ತನ್ನದೇ ತಂಡದ ಆಟಗಾರನಿಗೆ ಬೈದಾ ಬಾಬರ್ ಅಜಮ್: ಕಣ್ಣೀರಿಟ್ಟ ಪಾಕ್ ಆಟಗಾರರು

Pakistan Cricketers Crying, PAK vs SL Asia Cup: ಏಷ್ಯಾಕಪ್ ಸೂಪರ್ 4 ಪಂದ್ಯದ ಶ್ರೀಲಂಕಾದ ಬ್ಯಾಟಿಂಗ್ ಇನ್ನಿಂಗ್ಸ್‌ನ ಸಮಯದಲ್ಲಿ, ಪಾಕಿಸ್ತಾನವು ಅನೇಕ ಕ್ಯಾಚ್‌ಗಳನ್ನು ಕೈಬಿಟ್ಟಿತು. ಇದು ಬಾಬರ್ ಅಜಮ್​ಗೆ ಸಿಟ್ಟು ತರಿಸಿ ಮೈದಾನದಲ್ಲೇ ಆಟಗಾರನ ಮೇಲೆ ರೇಗಾಡಿದರು. ಸೋತ ಬಳಿಕ ಪಾಕಿಸ್ತಾನದ ಕೆಲ ಆಟಗಾರರು ಕಣ್ಣೀರಿಟ್ಟ ಘಟನೆ ಕೂಡ ನಡೆಯಿತು.

ತನ್ನದೇ ತಂಡದ ಆಟಗಾರನಿಗೆ ಬೈದಾ ಬಾಬರ್ ಅಜಮ್: ಕಣ್ಣೀರಿಟ್ಟ ಪಾಕ್ ಆಟಗಾರರು
PAK vs SL Asia Cup 2023
Follow us
|

Updated on: Sep 15, 2023 | 11:57 AM

ಏಷ್ಯಾಕಪ್ 2023 ಟೂರ್ನಿಯಿಂದ ಪಾಕಿಸ್ತಾನ ಕ್ರಿಕೆಟ್ ತಂಡ ಹೊರಬಿದ್ದಿದೆ. ಗುರುವಾರ ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ (Pakistan vs Sri Lanka) ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಪಾಕಿಸ್ತಾನ ಎರಡು ವಿಕೆಟ್​ಗಳ ಆಘಾತಕಾರಿ ಸೋಲು ಅನುಭವಿಸಿತು. ಸೂಪರ್-4 ನಲ್ಲಿ ಭಾರತ ವಿರುದ್ಧ ಸೋಲು ಅನುಭವಿಸಿದ ಬಳಿಕ ಬಾಬರ್ ಪಡೆಗೆ ಲಂಕಾ ವಿರುದ್ಧದ ಪಂದ್ಯ ಗೆಲ್ಲಲೇ ಬೇಕಿತ್ತು. ಆದರೆ, ಅಂತಿಮ ಹಂತದಲ್ಲಿ ಫೀಲ್ಡಿಂಗ್​ನಲ್ಲಿ ಮಾಡಿದ ಎಡವಟ್ಟು ಸೋಲಿಗೆ ಪ್ರಮುಖ ಕಾರಣವಾಯಿತು.

ಈ ಪಂದ್ಯದಲ್ಲಿ, ಮೊಹಮ್ಮದ್ ರಿಜ್ವಾನ್ ಮತ್ತು ಇಫ್ತಿಕರ್ ಅಹ್ಮದ್ ಹೊರತುಪಡಿಸಿ ಇತರೆ ಬ್ಯಾಟರ್‌ಗಳು ಉತ್ತಮ ಪ್ರದರ್ಶನ ನೀಡಲು ವಿಫಲರಾದರು. ಬೌಲರ್‌ಗಳು ಸಹ ನಿರಾಶಾದಾಯಕ ಪ್ರದರ್ಶನವನ್ನು ತೋರಿದರು. ಇದರ ಜೊತೆಗೆ ಕಳಪೆ ಫೀಲ್ಡಿಂಗ್ ಕೂಡ ತಂಡ ಸೋಲಲು ಕಾರಣವಾಯಿತು. ಶ್ರೀಲಂಕಾದ ಬ್ಯಾಟಿಂಗ್ ಇನ್ನಿಂಗ್ಸ್‌ನ ಸಮಯದಲ್ಲಿ, ಪಾಕಿಸ್ತಾನವು ಅನೇಕ ಕ್ಯಾಚ್‌ಗಳನ್ನು ಕೈಬಿಟ್ಟಿತು ಮತ್ತು ಓವರ್‌ಥ್ರೋಗಳಲ್ಲಿ ಕೆಲವು ರನ್‌ಗಳನ್ನು ನೀಡಿತು. ಇದು ನಾಯಕನಿಗೆ ಸಿಟ್ಟು ತರಿಸಿ ಮೈದಾನದಲ್ಲೇ ಆಟಗಾರನ ಮೇಲೆ ರೇಗಾಡಿದರು.

ಇದನ್ನೂ ಓದಿ
Image
ಬಾಂಗ್ಲಾ ವಿರುದ್ಧದ ಇಂದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
Image
ಕೊನೆಯ 1 ಎಸೆತದಲ್ಲಿ 2 ರನ್: ಲಂಕಾ ರೋಚಕ ಜಯ ಸಾಧಿಸಿದ ವಿಡಿಯೋ ನೋಡಿ
Image
ಏಷ್ಯಾಕಪ್​ನಲ್ಲಿಂದು ಭಾರತ-ಬಾಂಗ್ಲಾದೇಶ ಮುಖಾಮುಖಿ
Image
Asia Cup 2023: ಭಾರತ vs ಶ್ರೀಲಂಕಾ ನಡುವೆ ಫೈನಲ್ ಫೈಟ್

ಟೀಮ್ ಇಂಡಿಯಾದ ಬ್ಯಾಟಿಂಗ್ ಶಕ್ತಿ ಕನ್ನಡಿಗ, ಟ್ರಾಫಿಕ್ ಪೊಲೀಸ್, ಡ್ರೈವರ್..!

ಇಲ್ಲಿದೆ ನೋಡಿ ಬಾಬರ್ ಅಜಮ್ ಕೋಪಗೊಂಡ ವಿಡಿಯೋ:

ಶ್ರೀಲಂಕಾ ಗೆಲುವಿಗೆ ಕೊನೆಯ ಓವರ್​ನಲ್ಲಿ 8 ರನ್ ಬೇಕಾಯಿತು. ಬೌಲಿಂಗ್ ಮಾಡಿದ್ದು ಝಮಾನ್ ಖಾನ್. ಕೊನೆಯ ಎಸೆತದಲ್ಲಿ 2 ರನ್ ಬೇಕಿದ್ದಾಗ ಅದನ್ನೂ ತಡೆಯಲು ಪಾಕಿಸ್ತಾನಕ್ಕೆ ಸಾಧ್ಯವಾಗಲಿಲ್ಲ. ಸುಲಭವಾಗಿ ಡಬಲ್ ತೆಗೆದುಕೊಂಡು ಲಂಕಾ ಜಯ ಸಾಧಿಸಿತು. ಈ ಸಂದರ್ಭ ಪಾಕಿಸ್ತಾನ ಆಟಗಾರರು ಬೇಸರಗೊಂಡರು. ಕೆಲ ಪ್ಲೇಯರ್ಸ್ ಮೈದಾನದಲ್ಲೇ ಕಣ್ಣೀರಿಟ್ಟರು.

ಸೋತ ನಂತರ ಬೇಸರಗೊಂಡ ಪಾಕಿಸ್ತಾನ ಆಟಗಾರರು:

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ನಿಗದಿತ 42 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 252 ರನ್ ಕಲೆಹಾಕಿತು. ಶಫಿಕ್ 69 ಎಸೆತಗಳಲ್ಲಿ 52 ರನ್ ಗಳಿಸಿದರು. ರಿಝ್ವಾನ್ 73 ಎಸೆತಗಳಲ್ಲಿ ಅಜೇಯ 86 ರನ್ ಸಿಡಿಸಿದರು. ಡಕ್ವರ್ತ್ ಲುಯಿಸ್ ನಿಯಮದ ಪ್ರಕಾರ, ಲಂಕಾಕ್ಕೆ ಗೆಲ್ಲಲು 42 ಓವರ್​ಗಳಲ್ಲಿ 252 ರನ್​ಗಳ ಟಾರ್ಗೆಟ್ ನೀಡಲಾಯಿತು. ಕುಸಲ್ ಮೆಂಡಿಸ್ 87 ಎಸೆತಗಳಲ್ಲಿ 91 ರನ್ ಸಿಡಿಸಿ ತಂಡದ ಜಯಕ್ಕೆ ಹೋರಾಡಿದರು. ಸದೀರಾ 51 ಎಸೆತಗಳಲ್ಲಿ 48 ಬಾರಿಸಿದರು. ಕೊನೆಯ ವರೆಗೂ ಬ್ಯಾಟಿಂಗ್ ಮಾಡಿದ ಚರಿತಾ ಅಸಲಂಕ 47 ಎಸೆತಗಳಲ್ಲಿ ಅಜೇಯ 49 ರನ್ ಗಳಿಸಿ ಗೆಲುವು ತಂದುಕೊಟ್ಟರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು