Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಬಾಬರ್: ಸೋತು ಸುಣ್ಣವಾದ ಪಾಕಿಸ್ತಾನ್

New Zealand vs Pakistan: ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​ನಲ್ಲಿ ಪಾಕಿಸ್ತಾನ್ ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 344 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ ಕೇವಲ 271 ರನ್​ಗಳಿಸಿ ಆಲೌಟ್ ಆಗಿದೆ.

8 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಬಾಬರ್: ಸೋತು ಸುಣ್ಣವಾದ ಪಾಕಿಸ್ತಾನ್
Babar Azam
Follow us
ಝಾಹಿರ್ ಯೂಸುಫ್
|

Updated on: Mar 29, 2025 | 12:30 PM

ನ್ಯೂಝಿಲೆಂಡ್ ಅಂಗಳದಲ್ಲಿ ಬಾಬರ್ ಆಝಂ (Babar Azam) ಬ್ಯಾಟ್​ನಿಂದ ಅರ್ಧಶತಕ ಮೂಡಿಬಂದಿದೆ. ಅದು ಕೂಡ ಬರೋಬ್ಬರಿ 8 ವರ್ಷಗಳ ಬಳಿಕ ಎಂಬುದೇ ಅಚ್ಚರಿ. ನೇಪಿಯರ್​ನ ಮೆಕ್​ಲೀನ್ ಪಾರ್ಕ್ ಮೈದಾನದಲ್ಲಿ ನಡೆದ ನ್ಯೂಝಿಲೆಂಡ್ (New Zealand) ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ (Pakistan)  ತಂಡ ಬೌಲಿಂಗ್ ಆಯ್ದುಕೊಂಡಿತು.

ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ವಿಲ್ ಯಂಗ್ (1) ಹಾಗೂ ನಿಕ್ ಕೆಲ್ಲಿ (15) ಬೇಗನೆ ಔಟಾದರು. ಇದರ ಬೆನ್ನಲ್ಲೇ ಹೆನ್ರಿ ಕೋಲ್ಸ್ (11) ಕೂಡ ವಿಕೆಟ್ ಒಪ್ಪಿಸಿದರು.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಈ ಹಂತದಲ್ಲಿ ಕಣಕ್ಕಿಳಿದ ಯುವ ಎಡಗೈ ದಾಂಡಿಗ ಮಾರ್ಕ್​ ಚಾಪ್​ಮನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಡೇರಿಲ್ ಮಿಚೆಲ್ ಜೊತೆಗೂಡಿ ಇನಿಂಗ್ಸ್ ಕಟ್ಟಿದ ಚಾಪ್​ಮನ್ 111 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 132 ರನ್​ ಬಾರಿಸಿದರು.

ಇನ್ನು ಡೇರಿಲ್ ಮಿಚೆಲ್ 76 ರನ್ ಸಿಡಿಸಿದರೆ, ಮುಹಮ್ಮದ್ ಅಬ್ಬಾಸ್ 26 ಎಸೆತಗಳಲ್ಲಿ 52 ರನ್ ಚಚ್ಚಿದರು. ಈ ಮೂಲಕ ನ್ಯೂಝಿಲೆಂಡ್ ತಂಡ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 344 ರನ್ ಕಲೆಹಾಕಿತು.

ಪಾಕಿಸ್ತಾನ್ ತಂಡಕ್ಕೆ 345 ರನ್​ಗಳ ಗುರಿ:

345 ರನ್​ಗಳ ಗುರಿ ಪಡೆದ ಪಾಕಿಸ್ತಾನ್ ತಂಡವು ಉತ್ತಮ ಆರಂಭ ಪಡೆದಿತ್ತು. ಮೊದಲ ವಿಕೆಟ್​ಗೆ 89 ರನ್​ಗಳ ಜೊತೆಯಾಟವಾಡಿದ ಬಳಿಕ ಉಸ್ಮಾನ್ ಖಾನ್ (39) ಔಟಾದರು. ಇದರ ಬೆನ್ನಲ್ಲೇ ಅಬ್ದುಲ್ಲಾ ಶಫೀಕ್ (36) ಕೂಡ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಕಣಕ್ಕಿಳಿದ ಬಾಬರ್ ಆಝಂ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. ಕಿವೀಸ್ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಬಾಬರ್ 65 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

8 ವರ್ಷಗಳ ಬಳಿಕ ಹಾಫ್ ಸೆಂಚುರಿ:

ಇದು ಏಕದಿನ ಕ್ರಿಕೆಟ್​ನಲ್ಲಿ ಬಾಬರ್ ಆಝಂ ಅವರ 36ನೇ ಅರ್ಧಶತಕ. ಅಲ್ಲದೆ ನ್ಯೂಝಿಲೆಂಡ್ ವಿರುದ್ಧದ 10ನೇ ಹಾಫ್ ಸೆಂಚುರಿ. ಆದರೆ 2016 ರಿಂದ ಬಾಬರ್ ಆಝಂ ನ್ಯೂಝಿಲೆಂಡ್​ನಲ್ಲಿ ಒಂದೇ ಒಂದು ಅರ್ಧಶತಕ ಬಾರಿಸಿರಲಿಲ್ಲ ಎಂಬುದೇ ಅಚ್ಚರಿ.

ಇದೀಗ ಬರೋಬ್ಬರಿ 8 ವರ್ಷಗಳ ಬಳಿಕ ಕಿವೀಸ್ ಅಂಗಳದಲ್ಲಿ ಅರ್ಧಶತಕ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ 83 ಎಸೆತಗಳನ್ನು ಎದುರಿಸಿದ ಬಾಬರ್ 3 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 78 ರನ್ ಬಾರಿಸಿದರು.

ಬಾಬರ್ ಆಝಂ ಔಟ್ ವಿಡಿಯೋ:

ಈ ಅರ್ಧಶತಕದ ಹೊರತಾಗಿಯೂ ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋಲನುಭವಿಸಿದೆ. 40 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 253 ರನ್ ಕಲೆಹಾಕಿದ್ದ ಪಾಕ್ ಪಡೆ ದಿಢೀರ್ ಕುಸಿತಕ್ಕೊಳಗಾಗಿ 44.1 ಓವರ್​ಗಳಲ್ಲಿ 271 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 73 ರನ್​ಗಳ ಹೀನಾಯ ಸೋಲನುಭವಿಸಿದೆ.

ನ್ಯೂಝಿಲೆಂಡ್ ಪ್ಲೇಯಿಂಗ್ 11: ನಿಕ್ ಕೆಲ್ಲಿ , ವಿಲ್ ಯಂಗ್ , ಹೆನ್ರಿ ನಿಕೋಲ್ಸ್ , ಮಾರ್ಕ್ ಚಾಪ್​ಮನ್ , ಡೇರಿಲ್ ಮಿಚೆಲ್ , ಮೈಕೆಲ್ ಬ್ರೇಸ್‌ವೆಲ್ (ನಾಯಕ) , ಮುಹಮ್ಮದ್ ಅಬ್ಬಾಸ್ , ಮಿಚೆಲ್ ಹೇ (ವಿಕೆಟ್ ಕೀಪರ್) , ನಾಥನ್ ಸ್ಮಿತ್ , ಜಾಕೋಬ್ ಡಫಿ , ವಿಲಿಯಂ ಒರೂಕ್.

ಇದನ್ನೂ ಓದಿ: 2 ವರ್ಷ ಬ್ಯಾನ್… CSKಯನ್ನು ಗೇಲಿ ಮಾಡಿದ್ರಾ ವಿರಾಟ್ ಕೊಹ್ಲಿ?

ಪಾಕಿಸ್ತಾನ್ ಪ್ಲೇಯಿಂಗ್ 11: ಅಬ್ದುಲ್ಲಾ ಶಫೀಕ್ , ಉಸ್ಮಾನ್ ಖಾನ್ , ಬಾಬರ್ ಅಝಂ , ಮೊಹಮ್ಮದ್ ರಿಝ್ವಾನ್ (ನಾಯಕ) , ಸಲ್ಮಾನ್ ಅಘಾ , ತಯ್ಯಬ್ ತಾಹಿರ್ , ಇರ್ಫಾನ್ ಖಾನ್ , ನಸೀಮ್ ಶಾ , ಹ್ಯಾರಿಸ್ ರೌಫ್ , ಮೊಹಮ್ಮದ್ ಅಲಿ , ಅಕಿಫ್ ಜಾವೇದ್.

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ