AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam: ವಿರಾಟ್ ಕೊಹ್ಲಿಯ ವಿಶ್ವದಾಖಲೆ ಮುರಿದ ಬಾಬರ್ ಅಜಾಮ್: ಈ ಸಾಧನೆ ಮಾಡಿದ ಮೊದಲ ಬ್ಯಾಟರ್

PAK vs WI, 1st ODI: ಬಾಬರ್ ಅಜಾಮ್ ಕೇವಲ 107 ಎಸೆತಗಳಲ್ಲಿ 103 ರನ್ ಕಲೆಹಾಕಿದರು. ಈ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಕಳೆದ ಮೂರು ಪಂದ್ಯಗಳಲ್ಲಿ ಸತತವಾಗಿ ಮೂರು ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.

Babar Azam: ವಿರಾಟ್ ಕೊಹ್ಲಿಯ ವಿಶ್ವದಾಖಲೆ ಮುರಿದ ಬಾಬರ್ ಅಜಾಮ್: ಈ ಸಾಧನೆ ಮಾಡಿದ ಮೊದಲ ಬ್ಯಾಟರ್
Babar Azam and Virat Kohli
TV9 Web
| Edited By: |

Updated on: Jun 09, 2022 | 10:36 AM

Share

ಪಾಕಿಸ್ತಾನ ಕ್ರಿಕೆಟ್ ತಂಡ ವೆಸ್ಟ್ ಇಂಡೀಸ್ (Pakistan vs West Indies) ವಿರುದ್ಧ ಏಕದಿನ ಸರಣಿಯನ್ನು ಆಡುತ್ತಿದೆ. ಮುಲ್ತಾನ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. 300ಕ್ಕೂ ಅಧಿಕ ರನ್​​ಗಳ ಟಾರ್ಗೆಟ್ ಇದ್ದರೂ ಪಾಕಿಸ್ತಾನ ನಾಯಕ ಬಾಬರ್ ಅಜಾಮ್ (Babar Azam) ಅವರ ಆಕರ್ಷಕ ಶತಕ ಹಾಗೂ ಅಂತಿಮ ಹಂತದಲ್ಲಿ ಖುಷ್​ದಿಲ್ ಶಾ (Khushdil Shah) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಪಾಕ್ 49.2 ಓವರ್​ನಲ್ಲಿ ಗೆಲುವಿನ ನಗೆ ಬೀರಿತು. ಬಾಬರ್ ಕೇವಲ 107 ಎಸೆತಗಳಲ್ಲಿ 103 ರನ್ ಕಲೆಹಾಕಿದರು. ಈ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಕಳೆದ ಮೂರು ಪಂದ್ಯಗಳಲ್ಲಿ ಸತತವಾಗಿ ಮೂರು ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಬಾಬರ್ ತಮ್ಮ ಹಿಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 114 ರನ್ ಹಾಗೂ ಅಜೇಯ 105 ರನ್ ಗಳಿಸಿದ್ದರು. ಇದೀಗ ವಿಂಡೀಸ್ ವಿರುದ್ಧವೂ ಶತಕ ಬಾರಿಸಿದ್ದಾರೆ.

ಬಾಬರ್ ಏಕದಿನ ಕ್ರಿಕೆಟ್​ನಲ್ಲಿ ಸತತವಾಗಿ ಮೂರು ಶತಕ ಗಳಿಸಿರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ 2016 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧವೇ 120, 123 ಮತ್ತು 117 ರನ್ ಗಳಿಸಿದ್ದರು. ಈ ಮೂಲಕ ಎರಡು ಬಾರಿ ಸತತವಾಗಿ ಮೂರು ಶತಕ ಸಿಡಿಸಿದ ವಿಶ್ವದ ಮೊದಲ ಆಟಗಾರ ಬಾಬರ್ ಅಜಾಮ್ ಆಗಿದ್ದಾರೆ. 87 ಏಕದಿನ ಪಂದ್ಯಗಳಲ್ಲಿ ಇದು ಇವರ 17ನೇ ಏಕದಿನ ಶತಕವಾಗಿದೆ. ಇದರ ಜೊತೆಗೆ ಅತ್ಯಂತ ವೇಗವಾಗಿ 1,000 ರನ್ ಪೂರೈಸಿದ ನಾಯಕನಾಗಿದ್ದಾರೆ. 13 ಪಂದ್ಯಗಳಲ್ಲಿ ಬಾಬರ್ ಈ ಸಾಧನೆ ಮಾಡಿದ್ದಾರೆ. ಕೊಹ್ಲಿ 17 ಪಂದ್ಯಗಳಲ್ಲಿ 1,000 ರನ್ ಪೂರೈಸಿದ್ದರು. ಈ ಮೂಲಕ ವಿರಾಟ್ ದಾಖಲೆಯನ್ನೂ ಅಳಿಸಿ ಹಾಕಿದ್ದಾರೆ.

IND vs SA: ದ್ರಾವಿಡ್​ಗೆ ತಲೆನೋವಾದ ರಾಹುಲ್ ಅಲಭ್ಯತೆ: ಪ್ಲೇಯಿಂಗ್ XI ನಲ್ಲಿ ದೊಡ್ಡ ಬದಲಾವಣೆ

ಇದನ್ನೂ ಓದಿ
Image
IND vs SA: ಇಂದು ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ: ಯಂಗ್ ಇಂಡಿಯಾ ಮೇಲೆ ಎಲ್ಲರ ಕಣ್ಣು
Image
ಸೌತ್​ ಆಫ್ರಿಕಾ ಸರಣಿಯಿಂದ ಕೊನೇ ಕ್ಷಣದಲ್ಲಿ ಹೊರ ನಡೆದ ಕನ್ನಡಿಗ ರಾಹುಲ್​; ಪಂತ್​ಗೆ ನಾಯಕತ್ವ
Image
IND vs SA: ಡಿಕೆ, ಪಾಂಡ್ಯ ರಿ ಎಂಟ್ರಿ: ಹೇಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Image
Ranji Trophy 2022: ಕೈಕೊಟ್ಟ ಬ್ಯಾಟ್ಸ್​ಮನ್​ಗಳು: ರಣಜಿ ಟೂರ್ನಿಯಿಂದ ಕರ್ನಾಟಕ ತಂಡ ಔಟ್

ಈ ಏಕದಿನ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಭರ್ಜರಿ ಬ್ಯಾಟಿಂಗ್ ನಡೆಸಿತು. ಆರಂಭಿಕ ಆಟಗಾರ ಶಾಯ್ ಹೋಪ್ (127 ರನ್) ಅವರ ಭರ್ಜರಿ ಶತಕ ಹಾಗೂ ಶಮ್ರಾ ಬ್ರೂಕ್ (70 ರನ್) ಅವರ ಅರ್ಧ ಶತಕದ ನೆರವಿನಿಂದ ಬೃಹತ್ ಮೊತ್ತ ಗಳಿಸಲು ಸಾಧ್ಯವಾಯಿತು. ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡ ವೆಸ್ಟ್ ಇಂಡೀಸ್ 305 ರನ್‌ಗಳಿಸಿತು. ಪಾಕ್ ಪರ ಹ್ಯಾರಿಸ್ ರೌಫ್ ದುಬಾರಿಯಾದರೂ 4 ವಿಕೆಟ್ ಪಡೆದರು.

ಟಾರ್ಗೆಟ್ ಬೆನ್ನಟ್ಟಿದ ಪಾಕಿಸ್ತಾನ ಮೊದಲ ವಿಕೆಟ್ ಶೀಘ್ರವಾಗಿ ಕಳೆದುಕೊಂಡರೂ ಎರಡನೇ ವಿಕೆಟ್‌ಗೆ ಇಮಾಮ್ ಉಲ್ ಹಕ್ ಹಾಗೂ ಬಾಬರ್ ಅಜಾಮ್ ಶತಕದ ಜೊತೆಯಾಟವಾಡಿದರು. ಇಮಾಮ್ 71 ಎಸೆತಗಳಲ್ಲಿ 65 ರನ್ ಗಳಿಸಿದರು. ನಂತರ ಬಂದ ಮೊಹಮ್ಮದ್ ರಿಜ್ವಾನ್ (59 ರನ್) ಕೂಡ ಅರ್ಧ ಶತಕ ಸಿಡಿಸಿ ಬಾಬರ್ ಜೊತೆ ಉತ್ತಮ ಜೊತೆಯಾಟ ಆಡಿದರು.

ಬಾಬರ್ ಶತಕ ಸಿಡಿಸಿ ಔಟಾದ ಬಳಿಕ ಬಳಿಕ ಅಂತಿಮ ಹಂತದಲ್ಲಿ ಬ್ಯಾಟಿಂಗ್‌ಗೆ ಇಳಿದ ಖುಷ್​ದಿಲ್ ಶಾ ಸ್ಪೋಟಕ ಆಟ ಪ್ರದರ್ಶಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇನ್ನೂ ನಾಲ್ಕು ಎಸೆತಗಳು ಬಾಕಿಯಿರುವಂತೆ ಪಾಕಿಸ್ತಾನ ಈ ಪಂದ್ಯದಲ್ಲಿ ಗೆಲುವು ಸಾಧಿಸಿತು. ಖುಷ್​ದಿಲ್ ಕೇವಲ 23 ಎಸೆತಗಳಲ್ಲಿ  1 ಫೋರ್, 4 ಸಿಕ್ಸರ್ ಸಿಡಿಸಿ ಅಜೇಯ 41 ರನ್ ಚಚ್ಚಿದರು. ವೆಸ್ಟ್ ಇಂಡೀಸ್ ಪರ ಅಲ್ಜೆರಿ ಜೋಸೆಫ್ 2 ವಿಕೆಟ್ ಪಡೆದರು. 5 ವಿಕೆಟ್​ಗಳ ಜಯದೊಂದಿಗೆ ಪಾಕಿಸ್ತಾನ್ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ