AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Axar Patel: 35 ಎಸೆತ, 3 ಫೋರ್, 5 ಸಿಕ್ಸರ್: ಅಕ್ಷರ್ ಪಟೇಲ್ ಸ್ಫೋಟಕ ಆಟದ ವಿಡಿಯೋ ಇಲ್ಲಿದೆ ನೋಡಿ

IND vs WI ODI: ಅಕ್ಷರ್ ಪಟೇಲ್ ಕ್ರೀಸ್​ಗೆ ಬಂದಾಗ ಭಾರತದ ಗೆಲುವಿಗೆ 74 ಎಸೆತಗಳಲ್ಲಿ 114 ರನ್​ಗಳು ಬೇಕಾಗಿತ್ತು. ವೆಸ್ಟ್ ಇಂಡೀಸ್ ಇನ್ನೆರಡು ವಿಕೆಟ್ ಕಿತ್ತರೆ ಜಯ ನಮ್ಮದೇ ಎಂದು ನಂಬಿದ್ದರು. ಆದರೆ, ಕೆರಿಬಿಯನ್ ಬೌಲರ್​ಗಳನ್ನು ಅಕ್ಷರಶಃ ಕಾಡಿದ ಅಕ್ಷರ್ ಫೋರ್-ಸಿಕ್ಸರ್​ಗಳ ಮಳೆ ಸುರಿಸಿ ಭಾರತಕ್ಕೆ ಜಯ ತಂದುಕೊಟ್ಟರು.

Axar Patel: 35 ಎಸೆತ, 3 ಫೋರ್, 5 ಸಿಕ್ಸರ್: ಅಕ್ಷರ್ ಪಟೇಲ್ ಸ್ಫೋಟಕ ಆಟದ ವಿಡಿಯೋ ಇಲ್ಲಿದೆ ನೋಡಿ
Axar Patel Batting IND vs WI 2nd ODI
TV9 Web
| Edited By: |

Updated on: Jul 25, 2022 | 8:41 AM

Share

ಭಾರತ ಕ್ರಿಕೆಟ್ ತಂಡದ ಬ್ಯಾಟಿಂಗ್ ಶಕ್ತಿ ಎಷ್ಟಿದೆ ಎಂಬುದು ಕ್ರಿಕೆಟ್ ಜಗತ್ತಿಗೆ ಮತ್ತೊಮ್ಮೆ ಸಾಭೀತಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ 312 ರನ್​ಗಳ ಟಾರ್ಗೆಟ್ ಅನ್ನು ಬೆನ್ನಟ್ಟಿದ ಭಾರತ (IND vs WI 2nd ODI) ಕೊನೆಯ ಓವರ್ ವರೆಗೂ ಛಲ ಬಿಡದೆ ಹೋರಾಡಿ 2 ವಿಕೆಟ್​ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಪಂದ್ಯಗಳಲ್ಲಿ 2-0 ಅಂತರದ ಮುನ್ನಡೆ ಪಡೆದುಕೊಂಡು ಸರಣಿ ವಶಪಡಿಸಕೊಂಡಿದೆ. ಭಾರತದ ಗೆಲುವಿನಲ್ಲಿ ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಹಾಗೂ ಸಂಜು ಸ್ಯಾಮ್ಸನ್ (Sanju Samson) ಹೀಗೆ ಮೂವರು ಬ್ಯಾಟರ್​ಗಳು ಅರ್ಧಶತಕ ಸಿಡಿಸಿ ನೆರವಾದರು. ಅದರಲ್ಲೂ ಅಕ್ಷರ್ ಪಟೇಲ್ (Axar Patel) ಕೊನೆಯ ವರೆಗೂ ನಿಂತು ವಿನ್ನಿಂಗ್ ಶಾಟ್ ಹೊಡಯುವ ಮೂಲಕ ಟೀಮ್ ಇಂಡಿಯಾಕ್ಕೆ ಗೆಲುವು ತಂದಿಟ್ಟರು. ಕೇವಲ 35 ಎಸೆತಗಳಲ್ಲಿ 3 ಫೋರ್ ಹಾಗೂ 5 ಅಮೋಘ ಸಿಕ್ಸ್ ಸಿಡಿಸಿ ಮನಮೋಹಕ ಬ್ಯಾಟಿಂಗ್ ನಡೆಸಿದ ಅಕ್ಷರ್ ಅಜೇಯ 64 ರನ್ ಚಚ್ಚಿದರು.

ಅಕ್ಷರ್ ಪಟೇಲ್ ಕ್ರೀಸ್​ಗೆ ಬಂದಾಗ ಭಾರತದ ಗೆಲುವಿಗೆ 74 ಎಸೆತಗಳಲ್ಲಿ 114 ರನ್​ಗಳ ಅವಶ್ಯತೆಯಿತ್ತು. ಭಾರತಕ್ಕೆ ಗೆಲುವು ದೂರದ ಮಾತಾಗಿದ್ದರೆ ವೆಸ್ಟ್ ಇಂಡೀಸ್ ಇನ್ನೆರಡು ವಿಕೆಟ್ ಕಿತ್ತರೆ ಜಯ ನಮ್ಮದೇ ಎಂದು ನಂಬಿದ್ದರು. ಆದರೆ, ಎಲ್ಲರ ಯೋಜನೆಯನ್ನು ಉಲ್ಟಾ ಮಾಡಿದ್ದು ಅಕ್ಷರ್. ವೆಸ್ಟ್ ಇಂಡೀಸ್ ಬೌಲರ್​ಗಳನ್ನು ಅಕ್ಷರಶಃ ಕಾಡಿದ ಅಕ್ಷರ್ ಫೋರ್, ಸಿಕ್ಸರ್​ಗಳ ಮಳೆ ಸುರಿಸಿದರು. ಈ ವರ್ಷ ಬ್ಯಾಟಿಂಗ್​ನಲ್ಲಿ ಸಾಕಷ್ಟು ಸುಧಾರಣೆ ಕಂಡಿರುವ ಇವರು ಸರಿಯಾದ ಸಮಯದಲ್ಲಿ ತಂಡದ ಗೆಲುವಿಗೆ ಹೋರಾಡಿ ಉಪಯುಕ್ತ ಕಾಣಿಕೆ ನೀಡಿದರು. ಅದರಲ್ಲೂ ಅಕ್ಷರ್ 49.4ನೇ ಓವರ್​ನಲ್ಲಿ ಸಿಕ್ಸ್ ಸಿಡಿಸಿ ವಿನ್ನಿಂಗ್ ಶಾಟ್ ಹೊಡೆದಿದ್ದು ಅದ್ಭುತವಾಗಿತ್ತು. ಇಲ್ಲಿದೆ ನೋಡಿ ಪಟೇಲ್ ಆಟದ ವಿಡಿಯೋ.

ಇದನ್ನೂ ಓದಿ
Image
Axar Patel: ಕೊನೆಯ ಓವರ್ ವರೆಗೂ ರೋಚಕ ಕಾದಾಟ: ಸಿಕ್ಸ್ ಸಿಡಿಸಿ ಗೆಲುವು ತಂದುಕೊಟ್ಟ ಅಕ್ಷರ್ ಪಟೇಲ್
Image
India vs West Indies, 2nd ODI: ಹೋಪ್ ಭರ್ಜರಿ ಶತಕ; ಭಾರತಕ್ಕೆ 312 ರನ್ ಟಾರ್ಗೆಟ್
Image
CWG 2022: ಸ್ಕ್ವಾಷ್‌ ಸ್ಪರ್ಧೆಯಲ್ಲಿ ಭಾರತದ ಪರ ಪದಕ್ಕಾಗಿ ಸೆಣಸಲಿರುವ 9 ಆಟಗಾರರಿವರು!
Image
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 50 ಸಾವಿರಕ್ಕೂ ಹೆಚ್ಚು ಎಸೆತಗಳನ್ನು ಎಸೆದ ಮೂವರು ದಿಗ್ಗಜ ಬೌಲರ್‌ಗಳು ಯಾರು ಗೊತ್ತಾ?

ದ್ವಿತೀಯ ಏಕದಿನ ಪಂದ್ಯದಲ್ಲಿ ಮೊದಲು ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ವೆಸ್ಟ್ ಇಂಡೀಸ್ ತಂಡಕ್ಕೆ ಶಾಯ್​ ಹೋಪ್​ ಮತ್ತು ಕೈಲ್​ ಮೇಯರ್ಸ್​ ಚುರುಕಿನ ಆರಂಭ ನೀಡಿದರು. ಮೊದಲ ವಿಕೆಟ್​ಗೆ ಇವರಿಬ್ಬರು 65 ರನ್​ ಗಳಿಸಿದರು. ಮೇಯರ್ಸ್​ 39 ರನ್​ ಗಳಿಸಿ ಔಟಾದರೆ, ನಂತರದ ಬಂದ ಶಾಮಾರ್ಹ್​ ಬ್ರೂಕ್ಸ್​ 35 ರನ್​ ಮಾಡಿದರು. ಬ್ರೆಂಡೆನ್​ ಕಿಂಗ್​ ಸೊನ್ನೆ ಸುತ್ತಿದ್ದು ತಂಡಕ್ಕೆ ಹಿನ್ನಡೆಯಾಯಿತು.

ಆದರೆ, ಮೂರು ಪ್ರಮುಖ ವಿಕೆಟ್​ ಕಳೆದುಕೊಂಡಿದ್ದ ವೇಳೆ ಮೈದಾನಕ್ಕಿಳಿದ ನಾಯಕ ನಿಕೋಲಸ್​ ಪೂರನ್​ ಅವರು ಹೋಪ್ ಜೊತೆಗೂಡಿ ಭಾರತೀಯ ಬೌಲರ್​ಗಳನ್ನು ದಂಡಿಸಿದರು. 77 ಎಸೆತಗಳಲ್ಲಿ 6 ಸಿಕ್ಸರ್​, 1 ಬೌಂಡರಿ ಬಾರಿಸಿ 74 ರನ್​ ಸಿಡಿಸಿದರು. ಇನ್ನೊಂದೆಡೆ ತಾಳ್ಮೆಯಿಂದಲೇ ದೊಡ್ಡ ಇನಿಂಗ್ಸ್​ ಕಟ್ಟಿದ ಹೋಪ್​ ಆಕರ್ಷಕ ಶತಕ ಬಾರಿಸಿದರು. 3 ಸಿಕ್ಸರ್​, 8 ಬೌಂಡರಿ ಸಮೇತ 115 ರನ್​ ಗಳಿಸಿದರು. ಪರಿಣಾಮ ವೆಸ್ಟ್ ಇಂಡೀಸ್ ನಿಗದಿತ 50 ಓವರ್​ಗಳಲ್ಲಿ 311 ರನ್​ ಗಳಿಸಿತು.

ವಿಂಡೀಸ್ ನೀಡಿದ್ದ 312 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡವು 49.4 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಶ್ರೇಯಸ್ ಅಯ್ಯರ್(63), ಸಂಜು ಸಾಮ್ಸನ್(54) ಹಾಗೂ ಅಕ್ಷರ್ ಪಟೇಲ್ ಅರ್ಧಶತಕ ಸಿಡಿಸುವ ಮೂಲಕ ಭಾರತಕ್ಕೆ ಗೆಲುವು ತಂದಿಟ್ಟರು. ಪಂದ್ಯಶ್ರೇಷ್ಠ ಪ್ರಶಸ್ತಿ ಅಕ್ಷರ್ ಬಾಜಿಕೊಂಡರು. ಅಂತಿಮ ಮೂರನೇ ಏಕದಿನ ಪಂದ್ಯ ಜುಲೈ 27ಕ್ಕೆ ನಡೆಯಲಿದೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?