AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದೋನಿ ಬ್ಯೂಟಿ… ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್

Emerging Asia Cup 2024: ಎಮರ್ಜಿಂಗ್​ ಏಷ್ಯಾಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ ಯುಎಇ ವಿರುದ್ಧ ಗೆಲುವು ದಾಖಲಿಸಿದೆ. ಈ ಜಯದೊಂದಿಗೆ ಭಾರತ ಎ ತಂಡವು ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ20 ಟೂರ್ನಿಯ ಸೆಮಿಫೈನಲ್​ಗೆ ಪ್ರವೇಶಿಸಿದೆ.

ಝಾಹಿರ್ ಯೂಸುಫ್
|

Updated on: Oct 22, 2024 | 12:15 PM

Share

ಒಮಾನ್​ನಲ್ಲಿ ನಡೆಯುತ್ತಿರುವ ಎಮರ್ಜಿಂಗ್​ ಏಷ್ಯಾಕಪ್ ಟಿ20 ಟೂರ್ನಿಯ 8ನೇ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ಆಟಗಾರ ಆಯುಷ್ ಬದೋನಿ ಅತ್ಯಾಕರ್ಷಕ ಡೈವಿಂಗ್ ಕ್ಯಾಚ್ ಹಿಡಿದು ಮಿಂಚಿದ್ದಾರೆ. ಅಲ್ ಎಮಿರಾತ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ಎ ಮತ್ತು ಯುಎಇ ಎ ತಂಡಗಳು ಮುಖಾಮುಖಿಯಾಗಿದ್ದವು.

ಅದರಂತೆ ಮೊದಲು ಬ್ಯಾಟ್ ಮಾಡಿದ ಯುಎಇ ತಂಡವು ಭಾರತೀಯ ಬೌಲರ್​ಗಳ ಸಾಂಘಿಕ ದಾಳಿಯಿಂದಾಗಿ ರನ್​ಗಳಿಸಲು ಪರದಾಡಿದ್ದರು. ಇನ್ನು ರಮಣ್​ದೀಪ್ ಎಸೆದ 15ನೇ ಓವರ್​ನ ಕೊನೆಯ ಎಸೆತದಲ್ಲಿ ಜವಾದುಲ್ಲಾ ಲಾಂಗ್ ​ಆನ್​ನತ್ತ ಬಾರಿಸಿದ್ದರು. ಚೆಂಡು ಇನ್ನೇನು ಬೌಂಡರಿ ಲೈನ್ ದಾಟಲಿದೆ ಅನ್ನುವಷ್ಟರಲ್ಲಿ ಯುವ ಆಟಗಾರ ಆಯುಷ್ ಬದೋನಿ ಓಡಿ ಬಂದು ಅತ್ಯುತ್ತಮವಾಗಿ ಡೈವಿಂಗ್ ಕ್ಯಾಚ್ ಹಿಡಿದರು.

ಈ ಅದ್ಭುತ ಫೀಲ್ಡಿಂಗ್ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕ್ರಿಕೆಟ್​ ಪ್ರೇಮಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಎಇ ಎ ತಂಡವು 16.5 ಓವರ್​ಗಳಲ್ಲಿ 107 ರನ್​ಗಳಿಸಿ ಆಲೌಟ್ ಆಯಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಎ ಪರ ಅಭಿಷೇಕ್ ಶರ್ಮಾ (58) ಸ್ಪೋಟಕ ಅರ್ಧಶತಕ ಬಾರಿಸಿದ್ದರು. ಈ ಮೂಲಕ ಭಾರತ ಎ ತಂಡವು 10.5 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 111 ರನ್​ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Follow Us
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!