AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಬರ್ ಶ್ರೇಷ್ಠ ಬ್ಯಾಟ್ಸ್‌ಮನ್’; ಕೊಹ್ಲಿ ಹೇಳಿಕೆಯ ಹಳೆಯ ವಿಡಿಯೋ ವೈರಲ್

Virat Kohli: ವಾಸ್ತವವಾಗಿ ಕಳೆದ ವರ್ಷ ನಡೆದ ಏಷ್ಯಾಕಪ್ ಸಮಯದಲ್ಲಿ ಚಿತ್ರಿಕರಿಸಲಾಗಿದ್ದ ಈ ವಿಡಿಯೋ ಇದೀಗ ಭಾರಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ತಮ್ಮ ಹಾಗೂ ಪಾಕಿಸ್ತಾನ ತಂಡದ ಹಾಲಿ ನಾಯಕ ಬಾಬರ್ ಆಜಮ್ ನಡುವಿನ ಮೊದಲ ಭೇಟಿಯ ಬಗ್ಗೆ ಮಾತನಾಡಿದ್ದಾರೆ.

‘ಬಾಬರ್ ಶ್ರೇಷ್ಠ ಬ್ಯಾಟ್ಸ್‌ಮನ್’; ಕೊಹ್ಲಿ ಹೇಳಿಕೆಯ ಹಳೆಯ ವಿಡಿಯೋ ವೈರಲ್
ಬಾಬರ್ ಆಜಮ್, ವಿರಾಟ್ ಕೊಹ್ಲಿ
ಪೃಥ್ವಿಶಂಕರ
|

Updated on:Aug 13, 2023 | 10:23 AM

Share

ಪ್ರಸ್ತುತ ವಿಶ್ವ ಕ್ರಿಕೆಟ್​ನ ಶ್ರೇಷ್ಠ ಬ್ಯಾಟ್ಸ್​ಮನ್ ಎಂದೊಡನೆ ನಮಗೆಲ್ಲರಿಗೂ ಥಟ್ಟನೇ ನೆನಪಾಗುವುದು ರನ್ ಮೆಷಿನ್ ವಿರಾಟ್ ಕೊಹ್ಲಿ (Virat Kohli). ಇದು ಟೀಂ ಇಂಡಿಯಾ (Team India) ಅಭಿಮಾನಿಗಳ ಅಭಿಪ್ರಾಯ ಮಾತ್ರವಲ್ಲ, ವಿಶ್ವ ಕ್ರಿಕೆಟ್​ನ ಅಸಂಖ್ಯಾತ ಅಭಿಮಾನಿಗಳ ಮಾತಾಗಿದೆ. ಆದರೆ ಇದೇ ಪ್ರಶ್ನೆಯನ್ನು ವಿರಾಟ್ ಕೊಹ್ಲಿಗೆ ಕೇಳಿದರೆ, ಅವರ ಬಾಯಿಯಿಂದ ಯಾವ ಉತ್ತರ ಬರುತ್ತದೆ ಎಂಬುದನ್ನು ಕೇಳುವುದು ಎಲ್ಲ ಅಭಿಮಾನಿಗಳಿಗೆ ಇಷ್ಟದ ವಿಷಯವಾಗಿದೆ. ಇದೀಗ ಏಷ್ಯಾಕಪ್ (Asia Cup 2023) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಕಿಂಗ್ ಕೊಹ್ಲಿಯ ಹಳೆಯ ವಿಡಿಯೋ ಒಂದು ಸಾಕಷ್ಟು ವೈರಲ್ ಆಗುತ್ತಿದ್ದು, ಈ ವಿಡಿಯೋದಲ್ಲಿ ಪ್ರಸ್ತುತ ಕ್ರಿಕೆಟ್​ನ ಬೆಸ್ಟ್ ಬ್ಯಾಟ್ಸ್​ಮನ್ ಬಗ್ಗೆ ಕೊಹ್ಲಿ ಮುಕ್ತವಾಗಿ ಮಾತನಾಡಿದ್ದಾರೆ.

ವಾಸ್ತವವಾಗಿ ಕಳೆದ ವರ್ಷ ನಡೆದ ಏಷ್ಯಾಕಪ್ ಸಮಯದಲ್ಲಿ ಚಿತ್ರಿಕರಿಸಲಾಗಿದ್ದ ಈ ವಿಡಿಯೋ ಇದೀಗ ಭಾರಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ತಮ್ಮ ಹಾಗೂ ಪಾಕಿಸ್ತಾನ ತಂಡದ ಹಾಲಿ ನಾಯಕ ಬಾಬರ್ ಆಜಮ್ ನಡುವಿನ ಮೊದಲ ಭೇಟಿಯ ಬಗ್ಗೆ ಮಾತನಾಡಿದ್ದಾರೆ.

IND vs WI: ಅಭಿಮಾನಿ ನೀಡಿದ ವಿಶೇಷ ಉಡುಗೊರೆಗೆ ಮನಸೋತ ಕೊಹ್ಲಿ; ವಿಡಿಯೋ ನೋಡಿ

ಬಾಬರ್ ಶ್ರೇಷ್ಠ ಬ್ಯಾಟ್ಸ್‌ಮನ್ – ವಿರಾಟ್

ಕಳೆದ ವರ್ಷದ ಏಷ್ಯಾಕಪ್ ಆರಂಭಕ್ಕೂ ಮುನ್ನ ಸ್ಟಾರ್ ಸ್ಪೋಟ್ರ್ಸ್​ ಕೊಹ್ಲಿಯೊಂದಿಗೆ ವಿಶೇಷ ಸಂವಾದ ನಡೆಸಿತ್ತು. ಈ ಸಂವಾದದಲ್ಲಿ ಬಾಬರ್ ಅವರೊಂದಿಗಿನ ಮೊದಲ ಭೇಟಿಯನ್ನು ಕೊಹ್ಲಿ ನೆನಪಿಸಿಕೊಂಡಿದ್ದರು. 2019ರಲ್ಲಿ ನಾನು ಮೊದಲ ಬಾರಿಗೆ ಬಾಬರ್ ಆಜಂ ಅವರನ್ನು ಭೇಟಿಯಾಗಿದ್ದೆ. ಭಾರತ-ಪಾಕ್ ಪಂದ್ಯದ ನಂತರ ನನ್ನ ಬಳಿ ಬಂದ ಮತ್ತೊಬ್ಬ ಪಾಕ್ ಆಟಗಾರ ಇಮಾದ್ ವಾಸಿಮ್, ಬಾಬರ್ ಆಜಮ್ ನಿಮ್ಮನ್ನು ಭೇಟಿಯಾಗಲು ಬಯಸುತ್ತಿದ್ದಾರೆ ಎಂದರು. ವಾಸ್ತವವಾಗಿ ಇಮಾದ್ ವಾಸಿಮ್​ಗೂ ನನಗೂ ಬಹಳ ಹಿಂದಿನಿಂದಲೂ ಪರಿಚಯವಿದೆ. ಅಂಡರ್ 19 ವಿಶ್ವಕಪ್​ನಿಂದಲೂ ಇಮಾದ್ ಪರಿಚಯ ನನಗಿದೆ.

ಇಮಾದ್ ಹೇಳಿದ ಬಳಿಕ ನಾನು ಬಾಬರ್ ಅವರನ್ನು ಭೇಟಿಯಾದೆ. ಆಗ ನಾವಿಬ್ಬರೂ ಕ್ರಿಕೆಟ್ ಬಗ್ಗೆ ಸಾಕಷ್ಟು ಚರ್ಚಿಸಿದ್ದೇವು. ನಾನು ಇಂದಿಗೂ ಅವರ ಬಗ್ಗೆ ಗೌರವವನ್ನು ಹೊಂದಿದ್ದೇನೆ. ಕ್ರಿಕೆಟ್‌ನ ಪ್ರತಿಯೊಂದು ಸ್ವರೂಪದಲ್ಲೂ ಬಾಬರ್ ವಿಶ್ವದ ಅಗ್ರ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎಂಬುದರಲ್ಲಿ ಸಂದೇಹವಿಲ್ಲ. ಅವರು ಸ್ಥಿರವಾಗಿ ಬ್ಯಾಟಿಂಗ್‌ ಮಾಡುವುದನ್ನು ನೋಡಿ ಖುಷಿಯಾಗಿದೆ ಎಂದಿದ್ದರು. ಕೊಹ್ಲಿ, ಬಾಬರ್ ಬಗ್ಗೆ ಮೆಚ್ಚುಗೆ ಮಾತನಾಡಿರುವ ಹಳೆಯ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.

ಮತ್ತೊಮ್ಮೆ ಮುಖಾಮುಖಿ

ಇನ್ನು ಬಾಬರ್ ಭೇಟಿಗೂ ಮುನ್ನ ನಡೆದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಕೊಹ್ಲಿ ಪಾಕಿಸ್ತಾನದ ವಿರುದ್ಧ 77 ಎಸೆತಗಳಲ್ಲಿ 65 ರನ್ ಬಾರಿಸಿದ್ದರು. ಇದರಿಂದಾಗಿ ಭಾರತ 89 ರನ್‌ಗಳಿಂದ ಸುಲಭವಾಗಿ ಗೆಲುವು ಸಾಧಿಸಿತ್ತು. ಪ್ರಸ್ತುತ ವಿರಾಟ್ ಕೊಹ್ಲಿ ತಮ್ಮ ಅಂತರಾಷ್ಟ್ರೀಯ ವೃತ್ತಿ ಜೀವನದಲ್ಲಿ ಒಟ್ಟು 76 ಶತಕಗಳನ್ನು ಸಿಡಿಸಿದ್ದರೆ, ಅದೇ ಸಮಯದಲ್ಲಿ, ಬಾಬರ್ ಅಜಮ್ 30 ಶತಕಗಳನ್ನು ಗಳಿಸುವ ಮೂಲಕ ಕ್ರಿಕೆಟ್ ಜಗತ್ತಿನಲ್ಲಿ ಛಾಪು ಮೂಡಿಸಿದ್ದಾರೆ. ಇದೀಗ ಆಗಸ್ಟ್ 30 ರಿಂದ ಆರಂಭವಾಗಲಿರುವ ಏಷ್ಯಾಕಪ್ ಹಾಗೂ ವಿಶ್ವಕಪ್ ಪಂದ್ಯಾವಳಿಯಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಹೈವೋಲ್ಟೇಜ್ ಕದನದಲ್ಲಿ ಈ ಇಬ್ಬರು ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:20 am, Sun, 13 August 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?