AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜತ್ ಪಾಟಿದಾರ್ ಭರ್ಜರಿ ಸಿಕ್ಸ್, ಅಭಿಮಾನಿಯ ಬೋಲ್ ತಲೆಗೆ ಬಡಿದ ಚೆಂಡು, ನೋವು ಅನುಭವಿಸಿದ ಹಿರಿಯ ವ್ಯಕ್ತಿ!

ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯದ ವೇಳೆ ಅರ್​ಸಿಬಿ ಆಟಗಾರ ರಜತ್ ಪಾಟಿದಾರ್ ಭರ್ಜರಿ ಸಿಕ್ಸ್ ಒಂದನ್ನು ಬಾರಿಸಿದರು. ಈ ಚೆಂಡು ಹಿರಿಯ ಅಭಿಮಾನಿಯೊಬ್ಬರ ಬೋಲ್ ತಲೆಗೆ ತಾಗಿದ ಘಟನೆ ನಡೆಯಿತು.

ರಜತ್ ಪಾಟಿದಾರ್ ಭರ್ಜರಿ ಸಿಕ್ಸ್, ಅಭಿಮಾನಿಯ ಬೋಲ್ ತಲೆಗೆ ಬಡಿದ ಚೆಂಡು, ನೋವು ಅನುಭವಿಸಿದ ಹಿರಿಯ ವ್ಯಕ್ತಿ!
ಅಭಿಮಾನಿಯ ತಲೆಗೆ ಬಡಿದ ಚೆಂಡು
TV9 Web
| Updated By: Rakesh Nayak Manchi|

Updated on:May 14, 2022 | 1:39 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಚಾಜ್ ಕಿಂಗ್ಸ್(Punjab Kings) ತಂಡದ ನಡುವೆ ನಿನ್ನೆ ರೋಚಕ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಅಭಿಮಾನಿಯೊಬ್ಬರು ನೋವು ಅನುಭವಿಸುವ ಪ್ರಸಂಗ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದೆ. ಹೌದು, ಅರ್​ಸಿಬಿ(RCB) ಆಟಗಾರ ರಜತ್ ಪಾಟಿದಾರ್(Rajat patidar) ಅವರು 9ನೇ ಓವರ್​ನಲ್ಲಿ 102 ಮೀಟರ್ ದೂರದ ಸಿಕ್ಸ್ ಅನ್ನು ಬಾರಿಸಿದರು. ಹೀಗೆ ಹೋದ ಚೆಂಡು ಸ್ಟೇಡಿಯಂನಲ್ಲಿ ಕುಳಿತಿದ್ದ ಹಿರಿಯ ವ್ಯಕ್ತಿಯೊಬ್ಬರ ತಲೆಗೆ ಬಡಿದಿದೆ. ಈ ವೇಳೆ ಅವರು ನೋವಿನಿಂದ ಅಸ್ವಸ್ಥರಾಗಿದ್ದು, ಪಕ್ಕದಲ್ಲಿ ಕುಳಿತು ಪಂದ್ಯ ವಿಕ್ಷಿಸುತ್ತಿದ್ದ ಮಹಿಳೆಯೊಬ್ಬರು ಅವರ ನೆರವಿಗೆ ದಾವಿಸಿದ್ದಾರೆ. ಅಲ್ಲದೆ, ಆ ಹಿರಿಯ ವ್ಯಕ್ತಿಯ ತಲೆಯನ್ನು ಸವರಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ನಿನ್ನೆ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಗೆಲುವು ದಾಖಲಿಸಿದ್ದು, ಪ್ಲೇಆಫ್ ತಲುಪಲು ಶಕ್ತಿ ಸಿಕ್ಕಂತಾಗಿದೆ. ಟಾಸ್ ಸೋತು ಬ್ಯಾಟಿಂಗ್ ನಡೆಸಿದ್ದ ಪಂಜಾಬ್, 20 ಓವರ್​ಗಳಲ್ಲಿ 209 ರನ್ ಬಾರಿಸಿ ಆರ್​ಸಿಬಿಗೆ ಬೃಹತ್ ಮೊತ್ತದ ಗೆಲುವಿನ ಗುರಿ ನೀಡಿತು. ಗುರಿ ಬೆನ್ನತ್ತಿದ ಆರ್​ಸಿಬಿ, 20 ಓವರ್​ಗಳಲ್ಲಿ 155ರನ್​ ಬಾರಿಸಿ ಸೋಲು ಅನುಭವಿಸಿತು.

ಪಂಜಾಬ್ ತಂಡವು ಅರ್​ಸಿಬಿ ವಿರುದ್ಧ 54ರನ್​ಗಳ ಅಂತರದಿಂದ ಗೆಲುವು ದಾಖಲಿಸಿ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಕನಸು ಕೂಡ ಜೀವಂತವಾಗಿದ್ದು, ಲಖ್ನೋ ತಂಡದ ವಿರುದ್ಧ ಗೆಲುವು ದಾಖಲಿಸುವುದು ಅನಿವಾರ್ಯವಾಗಿದೆ. ಸದ್ಯ 13 ಪಂದ್ಯಗಳಲ್ಲಿ 7 ಪಂದ್ಯಗಳನ್ನು ಗೆದ್ದಿರುವ ಆರ್​ಸಿಬಿ 14 ಪಾಯಿಂಟ್​ಗಳೊಂದಿಗೆ 4ನೇ ಸ್ಥಾನದಲ್ಲಿದೆ. ನಿನ್ನೆಯ ಗೆಲುವಿನೊಂದಿಗೆ ಪಂಜಾಬ್ 6ನೇ ಸ್ಥಾನಕ್ಕೇರಿದೆ.

Published On - 1:34 pm, Sat, 14 May 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?