Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಚಲಾಯಿಸಿ ನಡು ರಸ್ತೆಯಲ್ಲಿ ದಂಡ ಕಟ್ಟಿದ ಪಾಕ್ ನಾಯಕ ಬಾಬರ್

Babar Azam: ಪಾಕಿಸ್ತಾನ ರಾಷ್ಟ್ರೀಯ ತಂಡದ ನಾಯಕ ಬಾಬರ್ ಆಝಂ ಎರಡೆರಡು ಬಾರಿ ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟಿದ್ದಾರೆ ಎಂದು ವರದಿಯಾಗಿದೆ. ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಹಾಗೂ ಒನ್​ ವೇನಲ್ಲಿ ಕಾರು ಚಲಾಯಿಸಿರುವ ಆರೋಪದಡಿ ಬಾಬರ್​ಗೆ ದಂಡ ಹಾಕಲಾಗಿದೆ.

ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಚಲಾಯಿಸಿ ನಡು ರಸ್ತೆಯಲ್ಲಿ ದಂಡ ಕಟ್ಟಿದ ಪಾಕ್ ನಾಯಕ ಬಾಬರ್
ದಂಡ ಪಾವತಿಸಿದ ಬಾಬರ್ ಆಝಂ
Follow us
ಪೃಥ್ವಿಶಂಕರ
|

Updated on: Sep 27, 2023 | 1:55 PM

ಪಾಕಿಸ್ತಾನ ರಾಷ್ಟ್ರೀಯ ತಂಡದ ನಾಯಕ ಬಾಬರ್ ಆಝಂ (Babar Azam) ಎರಡೆರಡು ಬಾರಿ ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟಿದ್ದಾರೆ ಎಂದು ವರದಿಯಾಗಿದೆ. ಜಿಯೋ ನ್ಯೂಸ್ ವರದಿಯ ಪ್ರಕಾರ, ಏಷ್ಯಾಕಪ್‌ನಲ್ಲಿ (Asia Cup 2023) ಸೂಪರ್ 4 ಸುತ್ತಿನಲ್ಲೇ ಹೀನಾಯವಾಗಿ ಸೋತು ತವರಿಗೆ ಮರಳಿದ ಪಾಕ್ ಪಡೆಯ ನಾಯಕ ಬಾಬರ್, ಸೆಪ್ಟೆಂಬರ್ 17 ರಂದು ಲಾಹೋರ್‌ನ ಗುಲ್ಬರ್ಗ್ ಪ್ರದೇಶದಲ್ಲಿ ತಮ್ಮ ಐಷಾರಾಮಿ ಕಾರಿನಲ್ಲಿ ಒನ್ ವೇ ನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಇದನ್ನು ಗಮನಿಸಿದ ಸಂಚಾರಿ ಪೊಲೀಸರ್​ ಬಾಬರ್ ಅವರ ಕಾರನ್ನು ಅಡ್ಡಗಟ್ಟಿದಾರೆ. ಬಳಿಕ ಬಾಬರ್ ಬಳಿ ಕಾರಿನ ದಾಖಲೆಗಳು ಮತ್ತು ಡ್ರೈವಿಂಗ್ ಲೈಸೆನ್ಸ್ (Driving License) ಕೆಳಲಾಗಿದೆ. ಆದರೆ ಬಾಬರ್ ಬಳಿ ಡ್ರೈವಿಂಗ್ ಲೈಸೆನ್ಸ್ ಇಲ್ಲದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪೊಲೀಸರು ಸಂಚಾರಿ ನಿಯಮ ಉಲ್ಲಂಘನೆ ನಿಯಮದಡಿಯಲ್ಲಿ ಪಾಕ್ ನಾಯಕನಿಗೆ 2000 ರೂ ದಂಡ ವಿಧಿಸಿದ್ದಾರೆ ಎಂದು ವರದಿಯಾಗಿದೆ.

ಕ್ರಿಕೆಟ್​ ಲೋಕದಲ್ಲಿ ಸಾಕಷ್ಟು ಹೆಸರು ಮಾಡಿರುವ ಬಾಬರ್ ತಮ್ಮ ಬಳಿ ಡ್ರೈವಿಂಗ್ ಲೈಸೆನ್ಸ್ ಇಟ್ಟುಕೊಳ್ಳದೆ ಕಾರನ್ನು ಚಲಾಯಿಸಿ, ಪೊಲೀಸರಿಂದ ದಂಡಕ್ಕೆ ಗುರಿಯಾಗಿರುವ ವಿಚಾರ ಇದೀಗ ಟ್ರೋಲಿಗರ ಬಾಯಿಗೆ ಆಹಾರವಾಗಿದೆ. ಹೀಗಾಗಿ ಸೋಶಿಯಲ್ ಮೀಡಿಯಾದಲ್ಲಿ ಬಾಬರ್ ಅವರನ್ನು ಭಾರಿ ಟ್ರೋಲ್ ಮಾಡಲಾಗುತ್ತಿದೆ.

ಪಾಕ್ ತಂಡದಲ್ಲಿ ಕೋಲಾಹಲ: ಡ್ರೆಸ್ಸಿಂಗ್ ರೂಮ್​ನಲ್ಲಿ ಜಗಳ! ಯಾರಿಗೂ ಹೇಳದೆ ಲಂಕಾದಿಂದ ಹೊರಟ ಬಾಬರ್

ವಿವಾದಗಳಲ್ಲಿ ಬಾಬರ್

ವಾಸ್ತವವಾಗಿ ಕೆಲವು ದಿನಗಳಿಂದ ಪಾಕ್ ನಾಯಕ ಬಾಬರ್​ಗೆ ಯಾವುದು ಅಂದುಕೊಂಡಂತೆ ನಡೆಯುತ್ತಿಲ್ಲ. ಈ ಬಾರಿ ಏಷ್ಯಾಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಏಷ್ಯಾಕಪ್​ಗೆ ಎಂಟ್ರಿಕೊಟ್ಟಿದ್ದ ಪಾಕ್ ಪಡೆ ಸೂಪರ್ 4 ಸುತ್ತಿನಲ್ಲೇ ತನ್ನ ಪ್ರಯಾಣ ಮುಗಿಸಿತ್ತು. ಅಲ್ಲದೆ ಆಟಗಾರರ ಕಳಪೆ ಪ್ರದರ್ಶನಕ್ಕೆ ಅಸಮಾಧಾನ ಹೊರಹಾಕಿದ್ದ ಬಾಬರ್, ಡ್ರೆಸಿಂಗ್ ಕೋಣೆಯಲ್ಲಿ ತಂಡದ ಸಹ ಆಟಗಾರರೊಂದಿಗೆ ವಾಗ್ವಾದ ನಡೆಸಿ ಏಕಾಂಗಿಯಾಗಿ ತವರಿಗೆ ಮರಳಿದ್ದರು ಎಂದು ವರದಿಯಾಗಿತ್ತು. ಹೀಗಾಗಿ ಬಾಬರ್ ನಡೆಯಿಂದ ತಂಡದ ಇತರ ಆಟಗಾರರು ಬೇಸರಗೊಂಡಿದ್ದಾರೆ ಎಂಬು ವದಂತಿಯೂ ಹರಿದಾಡಿತ್ತು. ಆದರೆ ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವದಂತಿಗಳೆಲ್ಲ ಸುಳ್ಳು ಎಂದು ಹೇಳುವ ಮೂಲಕ ಬಾಬರ್, ವದಂತಿಗಳಿಗೆ ತೆರೆ ಎಳೆದಿದ್ದರು.

ಇಂದು ಭಾರತಕ್ಕೆ ಪಾಕ್ ತಂಡ

ವಿಶ್ವಕಪ್ ಸಲುವಾಗಿ ಇಂದು ಪಾಕ್ ತಂಡ ಭಾರತಕ್ಕೆ ಕಾಲಿಡುತ್ತಿದೆ. ಇದೇ ಸೆ. 29 ರಂದು ಬಾಬರ್ ಪಡೆ ನ್ಯೂಜಿಲೆಂಡ್ ವಿರುದ್ಧ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ಹೈದರಾಬಾದ್‌ನಲ್ಲಿ ಆಡಲಿದೆ. ಹೀಗಾಗಿ ಉಭಯ ತಂಡಗಳು ಇಂದು ಹೈದರಾಬಾದ್​ಗೆ ಬಂದಿಳಿಯಲ್ಲಿವೆ. ಕಿವೀಸ್ ತಂಡದ ಕೆಲವು ಆಟಗಾರರು ಈಗಾಗಲೇ ಹೈದರಾಬಾದ್​ಗೆ ಬಂದಿದ್ದಾರೆ. ಉಳಿದ ಆಟಗಾರರು ಇಂದು ಸಂಜೆ ವೇಳೆಗೆ ಹೈದರಾಬಾದ್ ತಲುಪಲಿದ್ದಾರೆ. ಉಳಿದಂತೆ ಪಾಕ್ ತಂಡದ ಆಟಗಾರರು ದುಬೈ ಮೂಲಕ ಇಂದು ಹೈದರಾಬಾದ್​ಗೆ ಬಂದಿಳಿಯಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?