AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Axar Patel: ಮುಂದಿನ ವರ್ಷಕ್ಕೆ ನಾವು ಪ್ಲ್ಯಾನ್ ರೂಪಿಸುತ್ತೇವೆ..!

IPL 2026 DC vs KKR: ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 142 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಕೇವಲ 14.2 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಕೆಕೆಆರ್ ಪಡೆ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Axar Patel: ಮುಂದಿನ ವರ್ಷಕ್ಕೆ ನಾವು ಪ್ಲ್ಯಾನ್ ರೂಪಿಸುತ್ತೇವೆ..!
Axar Patel
ಝಾಹಿರ್ ಯೂಸುಫ್
|

Updated on: May 09, 2026 | 8:31 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಡೆಲ್ಲಿ ಕ್ಯಾಫಿಟಲ್ಸ್ ತಂಡದ ಸೋಲಿನ ಸರಪಳಿ ಮುಂದುವರೆದಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್​ನ 51ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 142 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 14.2 ಓವರ್​ಗಳಲ್ಲಿ ಚೇಸ್ ಮಾಡಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಸೋಲಿನ ಬಳಿಕ ಮಾತನಾಡಿದ ಡೆಲ್ಲಿ ಕ್ಯಾಫಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್,  “ಕೇವಲ ಎರಡು-ಮೂರು ಓವರ್‌ಗಳಲ್ಲಿ ನಾವು ಐದು ವಿಕೆಟ್‌ಗಳನ್ನು ಕಳೆದುಕೊಂಡೆವು. ಅಲ್ಲಿಯೇ ಪಂದ್ಯ ನಮ್ಮ ಕೈತಪ್ಪಿತು,” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲೂ ಇದೇ ರೀತಿ ಆರಂಭ ಉತ್ತಮವಾಗಿದ್ದರೂ ನಂತರ ಹಠಾತ್ ವಿಕೆಟ್ ಕಳೆದುಕೊಂಡಿದ್ದನ್ನು ಅವರು ನೆನಪಿಸಿಕೊಂಡಿದ್ದಾರೆ.

ಈ ಪಿಚ್ ಸ್ಪಿನ್ನರ್‌ಗಳಿಗೆ ಪೂರಕವಾಗಿದ್ದರೂ, ನಮ್ಮ ಸ್ಪಿನ್ನರ್‌ಗಳು ಅದರ ಲಾಭ ಪಡೆಯುವಲ್ಲಿ ಎಡವಿದರು ಎಂದು ಅಕ್ಷರ್ ಒಪ್ಪಿಕೊಂಡಿದ್ದಾರೆ. ಪಿಚ್ ವರ್ತಿಸಿದ ರೀತಿ ನೋಡಿದರೆ, ಸ್ಪಿನ್ನರ್‌ಗಳು ಸಾಕಷ್ಟು ತಪ್ಪುಗಳನ್ನು ಮಾಡಿದರು ಎನಿಸುತ್ತದೆ. ನಾವು ಇದಕ್ಕಿಂದಲೂ ಉತ್ತಮವಾಗಿ ಬೌಲಿಂಗ್ ಮಾಡಬಹುದಿತ್ತು ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಬ್ಯಾಟಿಂಗ್ ವೈಫಲ್ಯ ಹಾಗೂ ಸತತವಾಗಿ ವಿಕೆಟ್ ಬೀಳುತ್ತಿರುವಾಗ ಅದನ್ನು ಹೇಗೆ ತಡೆಯಬಹುದು ಎಂಬ ಪ್ರಶ್ನೆಗೆ  ಸರಳ ಉತ್ತರ ನೀಡಿದ ಅಕ್ಷರ್. “ಇದಕ್ಕೆ ಯಾವುದೇ ಸಂಕೀರ್ಣ ಪರಿಹಾರವಿಲ್ಲ. ವಿಕೆಟ್‌ಗಳು ಬೀಳುತ್ತಿರುವಾಗ ಒಂದೆರಡು ಓವರ್‌ಗಳ ಕಾಲ ತಾಳ್ಮೆಯಿಂದ ಕ್ರೀಸ್‌ನಲ್ಲಿ ನಿಂತು ಒತ್ತಡವನ್ನು ಹೀರಿಕೊಳ್ಳಬೇಕು. ಆ ಮೈಂಡ್‌ಸೆಟ್ ಅಳವಡಿಸಿಕೊಳ್ಳುವುದು ಬಹಳ ಮುಖ್ಯ,” ಎಂದಿದ್ದಾರೆ.

ಇದನ್ನೂ ಓದಿ: ಕೃನಾಲ್ ಪಾಂಡ್ಯ ಕಾಲರ್ ಪಟ್ಟಿ ಹಿಡಿದ ನಿಕೋಲಸ್ ಪೂರನ್!

ಟೂರ್ನಿಯ ಮುಂದಿನ ಪಂದ್ಯಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅಕ್ಷರ್, ಈ ವರ್ಷದ ತಪ್ಪುಗಳಿಂದ ಕಲಿಯುವುದು ಬಹಳಷ್ಟಿದೆ ಎಂದಿದ್ದಾರೆ. ಮುಂದಿನ ವರ್ಷದ ದೃಷ್ಟಿಯಿಂದ ತಂಡದಲ್ಲಿ ಯಾವ ಬದಲಾವಣೆ ಮಾಡಬಹುದು ಮತ್ತು ಬೆಂಚ್‌ನಲ್ಲಿರುವ ಆಟಗಾರರಿಗೆ ಹೇಗೆ ಅವಕಾಶ ನೀಡಬಹುದು ಎಂಬ ಬಗ್ಗೆ ಮ್ಯಾನೇಜ್‌ಮೆಂಟ್ ಆಲೋಚಿಸಲಿದೆ. ಈ ಮೂಲಕ ಮುಂದಿನ ವರ್ಷಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಪ್ಲ್ಯಾನ್ ರೂಪಿಸುವ ಸುಳಿವು ನೀಡಿದ್ದಾರೆ.

ಒಟ್ಟಾರೆಯಾಗಿ, ಅಕ್ಷರ್ ಅವರ ಮಾತುಗಳು ತಂಡದಲ್ಲಿ ತಾಂತ್ರಿಕ ಬದಲಾವಣೆಗಿಂತ ಹೆಚ್ಚಾಗಿ ಮಾನಸಿಕ ಸ್ಥಿರತೆ ಮತ್ತು ಪಂದ್ಯದ ಸಂದರ್ಭಕ್ಕೆ ತಕ್ಕಂತೆ ಆಡುವ ಜಾಣ್ಮೆಯ ಅಗತ್ಯವಿದೆ ಎಂಬುದನ್ನು ಒತ್ತಿಹೇಳಿವೆ. ಈ ಎಲ್ಲಾ ತಪ್ಪುಗಳನ್ನು ತಿದ್ದಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಂದಿನ ಮ್ಯಾಚ್​ನಲ್ಲಿ ಕಂಬ್ಯಾಕ್ ಮಾಡಲಿದೆಯಾ ಕಾದು ನೋಡಬೇಕಿದೆ.

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?