AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Axar Patel: ಧೋನಿ ರೆಕಾರ್ಡ್ ಪುಡಿಗಟ್ಟಿದ ಅಕ್ಷರ್: ಪಂದ್ಯ ಮುಗಿದ ಬಳಿಕ ಏನು ಹೇಳಿದ್ರು ನೋಡಿ

IND vs WI 2nd ODI: ಅಕ್ಷರ್ ಪಟೇಲ್ ವೆಸ್ಟ್​ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ 35 ಎಸೆತಗಳಲ್ಲಿ 3 ಫೋರ್ ಹಾಗೂ 5 ಸಿಕ್ಸ್ ಸಿಡಿಸಿ ಅಕ್ಷರ್ ಅಜೇಯ 64 ರನ್ ಚಚ್ಚಿದರು. ಈ ಮೂಲಕ ಎಂಎಸ್ ಧೋನಿ (MS Dhoni) ದಾಖಲೆಯನ್ನೂ ಮುರಿದಿದ್ದಾರೆ.

Axar Patel: ಧೋನಿ ರೆಕಾರ್ಡ್ ಪುಡಿಗಟ್ಟಿದ ಅಕ್ಷರ್: ಪಂದ್ಯ ಮುಗಿದ ಬಳಿಕ ಏನು ಹೇಳಿದ್ರು ನೋಡಿ
Axar Patel and MS Dhoni
TV9 Web
| Updated By: Vinay Bhat|

Updated on: Jul 25, 2022 | 9:29 AM

Share

ತನ್ನ 100ನೇ ಪಂದ್ಯದಲ್ಲಿ ಶಾಯ್ ಹೋಪ್ (Shai Hope) ಶತಕ ಹಾಗೂ ನಿಕೋಲಸ್ ಪೂರನ್ (74 ರನ್) ಅವರ ನಾಯಕನ ಆಟದ ನಡುವೆಯೂ ವೆಸ್ಟ್ ಇಂಡೀಸ್ ಭಾರತ ವಿರುದ್ಧದ ಎರಡನೇ ಪಂದ್ಯದಲ್ಲಿ ಸೋಲು ಕಂಡು ಸರಣಿ ಕಳೆದುಕೊಂಡಿದೆ. ಇತ್ತ ಅಕ್ಷರ್ ಪಟೇಲ್ (Axar Patel) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ಕೊನೆಯ ಓವರ್​ನಲ್ಲಿ ರೋಚಕ ಗೆಲುವು ಸಾಧಿಸಿತು. ಕೆರಿಬಿಯನ್ನರು 50 ಓವರ್​ಗಳಲ್ಲಿ 311 ರನ್ ಬಾರಿಸಿದರೆ, ಭಾರತ 49.4 ಓವರ್​ನಲ್ಲಿ 312 ರನ್ ಸಿಡಿಸಿ 2 ವಿಕೆಟ್​ಗಳಿಂದ ಗೆದ್ದು ಬೀಗಿತು. 35 ಎಸೆತಗಳಲ್ಲಿ 3 ಫೋರ್ ಹಾಗೂ 5 ಸಿಕ್ಸ್ ಸಿಡಿಸಿ ಅಕ್ಷರ್ ಅಜೇಯ 64 ರನ್ ಚಚ್ಚಿದರು. ಈ ಮೂಲಕ ವಿಂಡೀಸ್ ವಿರುದ್ಧ ಅತ್ಯಂತ ವೇಗವಾಗಿ ಅರ್ಧಶತಕ ಸಿಡಿಸಿದ ಭಾರತದ ಎರಡನೇ ಬ್ಯಾಟರ್ ಎಂಬ ಸಾಧನೆ ಕೂಡ ಮಾಡಿದರು. ಜೊತೆಗೆ ಎಂಎಸ್ ಧೋನಿ (MS Dhoni) ದಾಖಲೆಯನ್ನೂ ಮುರಿದಿದ್ದಾರೆ.

ಹೌದು, ಕೊನೆಯ ಓವರ್​ನಲ್ಲಿ ಸಿಕ್ಸ್ ಸಿಡಿಸಿ ವಿನ್ನಿಂಗ್ ಶಾಟ್ ಹೊಡೆಯುವ ಮೂಲಕ ಅಕ್ಷರ್ ಪಟೇಲ್ ಎಂಎಸ್ ಧೋನಿ ಅವರ 17 ವರ್ಷದ ಹಳೆದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಚೇಸಿಂಗ್ ಸಮಯದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್ ಈಗ ಅಕ್ಷರ್ ಆಗಿದ್ದಾರೆ.

ಇದನ್ನೂ ಓದಿ
Image
Axar Patel: 35 ಎಸೆತ, 3 ಫೋರ್, 5 ಸಿಕ್ಸರ್: ಅಕ್ಷರ್ ಪಟೇಲ್ ಸ್ಫೋಟಕ ಆಟದ ವಿಡಿಯೋ ಇಲ್ಲಿದೆ ನೋಡಿ
Image
Axar Patel: ಕೊನೆಯ ಓವರ್ ವರೆಗೂ ರೋಚಕ ಕಾದಾಟ: ಸಿಕ್ಸ್ ಸಿಡಿಸಿ ಗೆಲುವು ತಂದುಕೊಟ್ಟ ಅಕ್ಷರ್ ಪಟೇಲ್
Image
CWG 2022: ಸ್ಕ್ವಾಷ್‌ ಸ್ಪರ್ಧೆಯಲ್ಲಿ ಭಾರತದ ಪರ ಪದಕ್ಕಾಗಿ ಸೆಣಸಲಿರುವ 9 ಆಟಗಾರರಿವರು!
Image
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 50 ಸಾವಿರಕ್ಕೂ ಹೆಚ್ಚು ಎಸೆತಗಳನ್ನು ಎಸೆದ ಮೂವರು ದಿಗ್ಗಜ ಬೌಲರ್‌ಗಳು ಯಾರು ಗೊತ್ತಾ?

ಇದಕ್ಕೂ ಮುನ್ನ ಏಳನೇ ಕ್ರಮಾಂಕದಲ್ಲಿ ಧೋನಿ 3 ಸಿಕ್ಸರ್ ಬಾರಿಸಿದ ದಾಖಲೆ ಹೊಂದಿದ್ದರು. 2005 ರಲ್ಲಿ ಜಿಂಬಾಬ್ವೆ ವಿರುದ್ಧ ಎಂಎಸ್​ಡಿ ಈ ಸಾಧನೆ ಮಾಡಿದ್ದರು. ಯೂಸುಫ್ ಪಠಾಣ್ ಕೂಡ ಎರಡು ಬಾರಿ ಏಳನೇ ಕ್ರಮಾಂಕದಲ್ಲಿ ಆಡಿ ಧೋನಿ ಜೊತೆ ಜಂಟಿ ಸ್ಥಾನ ಹಂಚಿಕೊಂಡಿದ್ದರು. ಇದೀಗ ಈ ಎಲ್ಲ ದಾಖಲೆಯನ್ನು ಅಕ್ಷರ್ ಅಳಿಸಿ ಹಾಕಿದ್ದಾರೆ.

ಭಾರತ ಗೆದ್ದ ಬಳಿಕ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ಮಾತನಾಡಿದ ಅಕ್ಷರ್ ಪಟೇಲ್, “ಇದು ನನಗೆ ತುಂಬಾ ವಿಶೇಷವಾದ ಇನ್ನಿಂಗ್ಸ್. ಸಂಕಷ್ಟದ ಸಮಯದಲ್ಲಿ ಬಂದು ನಮ್ಮ ತಂಡ ಸರಣಿ ವಶಪಡಿಸಿಕೊಳ್ಳಲು ಸಹಾಯ ಮಾಡಿದ್ದು ಸಂತಸ ತಂದಿದೆ. ನಾವು ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಕೂಡ ಇದೇರೀತಿ ಆಟ ಆಡಿದ್ದೆವು. ಅದನ್ನು ನೆನಪಿಸಿ ದುಡುಕದೆ ಶಾಂತವಾಗಿ ಬ್ಯಾಟಿಂಗ್ ಮಾಡಿದೆ. ಸುಮಾರು ಐದು ವರ್ಷಗಳ ಬಳಿಕ ನಾನು ಏಕದಿನ ಕ್ರಿಕೆಟ್ ಆಡುತ್ತಿರುವುದು. ನನ್ನ ತಂಡದ ಪರ ಇದೇ ಪ್ರದರ್ಶನವನ್ನು ಮುಂದುವರೆಸುವ ಇಚ್ಚೆ ನನಗಿದೆ,” ಎಂದು ಹೇಳಿದ್ದಾರೆ.

ಇನ್ನು ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಮಾತನಾಡಿ, “ನಮ್ಮ ತಂಡದ ಇಂದು ಅದ್ಭುತ ಪ್ರದರ್ಶನ ನೀಡಿದೆ. ನಮ್ಮ ಆಟಗಾರರು ಎಲ್ಲೂ ಆತ್ಮವಿಶ್ವಾಸವನ್ನು ಕಳೆದುಕೊಳ್ಳಲಿಲ್ಲ. ಅಯ್ಯರ್, ಸಂಜು, ಅಕ್ಷರ್ ಎಲ್ಲರೂ ಅಮೋಘ ಪ್ರದರ್ಶನ ನೀಡಿದ್ದಾರೆ. ಆವೇಶ್ ಖಾನ್ ಕೂಡ ತಮ್ಮ ಚೊಚ್ಚಲ ಪಂದ್ಯದಲ್ಲೇ 11 ರನ್ ಗಳಿಸಿ ಮುಖ್ಯ ಕಾಣಿಕೆ ನೀಡಿದರು. ಐಪಿಎಲ್​ಗೆ ಧನ್ಯವಾದ. ಅಲ್ಲಿ ಈ ರೀತಿಯ ಪರಿಸ್ಥಿತಿ ಬಂದಾಗ ಹೇಗೆ ಆಡಬೇಕು ಎಂದು ಕಲಿತಿದ್ದಾರೆ. ವಿಂಡೀಸ್ ಪರ ಹೋಪ್ ಮತ್ತು ಪೂರನ್ ಚೆನ್ನಾಗಿ ಬ್ಯಾಟಿಂಗ್ ಮಾಡಿದರು. ನಮ್ಮ ಬ್ಯಾಟಿಂಗ್ ಆರಂಭ ಕೊಂಚ ನಿಧಾನವಾಗಿತ್ತು. ಅಯ್ಯರ್ಸ್ಯಾಮ್ಸನ್ ಜೊತೆಯಾಟ ಮುಖ್ಯ ಪಾತ್ರ ವಹಿಸಿತು. 100ನೇ ಪಂದ್ಯದಲ್ಲಿ ಶತಕ ಸಿಡಿಸಿದ ಶಾಯ್ ಹೋಪ್ ಅವರಿಗೆ ಅಭಿನಂದನೆ,” ಎಂದು ಹೇಳಿ ಮಾತು ಮುಗಿಸಿದರು.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ