AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಚಲಾಯಿಸಿ ನಡು ರಸ್ತೆಯಲ್ಲಿ ದಂಡ ಕಟ್ಟಿದ ಪಾಕ್ ನಾಯಕ ಬಾಬರ್

Babar Azam: ಪಾಕಿಸ್ತಾನ ರಾಷ್ಟ್ರೀಯ ತಂಡದ ನಾಯಕ ಬಾಬರ್ ಆಝಂ ಎರಡೆರಡು ಬಾರಿ ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟಿದ್ದಾರೆ ಎಂದು ವರದಿಯಾಗಿದೆ. ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಹಾಗೂ ಒನ್​ ವೇನಲ್ಲಿ ಕಾರು ಚಲಾಯಿಸಿರುವ ಆರೋಪದಡಿ ಬಾಬರ್​ಗೆ ದಂಡ ಹಾಕಲಾಗಿದೆ.

ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಚಲಾಯಿಸಿ ನಡು ರಸ್ತೆಯಲ್ಲಿ ದಂಡ ಕಟ್ಟಿದ ಪಾಕ್ ನಾಯಕ ಬಾಬರ್
ದಂಡ ಪಾವತಿಸಿದ ಬಾಬರ್ ಆಝಂ
ಪೃಥ್ವಿಶಂಕರ
|

Updated on: Sep 27, 2023 | 1:55 PM

Share

ಪಾಕಿಸ್ತಾನ ರಾಷ್ಟ್ರೀಯ ತಂಡದ ನಾಯಕ ಬಾಬರ್ ಆಝಂ (Babar Azam) ಎರಡೆರಡು ಬಾರಿ ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟಿದ್ದಾರೆ ಎಂದು ವರದಿಯಾಗಿದೆ. ಜಿಯೋ ನ್ಯೂಸ್ ವರದಿಯ ಪ್ರಕಾರ, ಏಷ್ಯಾಕಪ್‌ನಲ್ಲಿ (Asia Cup 2023) ಸೂಪರ್ 4 ಸುತ್ತಿನಲ್ಲೇ ಹೀನಾಯವಾಗಿ ಸೋತು ತವರಿಗೆ ಮರಳಿದ ಪಾಕ್ ಪಡೆಯ ನಾಯಕ ಬಾಬರ್, ಸೆಪ್ಟೆಂಬರ್ 17 ರಂದು ಲಾಹೋರ್‌ನ ಗುಲ್ಬರ್ಗ್ ಪ್ರದೇಶದಲ್ಲಿ ತಮ್ಮ ಐಷಾರಾಮಿ ಕಾರಿನಲ್ಲಿ ಒನ್ ವೇ ನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಇದನ್ನು ಗಮನಿಸಿದ ಸಂಚಾರಿ ಪೊಲೀಸರ್​ ಬಾಬರ್ ಅವರ ಕಾರನ್ನು ಅಡ್ಡಗಟ್ಟಿದಾರೆ. ಬಳಿಕ ಬಾಬರ್ ಬಳಿ ಕಾರಿನ ದಾಖಲೆಗಳು ಮತ್ತು ಡ್ರೈವಿಂಗ್ ಲೈಸೆನ್ಸ್ (Driving License) ಕೆಳಲಾಗಿದೆ. ಆದರೆ ಬಾಬರ್ ಬಳಿ ಡ್ರೈವಿಂಗ್ ಲೈಸೆನ್ಸ್ ಇಲ್ಲದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪೊಲೀಸರು ಸಂಚಾರಿ ನಿಯಮ ಉಲ್ಲಂಘನೆ ನಿಯಮದಡಿಯಲ್ಲಿ ಪಾಕ್ ನಾಯಕನಿಗೆ 2000 ರೂ ದಂಡ ವಿಧಿಸಿದ್ದಾರೆ ಎಂದು ವರದಿಯಾಗಿದೆ.

ಕ್ರಿಕೆಟ್​ ಲೋಕದಲ್ಲಿ ಸಾಕಷ್ಟು ಹೆಸರು ಮಾಡಿರುವ ಬಾಬರ್ ತಮ್ಮ ಬಳಿ ಡ್ರೈವಿಂಗ್ ಲೈಸೆನ್ಸ್ ಇಟ್ಟುಕೊಳ್ಳದೆ ಕಾರನ್ನು ಚಲಾಯಿಸಿ, ಪೊಲೀಸರಿಂದ ದಂಡಕ್ಕೆ ಗುರಿಯಾಗಿರುವ ವಿಚಾರ ಇದೀಗ ಟ್ರೋಲಿಗರ ಬಾಯಿಗೆ ಆಹಾರವಾಗಿದೆ. ಹೀಗಾಗಿ ಸೋಶಿಯಲ್ ಮೀಡಿಯಾದಲ್ಲಿ ಬಾಬರ್ ಅವರನ್ನು ಭಾರಿ ಟ್ರೋಲ್ ಮಾಡಲಾಗುತ್ತಿದೆ.

ಪಾಕ್ ತಂಡದಲ್ಲಿ ಕೋಲಾಹಲ: ಡ್ರೆಸ್ಸಿಂಗ್ ರೂಮ್​ನಲ್ಲಿ ಜಗಳ! ಯಾರಿಗೂ ಹೇಳದೆ ಲಂಕಾದಿಂದ ಹೊರಟ ಬಾಬರ್

ವಿವಾದಗಳಲ್ಲಿ ಬಾಬರ್

ವಾಸ್ತವವಾಗಿ ಕೆಲವು ದಿನಗಳಿಂದ ಪಾಕ್ ನಾಯಕ ಬಾಬರ್​ಗೆ ಯಾವುದು ಅಂದುಕೊಂಡಂತೆ ನಡೆಯುತ್ತಿಲ್ಲ. ಈ ಬಾರಿ ಏಷ್ಯಾಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಏಷ್ಯಾಕಪ್​ಗೆ ಎಂಟ್ರಿಕೊಟ್ಟಿದ್ದ ಪಾಕ್ ಪಡೆ ಸೂಪರ್ 4 ಸುತ್ತಿನಲ್ಲೇ ತನ್ನ ಪ್ರಯಾಣ ಮುಗಿಸಿತ್ತು. ಅಲ್ಲದೆ ಆಟಗಾರರ ಕಳಪೆ ಪ್ರದರ್ಶನಕ್ಕೆ ಅಸಮಾಧಾನ ಹೊರಹಾಕಿದ್ದ ಬಾಬರ್, ಡ್ರೆಸಿಂಗ್ ಕೋಣೆಯಲ್ಲಿ ತಂಡದ ಸಹ ಆಟಗಾರರೊಂದಿಗೆ ವಾಗ್ವಾದ ನಡೆಸಿ ಏಕಾಂಗಿಯಾಗಿ ತವರಿಗೆ ಮರಳಿದ್ದರು ಎಂದು ವರದಿಯಾಗಿತ್ತು. ಹೀಗಾಗಿ ಬಾಬರ್ ನಡೆಯಿಂದ ತಂಡದ ಇತರ ಆಟಗಾರರು ಬೇಸರಗೊಂಡಿದ್ದಾರೆ ಎಂಬು ವದಂತಿಯೂ ಹರಿದಾಡಿತ್ತು. ಆದರೆ ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವದಂತಿಗಳೆಲ್ಲ ಸುಳ್ಳು ಎಂದು ಹೇಳುವ ಮೂಲಕ ಬಾಬರ್, ವದಂತಿಗಳಿಗೆ ತೆರೆ ಎಳೆದಿದ್ದರು.

ಇಂದು ಭಾರತಕ್ಕೆ ಪಾಕ್ ತಂಡ

ವಿಶ್ವಕಪ್ ಸಲುವಾಗಿ ಇಂದು ಪಾಕ್ ತಂಡ ಭಾರತಕ್ಕೆ ಕಾಲಿಡುತ್ತಿದೆ. ಇದೇ ಸೆ. 29 ರಂದು ಬಾಬರ್ ಪಡೆ ನ್ಯೂಜಿಲೆಂಡ್ ವಿರುದ್ಧ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ಹೈದರಾಬಾದ್‌ನಲ್ಲಿ ಆಡಲಿದೆ. ಹೀಗಾಗಿ ಉಭಯ ತಂಡಗಳು ಇಂದು ಹೈದರಾಬಾದ್​ಗೆ ಬಂದಿಳಿಯಲ್ಲಿವೆ. ಕಿವೀಸ್ ತಂಡದ ಕೆಲವು ಆಟಗಾರರು ಈಗಾಗಲೇ ಹೈದರಾಬಾದ್​ಗೆ ಬಂದಿದ್ದಾರೆ. ಉಳಿದ ಆಟಗಾರರು ಇಂದು ಸಂಜೆ ವೇಳೆಗೆ ಹೈದರಾಬಾದ್ ತಲುಪಲಿದ್ದಾರೆ. ಉಳಿದಂತೆ ಪಾಕ್ ತಂಡದ ಆಟಗಾರರು ದುಬೈ ಮೂಲಕ ಇಂದು ಹೈದರಾಬಾದ್​ಗೆ ಬಂದಿಳಿಯಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ