AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ತಂಡದಿಂದ ತ್ರಿಮೂರ್ತಿಗಳಿಗೆ ಗೇಟ್ ಪಾಸ್..!

Pakistan vs New Zealand: ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯು ಮಾರ್ಚ್ 16 ರಿಂದ ಶುರುವಾಗಲಿದೆ. ನ್ಯೂಝಿಲೆಂಡ್​ನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಪಾಕಿಸ್ತಾನ್ ತಂಡ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ. ಈ ಸರಣಿಗೂ ಮುನ್ನ ಪಾಕ್ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ಪಿಸಿಬಿ ನಿರ್ಧರಿಸಿದೆ.

ಪಾಕಿಸ್ತಾನ್ ತಂಡದಿಂದ ತ್ರಿಮೂರ್ತಿಗಳಿಗೆ ಗೇಟ್ ಪಾಸ್..!
Pakistan Players
ಝಾಹಿರ್ ಯೂಸುಫ್
|

Updated on: Mar 02, 2025 | 7:53 AM

Share

ಚಾಂಪಿಯನ್ಸ್ ಟ್ರೋಫಿಯಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ ಪಾಕಿಸ್ತಾನ್ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ಪಾಕ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಈ ಮೇಜರ್ ಸರ್ಜರಿಯಿಂದಾಗಿ ಬಾಬರ್ ಆಝಂ, ಶಾಹೀನ್ ಶಾ ಅಫ್ರಿದಿ ಹಾಗೂ ನಸೀಮ್ ಶಾ ತಂಡದಿಂದ ಹೊರಬೀಳಲಿದ್ದಾರೆ ಎಂದು ವರದಿಯಾಗಿದೆ. ಈ ಮೂವರು ಆಟಗಾರರು ಕಳೆದ ಕೆಲ ವರ್ಷಗಳಿಂದ ಪಾಕಿಸ್ತಾನ್ ತಂಡದ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದಾಗ್ಯೂ ತ್ರಿಮೂರ್ತಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರುತ್ತಿಲ್ಲ. ಹೀಗಾಗಿ ಮುಂಬರುವ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಬಾಬರ್, ಶಾಹೀನ್ ಹಾಗೂ ನಸೀಮ್ ಅವರನ್ನು ಕೈ ಬಿಡಲು ಪಿಸಿಬಿ ಅಧಿಕಾರಿಗಳು ಚರ್ಚಿಸಿದ್ದಾರೆ.

ಇನ್ನು ಈ ಮೂವರೊಂದಿಗೆ ಮತ್ತೋರ್ವ ವೇಗಿ ಹ್ಯಾರಿಸ್ ರೌಫ್ ಹೆಸರು ಕೂಡ ಕಾಣಿಸಿಕೊಂಡಿದೆ. ಇದಾಗ್ಯೂ ಅವರನ್ನು ತಂಡದಿಂದ ಕೈ ಬಿಡಲಿದ್ದಾರಾ ಅಥವಾ ಉಳಿಸಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಸ್ಪಷ್ಟತೆ ಹೊರಬಿದ್ದಿಲ್ಲ. ಹೀಗಾಗಿ ರೌಫ್ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಇದನ್ನೂ ಓದಿ
Image
ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರು: ಅಭ್ಯಾಸಕ್ಕೆ ಇಬ್ಬರು ಆಟಗಾರರು ಗೈರು..!
Image
ICC ODI Rankings: ಟಾಪ್-10 ನಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು
Image
ಎಲ್ಲರೂ ಶತಕ ಬಾರಿಸಿದ್ರು... ಪಾಕಿಸ್ತಾನ್ ಬ್ಯಾಟರ್​ಗಳಿಗೆ ನಾಚಿಕೆಗೇಡು..!
Image
IPL 2025: ಐಪಿಎಲ್​ನಲ್ಲೂ ಟೀಮ್ ಇಂಡಿಯಾಗೆ ಟೆಸ್ಟ್​

ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ನಡುವಣ ಸರಣಿಯು ಮಾರ್ಚ್ 16 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ 5 ಟಿ20 ಪಂದ್ಯ ಹಾಗೂ 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ.

ಇತ್ತ ತವರಿನಲ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಹೀನಾಯವಾಗಿ ಸೋತಿರುವ ಪಾಕಿಸ್ತಾನ್ ತಂಡಕ್ಕೆ ಮುಂದಿನ ಸರಣಿ ಬಹಳ ಮುಖ್ಯವೆನಿಸಿಕೊಂಡಿದೆ. ಹೀಗಾಗಿ ನ್ಯೂಝಿಲೆಂಡ್ ಪ್ರವಾಸಕ್ಕೂ ಮುನ್ನ ತಂಡದಲ್ಲಿ ಮಹತ್ವದ ಬದಲಾವಣೆ ತರಲು ಪಿಸಿಬಿ ನಿರ್ಧರಿಸಿದ್ದು, ಅದರಂತೆ ಬಾಬರ್ ಆಝಂ, ಶಾಹೀನ್ ಶಾ ಅಫ್ರಿದಿ ಹಾಗೂ ನಸೀಮ್ ಶಾಗೆ ಪಾಕಿಸ್ತಾನ್ ತಂಡದಿಂದ ಗೇಟ್ ಪಾಸ್ ಸಿಗುವುದು ಖಚಿತ ಎನ್ನಬಹುದು.

ಇದನ್ನೂ ಓದಿ: ICC ODI Rankings: ಟಾಪ್-10 ನಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು

ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿದ ಪಾಕಿಸ್ತಾನ್ ತಂಡ: ಮೊಹಮ್ಮದ್ ರಿಝ್ವಾನ್ (ನಾಯಕ), ಬಾಬರ್ ಆಝಂ, ಫಖರ್ ಝಮಾನ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಅಘಾ, ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ, ಶಾಹಿನ್ ಶಾ ಅಫ್ರಿದಿ, ಇಮಾಮ್ ಉಲ್ ಹಕ್.

ಪಾಕಿಸ್ತಾನದ ಈ ಹದಿನಾರು ಆಟಗಾರರಲ್ಲಿ ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಯಾರೆಲ್ಲಾ ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ಈಗ ಕುತೂಹಲ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!