AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಬರ್ 1 ಪಟ್ಟಕ್ಕಾಗಿ ಏಕದಿನ ವಿಶ್ವಕಪ್​ನಲ್ಲಿ ಬಾಬರ್-ಶುಭ್​ಮನ್ ನಡುವೆ ಪೈಪೋಟಿ

Babar Azam vs Shubman Gill: ಬಾಬರ್-ಶುಭ್​ಮನ್ ಗಿಲ್ ನಡುವೆ ಯಾರು ನಂಬರ್ 1 ಎಂಬುದರ ಸ್ಪಷ್ಟ ಚಿತ್ರಣ ಭಾರತ-ಪಾಕಿಸ್ತಾನ್ ನಡುವಿನ ಪಂದ್ಯದ ಬಳಿಕ ದೊರೆಯಲಿದೆ. ಏಕೆಂದರೆ ಪಾಕಿಸ್ತಾನ್ ತಂಡವು ಅಕ್ಟೋಬರ್ 6 ರಂದು ನೆದರ್​ಲೆಂಡ್ಸ್​ ವಿರುದ್ದ ತನ್ನ ಮೊದಲ ಪಂದ್ಯವನ್ನಾಡಲಿದೆ.

ನಂಬರ್ 1 ಪಟ್ಟಕ್ಕಾಗಿ ಏಕದಿನ ವಿಶ್ವಕಪ್​ನಲ್ಲಿ ಬಾಬರ್-ಶುಭ್​ಮನ್ ನಡುವೆ ಪೈಪೋಟಿ
Babar Azam - Shubman Gill
TV9 Web
| Edited By: |

Updated on:Sep 26, 2023 | 4:14 PM

Share

ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಬಾಬರ್ ಆಝಂ ಹಾಗೂ ಶುಭ್​ಮನ್ ಗಿಲ್ ನಡುವೆ ನಂಬರ್ 1 ಪಟ್ಟಕ್ಕಾಗಿ ಭರ್ಜರಿ ಪೈಪೋಟಿ ಕಂಡು ಬರಲಿದೆ. ಏಕೆಂದರೆ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಪಾಕ್ ತಂಡದ ನಾಯಕ ಬಾಬರ್ ಅಗ್ರಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾ ಆರಂಭಿಕ ಶುಭ್​ಮನ್ ಗಿಲ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಆದರೆ ಮೊದಲೆರಡು ಸ್ಥಾನಗಳ ನಡುವಣ ರೇಟಿಂಗ್ ಪಾಯಿಂಟ್ಸ್​ ವ್ಯತ್ಯಾಸ ಕೇವಲ 43 ಅಂಕಗಳು ಮಾತ್ರ.

ಪ್ರಸ್ತುತ ಏಕದಿನ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ 857 ರೇಟಿಂಗ್​ನೊಂದಿಗೆ ಬಾಬರ್ ಆಝಂ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು ದ್ವಿತೀಯ ಸ್ಥಾನದಲ್ಲಿರುವ ಶುಭ್​ಮನ್ ಗಿಲ್ 814 ರೇಟಿಂಗ್ ಹೊಂದಿದ್ದಾರೆ. ಅತ್ತ ಏಕದಿನ ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಪ್ರತಿ ತಂಡಗಳು ಒಟ್ಟು 9 ಪಂದ್ಯಗಳನ್ನಾಡಲಿದೆ. ಹೀಗಾಗಿ ಏಕದಿನ ವಿಶ್ವಕಪ್ ಮುಕ್ತಾಯದ ವೇಳೆಗೆ ಯಾರು ನಂಬರ್ 1 ಎಂಬುದು ಕೂಡ ನಿರ್ಧಾರವಾಗಲಿದೆ.

ಶುಭ್​ಮನ್​ಗೆ ಉತ್ತಮ ಅವಕಾಶ:

ಏಕದಿನ ವಿಶ್ವಕಪ್​ ಮೂಲಕ ಏಕದಿನ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಶುಭ್​ಮನ್ ಗಿಲ್​ಗೆ ಅತ್ಯುತ್ತಮ ಅವಕಾಶವಿದೆ. ಏಕೆಂದರೆ ಈ ಬಾರಿಯ ವಿಶ್ವಕಪ್ ನಡೆಯುತ್ತಿರುವುದು ಭಾರತದಲ್ಲಿ. ಅದರಲ್ಲೂ ತವರು ಮೈದಾನದಲ್ಲಿ ಅಬ್ಬರಿಸುವ ಗಿಲ್ ಮೊದಲ ಪಂದ್ಯದಲ್ಲೇ 22+ ಸ್ಕೋರ್​ಗಳಿಸಿದರೆ​ ಬಾಬರ್ ಆಝಂ ದ್ವಿತೀಯ ಸ್ಥಾನಕ್ಕಿಳಿಯಬಹುದು.

ಇದಾಗ್ಯೂ ಏಕದಿನ ವಿಶ್ವಕಪ್​ ಮೊದಲೆರಡು ಪಂದ್ಯಗಳು ಶುಭ್​ಮನ್ ಗಿಲ್ ಪಾಲಿಗೆ ನಿರ್ಣಾಯಕ. ಏಕೆಂದರೆ ಅತ್ತ ಬಾಬರ್ ಆಝಂ ಮೊದಲ ಎರಡು ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೆ ಅಗ್ರಸ್ಥಾನ ಕಾಯ್ದುಕೊಳ್ಳಬಹುದು.

ಅಕ್ಟೋಬರ್ 14 ರ ಬಳಿಕ ಸ್ಪಷ್ಟ ಚಿತ್ರಣ:

ಶುಭ್​ಮನ್ ಗಿಲ್ ಮೊದಲ ಪಂದ್ಯದಲ್ಲೇ 22 ಕ್ಕಿಂತ ಹೆಚ್ಚು ರನ್ ಕಲೆಹಾಕಿದರೆ ಅಗ್ರಸ್ಥಾನಕ್ಕೇರುವ ಅವಕಾಶ ಹೊಂದಿದ್ದಾರೆ. ಆದರೆ ಇದು ಖಾಯಂ ಆಗಿರುವ ಸಾಧ್ಯತೆಯಿದೆ. ಹೀಗಾಗಿ ಇಬ್ಬರ ನಡುವೆ ಯಾರು ನಂಬರ್ 1 ಎಂಬುದರ ಸ್ಪಷ್ಟ ಚಿತ್ರಣ ಭಾರತ-ಪಾಕಿಸ್ತಾನ್ ನಡುವಿನ ಪಂದ್ಯದ ಬಳಿಕ ದೊರೆಯಲಿದೆ. ಏಕೆಂದರೆ ಪಾಕಿಸ್ತಾನ್ ತಂಡವು ಅಕ್ಟೋಬರ್ 6 ರಂದು ನೆದರ್​ಲೆಂಡ್ಸ್​ ವಿರುದ್ದ ತನ್ನ ಮೊದಲ ಪಂದ್ಯವನ್ನಾಡಲಿದೆ.

ಇತ್ತ ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಏಕದಿನ ವಿಶ್ವಕಪ್​ ಅಭಿಯಾನ ಆರಂಭಿಸಲಿದೆ. ಇನ್ನು ಪಾಕ್ ತಂಡ ತನ್ನ 2ನೇ ಪಂದ್ಯವನ್ನು ಅಕ್ಟೋಬರ್ 10 ರಂದು ಶ್ರೀಲಂಕಾ ವಿರುದ್ಧ ಆಡಲಿದೆ. ಇನ್ನು ಭಾರತ ತಂಡವು ಅಕ್ಟೋಬರ್ 11 ರಂದು ಅಫ್ಘಾನಿಸ್ತಾನ್ ವಿರುದ್ಧ ತನ್ನ 2ನೇ ಪಂದ್ಯವನ್ನಾಡಲಿದೆ.

ಅಂದರೆ ಈ ಎರಡು ಪಂದ್ಯಗಳ ಮೂಲಕ ಬಾಬರ್ ಆಝಂ ಅಗ್ರಸ್ಥಾನವನ್ನು ಕಾಯ್ದುಕೊಳ್ಳಬಹುದು. ಅತ್ತ ಭಾರತ ತಂಡದ ಮೊದಲೆರಡು ಪಂದ್ಯಗಳಲ್ಲಿ ಮಿಂಚುವ ಮೂಲಕ ಶುಭ್​ಮನ್ ಗಿಲ್​ಗೂ ಅಗ್ರಸ್ಥಾನಕ್ಕೇರುವ ಅವಕಾಶವಿದೆ.

ಒಂದು ವೇಳೆ ಇಬ್ಬರು ಆಟಗಾರರು ತಮ್ಮ ಮೊದಲೆರಡು ಪಂದ್ಯಗಳಲ್ಲಿ ಮಿಂಚಿದರೆ ಶ್ರೇಯಾಂಕ ಪಟ್ಟಿ ಯಥಾಸ್ಥಿತಿಯಲ್ಲೇ ಮುಂದುವರೆಯಲಿದೆ. ಇದಾಗ್ಯೂ ಅಕ್ಟೋಬರ್ 14 ರಂದು ಮೂರನೇ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

ಈ ಪಂದ್ಯದಲ್ಲಿ ಮಿಂಚುವ ಆಟಗಾರ ಏಕದಿನ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ಪ್ರತಿ ಬುಧವಾರ ಐಸಿಸಿ ಶ್ರೇಯಾಂಕ ಪಟ್ಟಿಗಳನ್ನು ಅಪ್​ಡೇಟ್ ಮಾಡುತ್ತದೆ. ಭಾರತ ಮತ್ತು ಪಾಕಿಸ್ತಾನದ ಪಂದ್ಯದ ಬಳಿಕ ಅಕ್ಟೋಬರ್ 18 ರಂದು ಶ್ರೇಯಾಂಕ ಪಟ್ಟಿ ಅಪ್​ಡೇಟ್ ಆಗಲಿದೆ. ಇದರ ನಡುವೆ ಭಾರತ ಹಾಗೂ ಪಾಕಿಸ್ತಾನ್ ತಂಡಗಳಿಗೆ ಯಾವುದೇ ಪಂದ್ಯವಿಲ್ಲ.

ಇದನ್ನೂ ಓದಿ: ODI World Cup 2023 Schedule: ಏಕದಿನ ವಿಶ್ವಕಪ್​ನ​ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಹೀಗಾಗಿ ಅಕ್ಟೋಬರ್ 14 ರಂದು ನಡೆಯಲಿರುವ ಇಂಡೊ-ಪಾಕ್ ಕ್ರಿಕೆಟ್ ಕದನದ ಬಳಿಕ ಏಕದಿನ ಕ್ರಿಕೆಟ್​ನ ನಂಬರ್ 1 ಬ್ಯಾಟರ್​ ಯಾರು ಎಂಬುದರ ಸ್ಪಷ್ಟ ಚಿತ್ರಣವಂತು ಸಿಗಲಿದೆ. ಇದಾಗ್ಯೂ ಈ ಟೂರ್ನಿಯುದ್ದಕ್ಕೂ ಬಾಬರ್ ಹಾಗೂ ಶುಭ್​ಮನ್ ಗಿಲ್ ನಡುವೆ ಅಗ್ರಸ್ಥಾನಕ್ಕಾಗಿ ಪೈಪೋಟಿ ಕಂಡು ಬಂದರೂ ಅಚ್ಚರಿಪಡಬೇಕಿಲ್ಲ.

Published On - 3:59 pm, Tue, 26 September 23

ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ