಾಹಿತಿ ಹಂಚಿಕೊಂಡಿದ್ದು, “ಈ ಆಘಾತಕಾರಿ ಸುದ್ದಿ ಕೇಳಿ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್​ಗೆ ತುಂಬಾನೆ ಬೇಸರವಾಗಿದೆ. ಸೌರಾಷ್ಟ್ರ ಕ್ರಿಕೆಟ್ ಇವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅಕ್ಟೋಬರ್ 15 ರಂದು ಇವರು ಹೃದಯ ಸ್ತಂಭನದಿಂದ ಕೊನೆಯುಸಿರು ಎಳೆದಿದ್ದಾರೆ. ಇವರಿಗೆ 29 ವರ್ಷ ವಯಸ್ಸಾಗಿತ್ತು” ಎಂದು ಹೇಳಿದೆ.

ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್​ನ ಅಧ್ಯಕ್ಷ ಜಯದೇವ್ ಶಾ, “ಅವಿ ಇನ್ನಿಲ್ಲ ಎಂಬುದು ತುಂಬಾನೆ ಬೇಸರ ತರಿಸಿದೆ. ಅವನೊಬ್ಬ ಗ್ರೇಟ್ ಟೀಮ್​ಮೇಟ್ ಕ್ರಿಕೆಟ್ ಬಗ್ಗೆ ಅತ್ಯುತ್ತಮ ಸ್ಕಿಲ್ ಉಳ್ಳ ಆಟಗಾರನಾಗಿದ್ದ. ಇತ್ತೀಚಿನ ಎಲ್ಲ ದೇಶೀಯ ಕ್ರಿಕೆಟ್​ನಲ್ಲಿ ಇವರು ಅದ್ಭುತ ಪ್ರದರ್ಶನ ತೋರಿದ್ದರು. ಎಲ್ಲರ ಜೊತೆಗೆ ಸ್ನೇಹದಿಂದ ಇರುತ್ತಿದ್ದರು. ಈ ವಿಚಾರ ತಿಳಿದು ನಮಗೆ ನಂಬಲೇ ಸಾಧ್ಯವಾಗುತ್ತಿಲ್ಲ” ಎಂದು ಹೇಳಿದ್ದಾರೆ.

Team India Head Coach: ಟೀಮ್ ಇಂಡಿಯಾ ಪೂರ್ಣಾವಧಿ ಕೋಚ್ ಆಗಲು ರಾಹುಲ್ ದ್ರಾವಿಡ್ ಒಪ್ಪಿಗೆ, 10 ಕೋಟಿ ಸಂಭಾವನೆ: ವರದಿ

MS Dhoni: ಧೋನಿಯ ಪ್ರಕಾರ ಈ ವರ್ಷ ಐಪಿಎಲ್ ಪ್ರಶಸ್ತಿ ಗೆಲ್ಲಲು ಅರ್ಹವಾದ ತಂಡ ಸಿಎಸ್​ಕೆ ಅಲ್ಲವಂತೆ: ಮತ್ಯಾವುದು?

(Avi Barot Death Saurashtra cricketer Avi Barot passed away due to severe cardiac arrest)

Follow Us
Web contact
Web contact

TV9 Kannada

Read More
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ