AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 Rankings: ಬಾಬರ್ ಹಿಂದಿಕ್ಕಿದ ರಿಜ್ವಾನ್​ಗೆ ನಂ.1 ಪಟ್ಟ! ಟಾಪ್ 3 ರಿಂದ ಸೂರ್ಯ ಔಟ್..!

ICC T20 Rankings: ಏಷ್ಯಾಕಪ್ ಅಥವಾ ಮೊದಲು ಆಡಿದ ಟಿ20 ಸರಣಿಯಲ್ಲಿ ಹಾಂಕಾಂಗ್ ವಿರುದ್ಧ ಸೂರ್ಯಕುಮಾರ್ ಯಾದವ್ ತೋರಿದ ರೀತಿಯ ಪ್ರದರ್ಶನ, ಅವರು ಬಾಬರ್ ಅಜಮ್ ಅವರನ್ನು ಟಿ20 ನಂ.1 ರ‍್ಯಾಂಕಿಂಗ್​ನಿಂದ ಕೆಳಕ್ಕಿಳಿಸಬಹುದು ಎಂದು ನಿರೀಕ್ಷಿಸಲಾಗಿತ್ತು.

ICC T20 Rankings: ಬಾಬರ್ ಹಿಂದಿಕ್ಕಿದ ರಿಜ್ವಾನ್​ಗೆ ನಂ.1 ಪಟ್ಟ! ಟಾಪ್ 3 ರಿಂದ ಸೂರ್ಯ ಔಟ್..!
ಸೂರ್ಯ, ಬಾಬರ್, ರಿಜ್ವಾನ್
TV9 Web
| Edited By: |

Updated on:Sep 07, 2022 | 3:23 PM

Share

ಐಸಿಸಿ ಟಿ20 ಬ್ಯಾಟ್ಸ್‌ಮನ್‌ಗಳ ನೂತನ ರ‍್ಯಾಂಕಿಂಗ್ ಪಟ್ಟಿಯನ್ನು (ICC T20 Rankings) ಬಿಡುಗಡೆ ಮಾಡಿದ್ದು, ಹೊಸ ಶ್ರೇಯಾಂಕದಲ್ಲಿ, ಬಾಬರ್ ಅಜಮ್ (Babar Azam) ಬದಲಿಗೆ ಸೂರ್ಯಕುಮಾರ್ ಯಾದವ್ (Suryakumar Yadav) ಕಾಣಿಸಿಕೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಇವರಿಬ್ಬರ ಕದನದಲ್ಲಿ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್​ಗೆ ದೊಡ್ಡ ಲಾಭವಾಗಿದೆ. ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಜ್ವಾನ್ ಈಗ ಟಿ20ಯಲ್ಲಿ ನಂಬರ್ ಒನ್ ಪಟ್ಟವನ್ನು ಅಲಂಕರಿಸಿದ್ದಾರೆ. ಅವರು ತಮ್ಮದೇ ದೇಶಬಾಂಧವ ಮತ್ತು ಆರಂಭಿಕ ಪಾಲುದಾರ ಬಾಬರ್ ಅಜಮ್ ಅವರನ್ನು ಹಿಂದುಕ್ಕುವ ಮೂಲಕ ಈ ಸ್ಥಾನವನ್ನು ಸಾಧಿಸಿದ್ದಾರೆ. ಈ ಮೊದಲು ಬಾಬರ್ ಆಜಮ್ ನಂಬರ್ ಒನ್ ಸ್ಥಾನದಲ್ಲಿದ್ದರು. ಈ ಹಿಂದೆ ಟಿ20 ರ‍್ಯಾಂಕಿಂಗ್​ನಲ್ಲಿ ಬರಪೂರ ಲಾಭ ಪಡೆದಿದ್ದ ಭಾರತದ ಸೂರ್ಯಕುಮಾರ್ ಯಾದವ್ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಸಾಕಷ್ಟು ನಷ್ಟ ಅನುಭವಿಸಿದ್ದಾರೆ.

ಬಾಬರ್- ಸೂರ್ಯಕುಮಾರ್ ಕದನದಲ್ಲಿ ರಿಜ್ವಾನ್​ಗೆ ಲಾಭ!

ಇದನ್ನೂ ಓದಿ
Image
ಸೂರ್ಯಕುಮಾರ್​ನನ್ನು ಡಿವಿಲಿಯರ್ಸ್​ಗೆ ಹೋಲಿಸಿದ ಪಾಂಟಿಂಗ್; ಲೇವಡಿ ಮಾಡಿದ ಪಾಕ್ ಕ್ರಿಕೆಟರ್
Image
ICC T20 Rankings: ಕೆರಿಬಿಯನ್​ ನಾಡಲ್ಲಿ ಸೂರ್ಯ ಸ್ಫೋಟ, ಟಿ20 ರ‍್ಯಾಂಕಿಂಗ್​ನಲ್ಲಿ 2ನೇ ಸ್ಥಾನ! ನಲುಗಿದ ಬಾಬರ್ ಸಿಂಹಾಸನ
Image
IND vs ENG: ಸೂರ್ಯ ಮುಳುಗದ ನಾಡಿನಲ್ಲಿ ದಾಖಲೆಗಳ ಮಳೆ ಸುರಿಸಿದ ಸೂರ್ಯ..!

ಏಷ್ಯಾಕಪ್ ಅಥವಾ ಮೊದಲು ಆಡಿದ ಟಿ20 ಸರಣಿಯಲ್ಲಿ ಹಾಂಕಾಂಗ್ ವಿರುದ್ಧ ಸೂರ್ಯಕುಮಾರ್ ಯಾದವ್ ತೋರಿದ ರೀತಿಯ ಪ್ರದರ್ಶನ, ಅವರು ಬಾಬರ್ ಅಜಮ್ ಅವರನ್ನು ಟಿ20 ನಂ.1 ರ‍್ಯಾಂಕಿಂಗ್​ನಿಂದ ಕೆಳಕ್ಕಿಳಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಏಷ್ಯಾಕಪ್​ನಲ್ಲಿ ಸೂರ್ಯಕುಮಾರ್ ಯಾದವ್ ಮಾತ್ರವಲ್ಲ ಬಾಬರ್ ಅಜಮ್ ಕೂಡ ವಿಫಲರಾಗಿದ್ದರು. ಆದರೆ ಅವರ ವೈಫಲ್ಯದ ಮಧ್ಯೆ, ಮೊಹಮ್ಮದ್ ರಿಜ್ವಾನ್ ಬ್ಯಾಟಿಂಗ್​ನಲ್ಲಿ ಕೆಲವು ಅತ್ಯುತ್ತಮ ಇನ್ನಿಂಗ್ಸ್‌ಗಳನ್ನು ಆಡಿದ್ದರಿಂದ ಇದು ICC ಯ ಹೊಸ T20 ರ‍್ಯಾಂಕಿಂಗ್ ಪಟ್ಟಿಯ ಮೇಲೆ ಪ್ರಭಾವ ಬೀರಿದೆ.

ತಲಾ ಒಂದು ಸ್ಥಾನ ಕಳೆದುಕೊಂಡ ಬಾಬರ್ ಮತ್ತು ಸೂರ್ಯ

ಹೊಸ ಟಿ20 ಶ್ರೇಯಾಂಕದಲ್ಲಿ ಬಾಬರ್ ಅಜಂ ಮತ್ತು ಸೂರ್ಯಕುಮಾರ್ ಯಾದವ್ ತಲಾ ಒಂದೊಂದು ಸ್ಥಾನ ಕಳೆದುಕೊಂಡಿದ್ದಾರೆ. ಬಾಬರ್ ಆಜಮ್ ನಂಬರ್ ಒನ್ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ. ಅದೇ ಸಮಯದಲ್ಲಿ, ಸೂರ್ಯಕುಮಾರ್ ಯಾದವ್ ಹೊಸ ಶ್ರೇಯಾಂಕದಲ್ಲಿ ಅಗ್ರ 3ನೇ ಸ್ಥಾನದಿಂದ 4 ನೇ ಸ್ಥಾನಕ್ಕೆ ಕುಸಿದಿದ್ದಾರೆ. ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಏಡನ್ ಮಾರ್ಕ್ರಾಮ್ ಈಗ ಟಿ 20 ರ್ಯಾಂಕಿಂಗ್‌ನಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಹಿಂದಿಕ್ಕಿ 3 ನೇ ಸ್ಥಾನವನ್ನು ಗಳಿಸಿದ್ದಾರೆ.

ಬೌಲಿಂಗ್‌ನಲ್ಲಿ ಹ್ಯಾಜಲ್‌ವುಡ್ ನಂ.1

ಐಸಿಸಿಯ ನೂತನ ಟಿ20 ಶ್ರೇಯಾಂಕದ ಅಗ್ರ 5 ಪಟ್ಟಿಯಲ್ಲಿ ಪಾಕಿಸ್ತಾನ 2 ಬ್ಯಾಟ್ಸ್‌ಮನ್‌ಗಳನ್ನು ಹೊಂದಿದ್ದರೆ, ಭಾರತ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಲಾ ಒಬ್ಬೊಬ್ಬ ಬ್ಯಾಟ್ಸ್‌ಮನ್‌ಗಳನ್ನು ಹೊಂದಿವೆ. ಬೌಲರ್‌ಗಳ ಟಿ20 ರ್ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯಾದ ಜೋಸ್ ಹೇಜಲ್‌ವುಡ್ ಮೊದಲ ಸ್ಥಾನದಲ್ಲಿದ್ದಾರೆ. ಟಾಪ್ 10ರಲ್ಲಿ ಭಾರತದ ಯಾವುದೇ ಬೌಲರ್ ಇಲ್ಲ. ಅದೇ ಸಮಯದಲ್ಲಿ, ಅಫ್ಘಾನಿಸ್ತಾನದ ಮೊಹಮ್ಮದ್ ನಬಿ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಹಾಗೆಯೇ ಆಲ್​ರೌಂಡರ್ ವಿಭಾಗದಲ್ಲಿ ಭಾರತದ ಹಾರ್ದಿಕ್ ಪಾಂಡ್ಯ 5ನೇ ಸ್ಥಾನದಲ್ಲಿದ್ದಾರೆ.

Published On - 3:16 pm, Wed, 7 September 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ