AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇತನ ಕಡಿತ… ಟಿ20 ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ್ ಸ್ಟಾರ್ ಆಟಗಾರರು

ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಪಾಕಿಸ್ತಾನ್ ತಂಡ ಎಲ್ಲಾ ಪಂದ್ಯಗಳಲ್ಲೂ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿದ್ದ ಪಾಕ್ ತಂಡಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಅದರಂತೆ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಬಾಬರ್ ಆಝಂ, ಮೊಹಮ್ಮದ್ ರಿಝ್ವಾನ್ ಹಾಗೂ ಯುವ ವೇಗಿ ನಸೀಮ್ ಶಾ ಅವರನ್ನು ಕೈ ಬಿಡಲಾಗಿತ್ತು. ಇದೀಗ ಈ ಆಟಗಾರರು ದೇಶೀಯ ಟೂರ್ನಿ ಆಡಲು ನಿರಾಕರಿಸಿದ್ದಾರೆ.

ವೇತನ ಕಡಿತ... ಟಿ20 ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ್ ಸ್ಟಾರ್ ಆಟಗಾರರು
Pakistan Team
ಝಾಹಿರ್ ಯೂಸುಫ್
|

Updated on: Mar 18, 2025 | 7:54 AM

Share

ಪಾಕಿಸ್ತಾನ್ ತಂಡದ ಸ್ಟಾರ್ ಆಟಗಾರರಾದ ಬಾಬರ್ ಆಝಂ, ಮೊಹಮ್ಮದ್ ರಿಝ್ವಾನ್ ಹಾಗೂ ನಸೀಮ್ ಶಾ ಮುಂಬರುವ ನ್ಯಾಷನಲ್​ ಟಿ20 ಚಾಂಪಿಯನ್​ಶಿಪ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಪಾಕಿಸ್ತಾನದ ದೇಶೀಯ ಟಿ20 ಟೂರ್ನಿಯಾಗಿರುವ ಈ ಪಂದ್ಯಾವಳಿಯಿಂದ ಪ್ರಮುಖ ಆಟಗಾರರು ಹೊರಗುಳಿಯಲು ಮುಖ್ಯ ಕಾರಣ ವೇತನ ಕಡಿತ ಎಂದು ತಿಳಿದು ಬಂದಿದೆ.

ಕೆಲ ದಿನಗಳ ಹಿಂದೆಯಷ್ಟೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ತನ್ನ ದೇಶೀಯ ಟೂರ್ನಿ ನ್ಯಾಷನಲ್ ಕಪ್​ನಲ್ಲಿ ಕಣಕ್ಕಿಳಿಯುವ ಆಟಗಾರರ ವೇತನವನ್ನು ಶೇ. 75 ರಷ್ಟು ಕಡಿತ ಮಾಡಿದೆ. ಈ ಹಿಂದೆ ಆಟಗಾರರಿಗೆ ಪಂದ್ಯ ಶುಲ್ಕವಾಗಿ 40,000 ರೂ. (PKR) ನೀಡಲಾಗುತ್ತಿತ್ತು.

ಆದರೆ ಈ ಬಾರಿಯಿಂದ ಈ ಟೂರ್ನಿಯಲ್ಲಿ ಕಣಕ್ಕಿಳಿಯುವ ಆಟಗಾರರಿಗೆ 10,000 ರೂ. ಪಂದ್ಯ ಶುಲ್ಕ ನೀಡಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಈ ನಿರ್ಧಾರದ ಬೆನ್ನಲ್ಲೇ ಬಾಬರ್ ಆಝಂ, ಮೊಹಮ್ಮದ್ ರಿಝ್ವಾನ್ ಹಾಗೂ ನಸೀಮ್ ಶಾ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ನ್ಯೂಝಿಲೆಂಡ್‌ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಿಂದ ಈ ಮೂವರನ್ನು ಕೈ ಬಿಡಲಾಗಿತ್ತು. ಹೀಗಾಗಿ ಬಾಬರ್, ರಿಝ್ವಾನ್ ಹಾಗೂ ನಸೀಮ್ ಶಾ ದೇಶೀಯ ಟಿ20 ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.

ಆದರೀಗ ರಾಷ್ಟ್ರೀಯ ತಂಡದಿಂದ ಹೊರಬಿದ್ದರೂ ಈ ಮೂವರು ಆಟಗಾರರು ನ್ಯಾಷನಲ್​ ಟಿ20 ಚಾಂಪಿಯನ್​ಶಿಪ್ ಆಡಲು ಹಿಂದೇಟು ಹಾಕಿರುವುದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಚಿಂತೆ ಹೆಚ್ಚಿಸಿದೆ.

ಇನ್ನು ಈ ಬಾರಿಯ ನ್ಯಾಷನಲ್ ಟಿ20 ಚಾಂಪಿಯನ್​ಶಿಪ್ ಟೂರ್ನಿಯು ಫೈಸಲಾಬಾದ್, ಲಾಹೋರ್ ಮತ್ತು ಮುಲ್ತಾನ್ ನಗರಗಳಲ್ಲಿ ನಡೆಯಲಿದ್ದು, ಒಟ್ಟು 39 ಪಂದ್ಯಗಳನ್ನು ಆಡಲಾಗುತ್ತದೆ. ಅಲ್ಲದೆ ಈ ಟೂರ್ನಿಯ ಫೈನಲ್ ಪಂದ್ಯವು ಮಾರ್ಚ್ 27 ರಂದು ಫೈಸಲಾಬಾದ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ: IPL 2025: 8 ಆಟಗಾರರು ಎಂಟ್ರಿ: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್

ಇತ್ತ ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯಲಿರುವ ಆಟಗಾರರ ವೇತನ ಕಡಿತಗೊಳಿಸಿರುವ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ, ಮುಂಬರುವ ದಿನಗಳಲ್ಲಿ ರಾಷ್ಟ್ರೀಯ ತಂಡದ ಆಟಗಾರರ ವೇತನಕ್ಕೂ ಕತ್ತರಿ ಹಾಕುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಕಾರವಾರದ ಕಡಲ ತೀರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜಲಾಂತರ್ಗಾಮಿ ಯಾನ
ಕಾರವಾರದ ಕಡಲ ತೀರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜಲಾಂತರ್ಗಾಮಿ ಯಾನ
ಕುಚಿಕು ಫ್ರೆಂಡ್ಸ್; ಕೋತಿಯ ಜೊತೆಗಿನ ನಾಯಿಗಳ ಗೆಳೆತನ ನೋಡಿ!
ಕುಚಿಕು ಫ್ರೆಂಡ್ಸ್; ಕೋತಿಯ ಜೊತೆಗಿನ ನಾಯಿಗಳ ಗೆಳೆತನ ನೋಡಿ!
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ