AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜತ್ ಪಾಟಿದಾರ್ ಭರ್ಜರಿ ಸಿಕ್ಸ್, ಅಭಿಮಾನಿಯ ಬೋಲ್ ತಲೆಗೆ ಬಡಿದ ಚೆಂಡು, ನೋವು ಅನುಭವಿಸಿದ ಹಿರಿಯ ವ್ಯಕ್ತಿ!

ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯದ ವೇಳೆ ಅರ್​ಸಿಬಿ ಆಟಗಾರ ರಜತ್ ಪಾಟಿದಾರ್ ಭರ್ಜರಿ ಸಿಕ್ಸ್ ಒಂದನ್ನು ಬಾರಿಸಿದರು. ಈ ಚೆಂಡು ಹಿರಿಯ ಅಭಿಮಾನಿಯೊಬ್ಬರ ಬೋಲ್ ತಲೆಗೆ ತಾಗಿದ ಘಟನೆ ನಡೆಯಿತು.

ರಜತ್ ಪಾಟಿದಾರ್ ಭರ್ಜರಿ ಸಿಕ್ಸ್, ಅಭಿಮಾನಿಯ ಬೋಲ್ ತಲೆಗೆ ಬಡಿದ ಚೆಂಡು, ನೋವು ಅನುಭವಿಸಿದ ಹಿರಿಯ ವ್ಯಕ್ತಿ!
ಅಭಿಮಾನಿಯ ತಲೆಗೆ ಬಡಿದ ಚೆಂಡು
TV9 Web
| Edited By: |

Updated on:May 14, 2022 | 1:39 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಚಾಜ್ ಕಿಂಗ್ಸ್(Punjab Kings) ತಂಡದ ನಡುವೆ ನಿನ್ನೆ ರೋಚಕ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಅಭಿಮಾನಿಯೊಬ್ಬರು ನೋವು ಅನುಭವಿಸುವ ಪ್ರಸಂಗ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದೆ. ಹೌದು, ಅರ್​ಸಿಬಿ(RCB) ಆಟಗಾರ ರಜತ್ ಪಾಟಿದಾರ್(Rajat patidar) ಅವರು 9ನೇ ಓವರ್​ನಲ್ಲಿ 102 ಮೀಟರ್ ದೂರದ ಸಿಕ್ಸ್ ಅನ್ನು ಬಾರಿಸಿದರು. ಹೀಗೆ ಹೋದ ಚೆಂಡು ಸ್ಟೇಡಿಯಂನಲ್ಲಿ ಕುಳಿತಿದ್ದ ಹಿರಿಯ ವ್ಯಕ್ತಿಯೊಬ್ಬರ ತಲೆಗೆ ಬಡಿದಿದೆ. ಈ ವೇಳೆ ಅವರು ನೋವಿನಿಂದ ಅಸ್ವಸ್ಥರಾಗಿದ್ದು, ಪಕ್ಕದಲ್ಲಿ ಕುಳಿತು ಪಂದ್ಯ ವಿಕ್ಷಿಸುತ್ತಿದ್ದ ಮಹಿಳೆಯೊಬ್ಬರು ಅವರ ನೆರವಿಗೆ ದಾವಿಸಿದ್ದಾರೆ. ಅಲ್ಲದೆ, ಆ ಹಿರಿಯ ವ್ಯಕ್ತಿಯ ತಲೆಯನ್ನು ಸವರಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ನಿನ್ನೆ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಗೆಲುವು ದಾಖಲಿಸಿದ್ದು, ಪ್ಲೇಆಫ್ ತಲುಪಲು ಶಕ್ತಿ ಸಿಕ್ಕಂತಾಗಿದೆ. ಟಾಸ್ ಸೋತು ಬ್ಯಾಟಿಂಗ್ ನಡೆಸಿದ್ದ ಪಂಜಾಬ್, 20 ಓವರ್​ಗಳಲ್ಲಿ 209 ರನ್ ಬಾರಿಸಿ ಆರ್​ಸಿಬಿಗೆ ಬೃಹತ್ ಮೊತ್ತದ ಗೆಲುವಿನ ಗುರಿ ನೀಡಿತು. ಗುರಿ ಬೆನ್ನತ್ತಿದ ಆರ್​ಸಿಬಿ, 20 ಓವರ್​ಗಳಲ್ಲಿ 155ರನ್​ ಬಾರಿಸಿ ಸೋಲು ಅನುಭವಿಸಿತು.

ಪಂಜಾಬ್ ತಂಡವು ಅರ್​ಸಿಬಿ ವಿರುದ್ಧ 54ರನ್​ಗಳ ಅಂತರದಿಂದ ಗೆಲುವು ದಾಖಲಿಸಿ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಕನಸು ಕೂಡ ಜೀವಂತವಾಗಿದ್ದು, ಲಖ್ನೋ ತಂಡದ ವಿರುದ್ಧ ಗೆಲುವು ದಾಖಲಿಸುವುದು ಅನಿವಾರ್ಯವಾಗಿದೆ. ಸದ್ಯ 13 ಪಂದ್ಯಗಳಲ್ಲಿ 7 ಪಂದ್ಯಗಳನ್ನು ಗೆದ್ದಿರುವ ಆರ್​ಸಿಬಿ 14 ಪಾಯಿಂಟ್​ಗಳೊಂದಿಗೆ 4ನೇ ಸ್ಥಾನದಲ್ಲಿದೆ. ನಿನ್ನೆಯ ಗೆಲುವಿನೊಂದಿಗೆ ಪಂಜಾಬ್ 6ನೇ ಸ್ಥಾನಕ್ಕೇರಿದೆ.

Published On - 1:34 pm, Sat, 14 May 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?