AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನದೇ ತಂಡದ ಆಟಗಾರನಿಗೆ ಬೈದಾ ಬಾಬರ್ ಅಜಮ್: ಕಣ್ಣೀರಿಟ್ಟ ಪಾಕ್ ಆಟಗಾರರು

Pakistan Cricketers Crying, PAK vs SL Asia Cup: ಏಷ್ಯಾಕಪ್ ಸೂಪರ್ 4 ಪಂದ್ಯದ ಶ್ರೀಲಂಕಾದ ಬ್ಯಾಟಿಂಗ್ ಇನ್ನಿಂಗ್ಸ್‌ನ ಸಮಯದಲ್ಲಿ, ಪಾಕಿಸ್ತಾನವು ಅನೇಕ ಕ್ಯಾಚ್‌ಗಳನ್ನು ಕೈಬಿಟ್ಟಿತು. ಇದು ಬಾಬರ್ ಅಜಮ್​ಗೆ ಸಿಟ್ಟು ತರಿಸಿ ಮೈದಾನದಲ್ಲೇ ಆಟಗಾರನ ಮೇಲೆ ರೇಗಾಡಿದರು. ಸೋತ ಬಳಿಕ ಪಾಕಿಸ್ತಾನದ ಕೆಲ ಆಟಗಾರರು ಕಣ್ಣೀರಿಟ್ಟ ಘಟನೆ ಕೂಡ ನಡೆಯಿತು.

ತನ್ನದೇ ತಂಡದ ಆಟಗಾರನಿಗೆ ಬೈದಾ ಬಾಬರ್ ಅಜಮ್: ಕಣ್ಣೀರಿಟ್ಟ ಪಾಕ್ ಆಟಗಾರರು
PAK vs SL Asia Cup 2023
Follow us
Vinay Bhat
|

Updated on: Sep 15, 2023 | 11:57 AM

ಏಷ್ಯಾಕಪ್ 2023 ಟೂರ್ನಿಯಿಂದ ಪಾಕಿಸ್ತಾನ ಕ್ರಿಕೆಟ್ ತಂಡ ಹೊರಬಿದ್ದಿದೆ. ಗುರುವಾರ ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ (Pakistan vs Sri Lanka) ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಪಾಕಿಸ್ತಾನ ಎರಡು ವಿಕೆಟ್​ಗಳ ಆಘಾತಕಾರಿ ಸೋಲು ಅನುಭವಿಸಿತು. ಸೂಪರ್-4 ನಲ್ಲಿ ಭಾರತ ವಿರುದ್ಧ ಸೋಲು ಅನುಭವಿಸಿದ ಬಳಿಕ ಬಾಬರ್ ಪಡೆಗೆ ಲಂಕಾ ವಿರುದ್ಧದ ಪಂದ್ಯ ಗೆಲ್ಲಲೇ ಬೇಕಿತ್ತು. ಆದರೆ, ಅಂತಿಮ ಹಂತದಲ್ಲಿ ಫೀಲ್ಡಿಂಗ್​ನಲ್ಲಿ ಮಾಡಿದ ಎಡವಟ್ಟು ಸೋಲಿಗೆ ಪ್ರಮುಖ ಕಾರಣವಾಯಿತು.

ಈ ಪಂದ್ಯದಲ್ಲಿ, ಮೊಹಮ್ಮದ್ ರಿಜ್ವಾನ್ ಮತ್ತು ಇಫ್ತಿಕರ್ ಅಹ್ಮದ್ ಹೊರತುಪಡಿಸಿ ಇತರೆ ಬ್ಯಾಟರ್‌ಗಳು ಉತ್ತಮ ಪ್ರದರ್ಶನ ನೀಡಲು ವಿಫಲರಾದರು. ಬೌಲರ್‌ಗಳು ಸಹ ನಿರಾಶಾದಾಯಕ ಪ್ರದರ್ಶನವನ್ನು ತೋರಿದರು. ಇದರ ಜೊತೆಗೆ ಕಳಪೆ ಫೀಲ್ಡಿಂಗ್ ಕೂಡ ತಂಡ ಸೋಲಲು ಕಾರಣವಾಯಿತು. ಶ್ರೀಲಂಕಾದ ಬ್ಯಾಟಿಂಗ್ ಇನ್ನಿಂಗ್ಸ್‌ನ ಸಮಯದಲ್ಲಿ, ಪಾಕಿಸ್ತಾನವು ಅನೇಕ ಕ್ಯಾಚ್‌ಗಳನ್ನು ಕೈಬಿಟ್ಟಿತು ಮತ್ತು ಓವರ್‌ಥ್ರೋಗಳಲ್ಲಿ ಕೆಲವು ರನ್‌ಗಳನ್ನು ನೀಡಿತು. ಇದು ನಾಯಕನಿಗೆ ಸಿಟ್ಟು ತರಿಸಿ ಮೈದಾನದಲ್ಲೇ ಆಟಗಾರನ ಮೇಲೆ ರೇಗಾಡಿದರು.

ಇದನ್ನೂ ಓದಿ
Image
ಬಾಂಗ್ಲಾ ವಿರುದ್ಧದ ಇಂದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
Image
ಕೊನೆಯ 1 ಎಸೆತದಲ್ಲಿ 2 ರನ್: ಲಂಕಾ ರೋಚಕ ಜಯ ಸಾಧಿಸಿದ ವಿಡಿಯೋ ನೋಡಿ
Image
ಏಷ್ಯಾಕಪ್​ನಲ್ಲಿಂದು ಭಾರತ-ಬಾಂಗ್ಲಾದೇಶ ಮುಖಾಮುಖಿ
Image
Asia Cup 2023: ಭಾರತ vs ಶ್ರೀಲಂಕಾ ನಡುವೆ ಫೈನಲ್ ಫೈಟ್

ಟೀಮ್ ಇಂಡಿಯಾದ ಬ್ಯಾಟಿಂಗ್ ಶಕ್ತಿ ಕನ್ನಡಿಗ, ಟ್ರಾಫಿಕ್ ಪೊಲೀಸ್, ಡ್ರೈವರ್..!

ಇಲ್ಲಿದೆ ನೋಡಿ ಬಾಬರ್ ಅಜಮ್ ಕೋಪಗೊಂಡ ವಿಡಿಯೋ:

ಶ್ರೀಲಂಕಾ ಗೆಲುವಿಗೆ ಕೊನೆಯ ಓವರ್​ನಲ್ಲಿ 8 ರನ್ ಬೇಕಾಯಿತು. ಬೌಲಿಂಗ್ ಮಾಡಿದ್ದು ಝಮಾನ್ ಖಾನ್. ಕೊನೆಯ ಎಸೆತದಲ್ಲಿ 2 ರನ್ ಬೇಕಿದ್ದಾಗ ಅದನ್ನೂ ತಡೆಯಲು ಪಾಕಿಸ್ತಾನಕ್ಕೆ ಸಾಧ್ಯವಾಗಲಿಲ್ಲ. ಸುಲಭವಾಗಿ ಡಬಲ್ ತೆಗೆದುಕೊಂಡು ಲಂಕಾ ಜಯ ಸಾಧಿಸಿತು. ಈ ಸಂದರ್ಭ ಪಾಕಿಸ್ತಾನ ಆಟಗಾರರು ಬೇಸರಗೊಂಡರು. ಕೆಲ ಪ್ಲೇಯರ್ಸ್ ಮೈದಾನದಲ್ಲೇ ಕಣ್ಣೀರಿಟ್ಟರು.

ಸೋತ ನಂತರ ಬೇಸರಗೊಂಡ ಪಾಕಿಸ್ತಾನ ಆಟಗಾರರು:

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ನಿಗದಿತ 42 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 252 ರನ್ ಕಲೆಹಾಕಿತು. ಶಫಿಕ್ 69 ಎಸೆತಗಳಲ್ಲಿ 52 ರನ್ ಗಳಿಸಿದರು. ರಿಝ್ವಾನ್ 73 ಎಸೆತಗಳಲ್ಲಿ ಅಜೇಯ 86 ರನ್ ಸಿಡಿಸಿದರು. ಡಕ್ವರ್ತ್ ಲುಯಿಸ್ ನಿಯಮದ ಪ್ರಕಾರ, ಲಂಕಾಕ್ಕೆ ಗೆಲ್ಲಲು 42 ಓವರ್​ಗಳಲ್ಲಿ 252 ರನ್​ಗಳ ಟಾರ್ಗೆಟ್ ನೀಡಲಾಯಿತು. ಕುಸಲ್ ಮೆಂಡಿಸ್ 87 ಎಸೆತಗಳಲ್ಲಿ 91 ರನ್ ಸಿಡಿಸಿ ತಂಡದ ಜಯಕ್ಕೆ ಹೋರಾಡಿದರು. ಸದೀರಾ 51 ಎಸೆತಗಳಲ್ಲಿ 48 ಬಾರಿಸಿದರು. ಕೊನೆಯ ವರೆಗೂ ಬ್ಯಾಟಿಂಗ್ ಮಾಡಿದ ಚರಿತಾ ಅಸಲಂಕ 47 ಎಸೆತಗಳಲ್ಲಿ ಅಜೇಯ 49 ರನ್ ಗಳಿಸಿ ಗೆಲುವು ತಂದುಕೊಟ್ಟರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ