AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಪರ ಆಡುತ್ತಿದ್ದ ಮಾಜಿ ಕ್ರಿಕೆಟಿಗ ಬಿ.ವಿಜಯ್​ಕೃಷ್ಣ ನಿಧನ; ವಿಕ್ರಂ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರು

ಅಕ್ಟೋಬರ್​ 12, 1949ರಲ್ಲಿ ಜನಿಸಿದ ಬಿ. ವಿಜಯ್​ಕೃಷ್ಣ ಅವರ ಪೂರ್ಣ ಹೆಸರು ಭರಮಯ್ಯ ವಿಜಯ್​ಕೃಷ್ಣ. ಆದರೆ, ಅವರ ವಿಜಿ ಎಂಬ ಅಡ್ಡಹೆಸರು ಹೆಚ್ಚು ಚಾಲ್ತಿಯಲ್ಲಿತ್ತು.

ಕರ್ನಾಟಕದ ಪರ ಆಡುತ್ತಿದ್ದ ಮಾಜಿ ಕ್ರಿಕೆಟಿಗ ಬಿ.ವಿಜಯ್​ಕೃಷ್ಣ ನಿಧನ; ವಿಕ್ರಂ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರು
ಮಾಜಿ ಕ್ರಿಕೆಟಿಗ ಬಿ.ವಿಜಯ್​ಕೃಷ್ಣ
TV9 Web
| Edited By: |

Updated on:Jun 17, 2021 | 9:59 AM

Share

ಬೆಂಗಳೂರು: ಮಾಜಿ ಕ್ರಿಕೆಟಿಗ, ಕರ್ನಾಟಕ ತಂಡದ ಪರ ಆಡುತ್ತಿದ್ದ ಎಡಗೈ ಬ್ಯಾಟ್ಸ್​ಮನ್​ ಬಿ ವಿಜಯಕೃಷ್ಣ ಇಂದು (ಜೂನ್ 17) ಮುಂಜಾನೆ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯ್​ಕೃಷ್ಣ ಬಹು ಅಂಗಾಂಗ ವೈಫಲ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು. ಇಂದು ಮುಂಜಾನೆ ವೇಳೆಗೆ ತೀವ್ರ ಹೃದಯಾಘಾತ ಸಂಭವಿಸಿ ಸುಮಾರು 5.50ರ ಹೊತ್ತಿದೆ ಕಣ್ಮುಚ್ಚಿದ್ದಾರೆ.

ಲೆಫ್ಟ್​ ಆರ್ಮ್​ ಸ್ಪಿನ್ನರ್ ಹಾಗೂ ಲೆಫ್ಟ್​ ಹ್ಯಾಂಡ್ ಬ್ಯಾಟ್ಸ್​ಮನ್​ ಆಗಿ ಸುಮಾರು 15 ವರ್ಷಗಳ ಆಡಿದ ಅವರು 80 ಪ್ರಮುಖ ಪಂದ್ಯಗಳಿಂದ ಒಟ್ಟು 2000ಕ್ಕೂ ಹೆಚ್ಚು ರನ್​ ಗಳಿಸಿ, 194 ವಿಕೆಟ್ ಪಡೆದಿದ್ದಾರೆ.

ಕರ್ನಾಟಕದ ಪರ ಆಡುತ್ತಿದ್ದ ಕೆ.ನಾಗಭೂಷಣ್ ಅವರ ಪ್ರೋತ್ಸಾಹದಿಂದ ಮೈದಾನಕ್ಕಿಳಿದ ವಿಜಯ್​ಕೃಷ್ಣ ಅತ್ಯುತ್ತಮ ಆಲ್​ರೌಂಡರ್ ಆಗಿ ಪ್ರದರ್ಶನ ನೀಡಿದರು. ನಾಗಭೂಷಣ್ ಅವರ ಸಹಕಾರದೊಂದಿಗೆ ಕಾರ್​ ಶೆಡ್​ನಲ್ಲಿ ಟೆನ್ನಿಸ್​ ಬಾಲ್​ ಮೂಲಕ ಬೌಲಿಂಗ್ ಅಭ್ಯಾಸ ಮಾಡಿಕೊಂಡ ಅವರು 1968-69ನೇ ಸಾಲಿನಲ್ಲಿ ಆಡಿದ ಮೊದಲ ರಣಜಿ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಮೂರು ವಿಕೆಟ್ ಪಡೆದಿದ್ದರು. ಅಲ್ಲದೇ ಅದರ ನಂತರ ಮದ್ರಾಸ್ ವಿರುದ್ಧದ ಪಂದ್ಯದಲ್ಲಿ ಆರು ವಿಕೆಟ್ ಪಡೆದು ಸೈ ಎನ್ನಿಸಿಕೊಂಡಿದ್ದರು.

ಇದನ್ನೂ ಓದಿ: ಕೋಲಾರದ ಲಕ್ಷ್ಮೀ ಖಾಸಗಿ ಆಸ್ಪತ್ರೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕ್ರಿಕೆಟಿಗ ಇರ್ಫಾನ್ ಪಠಾನ್ 

17 ಎಸೆತಗಳಲ್ಲಿ 90 ರನ್! ಈ ಆಂಗ್ಲ ಕ್ರಿಕೆಟಿಗನ ಸಿಕ್ಸರ್​ ಸುನಾಮಿಗೆ ಎದುರಾಳಿ ತಂಡ ಕೊಚ್ಚಿ ಹೋಗಿತ್ತು

Published On - 9:59 am, Thu, 17 June 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್