AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜತ್ ಪಾಟಿದಾರ್ ಭರ್ಜರಿ ಸಿಕ್ಸ್, ಅಭಿಮಾನಿಯ ಬೋಲ್ ತಲೆಗೆ ಬಡಿದ ಚೆಂಡು, ನೋವು ಅನುಭವಿಸಿದ ಹಿರಿಯ ವ್ಯಕ್ತಿ!

ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯದ ವೇಳೆ ಅರ್​ಸಿಬಿ ಆಟಗಾರ ರಜತ್ ಪಾಟಿದಾರ್ ಭರ್ಜರಿ ಸಿಕ್ಸ್ ಒಂದನ್ನು ಬಾರಿಸಿದರು. ಈ ಚೆಂಡು ಹಿರಿಯ ಅಭಿಮಾನಿಯೊಬ್ಬರ ಬೋಲ್ ತಲೆಗೆ ತಾಗಿದ ಘಟನೆ ನಡೆಯಿತು.

ರಜತ್ ಪಾಟಿದಾರ್ ಭರ್ಜರಿ ಸಿಕ್ಸ್, ಅಭಿಮಾನಿಯ ಬೋಲ್ ತಲೆಗೆ ಬಡಿದ ಚೆಂಡು, ನೋವು ಅನುಭವಿಸಿದ ಹಿರಿಯ ವ್ಯಕ್ತಿ!
ಅಭಿಮಾನಿಯ ತಲೆಗೆ ಬಡಿದ ಚೆಂಡು
TV9 Web
| Edited By: Rakesh Nayak Manchi|

Updated on:May 14, 2022 | 1:39 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಚಾಜ್ ಕಿಂಗ್ಸ್(Punjab Kings) ತಂಡದ ನಡುವೆ ನಿನ್ನೆ ರೋಚಕ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಅಭಿಮಾನಿಯೊಬ್ಬರು ನೋವು ಅನುಭವಿಸುವ ಪ್ರಸಂಗ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದೆ. ಹೌದು, ಅರ್​ಸಿಬಿ(RCB) ಆಟಗಾರ ರಜತ್ ಪಾಟಿದಾರ್(Rajat patidar) ಅವರು 9ನೇ ಓವರ್​ನಲ್ಲಿ 102 ಮೀಟರ್ ದೂರದ ಸಿಕ್ಸ್ ಅನ್ನು ಬಾರಿಸಿದರು. ಹೀಗೆ ಹೋದ ಚೆಂಡು ಸ್ಟೇಡಿಯಂನಲ್ಲಿ ಕುಳಿತಿದ್ದ ಹಿರಿಯ ವ್ಯಕ್ತಿಯೊಬ್ಬರ ತಲೆಗೆ ಬಡಿದಿದೆ. ಈ ವೇಳೆ ಅವರು ನೋವಿನಿಂದ ಅಸ್ವಸ್ಥರಾಗಿದ್ದು, ಪಕ್ಕದಲ್ಲಿ ಕುಳಿತು ಪಂದ್ಯ ವಿಕ್ಷಿಸುತ್ತಿದ್ದ ಮಹಿಳೆಯೊಬ್ಬರು ಅವರ ನೆರವಿಗೆ ದಾವಿಸಿದ್ದಾರೆ. ಅಲ್ಲದೆ, ಆ ಹಿರಿಯ ವ್ಯಕ್ತಿಯ ತಲೆಯನ್ನು ಸವರಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ನಿನ್ನೆ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಗೆಲುವು ದಾಖಲಿಸಿದ್ದು, ಪ್ಲೇಆಫ್ ತಲುಪಲು ಶಕ್ತಿ ಸಿಕ್ಕಂತಾಗಿದೆ. ಟಾಸ್ ಸೋತು ಬ್ಯಾಟಿಂಗ್ ನಡೆಸಿದ್ದ ಪಂಜಾಬ್, 20 ಓವರ್​ಗಳಲ್ಲಿ 209 ರನ್ ಬಾರಿಸಿ ಆರ್​ಸಿಬಿಗೆ ಬೃಹತ್ ಮೊತ್ತದ ಗೆಲುವಿನ ಗುರಿ ನೀಡಿತು. ಗುರಿ ಬೆನ್ನತ್ತಿದ ಆರ್​ಸಿಬಿ, 20 ಓವರ್​ಗಳಲ್ಲಿ 155ರನ್​ ಬಾರಿಸಿ ಸೋಲು ಅನುಭವಿಸಿತು.

ಪಂಜಾಬ್ ತಂಡವು ಅರ್​ಸಿಬಿ ವಿರುದ್ಧ 54ರನ್​ಗಳ ಅಂತರದಿಂದ ಗೆಲುವು ದಾಖಲಿಸಿ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಕನಸು ಕೂಡ ಜೀವಂತವಾಗಿದ್ದು, ಲಖ್ನೋ ತಂಡದ ವಿರುದ್ಧ ಗೆಲುವು ದಾಖಲಿಸುವುದು ಅನಿವಾರ್ಯವಾಗಿದೆ. ಸದ್ಯ 13 ಪಂದ್ಯಗಳಲ್ಲಿ 7 ಪಂದ್ಯಗಳನ್ನು ಗೆದ್ದಿರುವ ಆರ್​ಸಿಬಿ 14 ಪಾಯಿಂಟ್​ಗಳೊಂದಿಗೆ 4ನೇ ಸ್ಥಾನದಲ್ಲಿದೆ. ನಿನ್ನೆಯ ಗೆಲುವಿನೊಂದಿಗೆ ಪಂಜಾಬ್ 6ನೇ ಸ್ಥಾನಕ್ಕೇರಿದೆ.

Published On - 1:34 pm, Sat, 14 May 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ