AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜತ್ ಪಾಟಿದಾರ್ ಭರ್ಜರಿ ಸಿಕ್ಸ್, ಅಭಿಮಾನಿಯ ಬೋಲ್ ತಲೆಗೆ ಬಡಿದ ಚೆಂಡು, ನೋವು ಅನುಭವಿಸಿದ ಹಿರಿಯ ವ್ಯಕ್ತಿ!

ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯದ ವೇಳೆ ಅರ್​ಸಿಬಿ ಆಟಗಾರ ರಜತ್ ಪಾಟಿದಾರ್ ಭರ್ಜರಿ ಸಿಕ್ಸ್ ಒಂದನ್ನು ಬಾರಿಸಿದರು. ಈ ಚೆಂಡು ಹಿರಿಯ ಅಭಿಮಾನಿಯೊಬ್ಬರ ಬೋಲ್ ತಲೆಗೆ ತಾಗಿದ ಘಟನೆ ನಡೆಯಿತು.

ರಜತ್ ಪಾಟಿದಾರ್ ಭರ್ಜರಿ ಸಿಕ್ಸ್, ಅಭಿಮಾನಿಯ ಬೋಲ್ ತಲೆಗೆ ಬಡಿದ ಚೆಂಡು, ನೋವು ಅನುಭವಿಸಿದ ಹಿರಿಯ ವ್ಯಕ್ತಿ!
ಅಭಿಮಾನಿಯ ತಲೆಗೆ ಬಡಿದ ಚೆಂಡು
TV9 Web
| Edited By: Rakesh Nayak Manchi|

Updated on:May 14, 2022 | 1:39 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಚಾಜ್ ಕಿಂಗ್ಸ್(Punjab Kings) ತಂಡದ ನಡುವೆ ನಿನ್ನೆ ರೋಚಕ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಅಭಿಮಾನಿಯೊಬ್ಬರು ನೋವು ಅನುಭವಿಸುವ ಪ್ರಸಂಗ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದೆ. ಹೌದು, ಅರ್​ಸಿಬಿ(RCB) ಆಟಗಾರ ರಜತ್ ಪಾಟಿದಾರ್(Rajat patidar) ಅವರು 9ನೇ ಓವರ್​ನಲ್ಲಿ 102 ಮೀಟರ್ ದೂರದ ಸಿಕ್ಸ್ ಅನ್ನು ಬಾರಿಸಿದರು. ಹೀಗೆ ಹೋದ ಚೆಂಡು ಸ್ಟೇಡಿಯಂನಲ್ಲಿ ಕುಳಿತಿದ್ದ ಹಿರಿಯ ವ್ಯಕ್ತಿಯೊಬ್ಬರ ತಲೆಗೆ ಬಡಿದಿದೆ. ಈ ವೇಳೆ ಅವರು ನೋವಿನಿಂದ ಅಸ್ವಸ್ಥರಾಗಿದ್ದು, ಪಕ್ಕದಲ್ಲಿ ಕುಳಿತು ಪಂದ್ಯ ವಿಕ್ಷಿಸುತ್ತಿದ್ದ ಮಹಿಳೆಯೊಬ್ಬರು ಅವರ ನೆರವಿಗೆ ದಾವಿಸಿದ್ದಾರೆ. ಅಲ್ಲದೆ, ಆ ಹಿರಿಯ ವ್ಯಕ್ತಿಯ ತಲೆಯನ್ನು ಸವರಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ನಿನ್ನೆ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಗೆಲುವು ದಾಖಲಿಸಿದ್ದು, ಪ್ಲೇಆಫ್ ತಲುಪಲು ಶಕ್ತಿ ಸಿಕ್ಕಂತಾಗಿದೆ. ಟಾಸ್ ಸೋತು ಬ್ಯಾಟಿಂಗ್ ನಡೆಸಿದ್ದ ಪಂಜಾಬ್, 20 ಓವರ್​ಗಳಲ್ಲಿ 209 ರನ್ ಬಾರಿಸಿ ಆರ್​ಸಿಬಿಗೆ ಬೃಹತ್ ಮೊತ್ತದ ಗೆಲುವಿನ ಗುರಿ ನೀಡಿತು. ಗುರಿ ಬೆನ್ನತ್ತಿದ ಆರ್​ಸಿಬಿ, 20 ಓವರ್​ಗಳಲ್ಲಿ 155ರನ್​ ಬಾರಿಸಿ ಸೋಲು ಅನುಭವಿಸಿತು.

ಪಂಜಾಬ್ ತಂಡವು ಅರ್​ಸಿಬಿ ವಿರುದ್ಧ 54ರನ್​ಗಳ ಅಂತರದಿಂದ ಗೆಲುವು ದಾಖಲಿಸಿ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಕನಸು ಕೂಡ ಜೀವಂತವಾಗಿದ್ದು, ಲಖ್ನೋ ತಂಡದ ವಿರುದ್ಧ ಗೆಲುವು ದಾಖಲಿಸುವುದು ಅನಿವಾರ್ಯವಾಗಿದೆ. ಸದ್ಯ 13 ಪಂದ್ಯಗಳಲ್ಲಿ 7 ಪಂದ್ಯಗಳನ್ನು ಗೆದ್ದಿರುವ ಆರ್​ಸಿಬಿ 14 ಪಾಯಿಂಟ್​ಗಳೊಂದಿಗೆ 4ನೇ ಸ್ಥಾನದಲ್ಲಿದೆ. ನಿನ್ನೆಯ ಗೆಲುವಿನೊಂದಿಗೆ ಪಂಜಾಬ್ 6ನೇ ಸ್ಥಾನಕ್ಕೇರಿದೆ.

Published On - 1:34 pm, Sat, 14 May 22

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ