AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಟೀಮ್ ಇಂಡಿಯಾ ಸೋತ ಬೆನ್ನಲ್ಲೇ IPL ಬ್ಯಾನ್ ಮಾಡುವಂತೆ ಆಗ್ರಹ

BAN IPL: ಸದ್ಯ ಸತತ ಎರಡು ಸೋಲನುಭವಿಸಿರುವ ಭಾರತಕ್ಕೆ ಇನ್ನೂ ಮೂರು ಪಂದ್ಯಗಳಿವೆ. ಅಫ್ಘಾನಿಸ್ತಾನ್, ನಮೀಬಿಯಾ ಹಾಗೂ ಸ್ಕಾಟ್ಲೆಂಡ್ ವಿರುದ್ದ ಭರ್ಜರಿ ಜಯ ಸಾಧಿಸಿ ನೆಟ್​ ರನ್​ರೇಟ್ ಹೆಚ್ಚಿಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

T20 World Cup 2021: ಟೀಮ್ ಇಂಡಿಯಾ ಸೋತ ಬೆನ್ನಲ್ಲೇ IPL ಬ್ಯಾನ್ ಮಾಡುವಂತೆ ಆಗ್ರಹ
IPL
TV9 Web
| Updated By: ಝಾಹಿರ್ ಯೂಸುಫ್|

Updated on: Nov 01, 2021 | 2:56 PM

Share

ಟಿ20 ವಿಶ್ವಕಪ್​ನಲ್ಲಿ (T20 World Cup 2021) ಪಾಕಿಸ್ತಾನ್ ವಿರುದ್ದ ಸೋತಿದ್ದ ಭಾರತ ಇದೀಗ ನ್ಯೂಜಿಲೆಂಡ್ (India vs New Zealand) ವಿರುದ್ದ ಕೂಡ ಮುಗ್ಗರಿಸಿದೆ. ಈ ಸತತ ಸೋಲಿನೊಂದಿಗೆ ಟೀಮ್ ಇಂಡಿಯಾದ ಸೆಮಿಫೈನಲ್ ಕನಸು ಕೂಡ ಬಹುತೇಕ ಕಮರಿದೆ. ಇತ್ತ ಈ ಸಲ ಟಿ20 ವಿಶ್ವಕಪ್​ ಗೆಲ್ಲುವ ಫೇವರೇಟ್​ ತಂಡ ಎನಿಸಿಕೊಂಡಿದ್ದ ಟೀಮ್ ಇಂಡಿಯಾದ (Team India) ಕಳಪೆ ಪ್ರದರ್ಶನದ ಬಗ್ಗೆ ಅಭಿಮಾನಿಗಳು ಬೇಸರ ಹೊರಹಾಕುತ್ತಿದ್ದಾರೆ. ಅದರಲ್ಲೂ ಒಂದು ಹೆಜ್ಜೆ ಮುಂದೆ ಹೋಗಿ ಭಾರತ ತಂಡದ ಹೀನಾಯ ಪ್ರದರ್ಶನಕ್ಕೆ ಇಂಡಿಯನ್ ಪ್ರೀಮಿಯರ್ ಲೀಗ್ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದಕ್ಕೆ ಕಾರಣ, ಐಪಿಎಲ್​ ಟೂರ್ನಿಯ ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್​ ಶುರುವಾಗಿತ್ತು. ಆದರೆ ಐಪಿಎಲ್​ನಲ್ಲಿ ಮಿಂಚಿದ್ದ ಆಟಗಾರರು ಟೀಮ್ ಇಂಡಿಯಾ ಪರ ಆಡುವಾಗ ಕಳಪೆ ಆಟ ಪ್ರದರ್ಶಿಸಿದ್ದಾರೆ. ಅಲ್ಲದೆ ಹೀನಾಯ ಪ್ರದರ್ಶನಕ್ಕೆ ಐಪಿಎಲ್ ಕಾರಣ ಎಂಬ ಟೀಕೆಗಳು ಕೂಡ ಕೇಳಿ ಬರುತ್ತಿವೆ. ಏಕೆಂದರೆ ಐಪಿಎಲ್ ಮುಗಿದ ಬಳಿಕ ಬ್ರೇಕ್ ಪಡೆಯದೇ ಟೀಮ್ ಇಂಡಿಯಾ ಟಿ20 ವಿಶ್ವಕಪ್​ಗೆ ಸಜ್ಜಾಗಿತ್ತು. ಇಲ್ಲಿ ಆಟಗಾರರಿಗೂ ಹಾಗೂ ಬಿಸಿಸಿಐಗೆ ಹಣವೇ ಮುಖ್ಯವಾಗಿತ್ತು ಹೊರತು ದೇಶದ ಪ್ರತಿಷ್ಠೆ ವಿಷಯವಾಗಿರಲಿಲ್ಲ. ಹೀಗಾಗಿ ಐಪಿಎಲ್ ಬ್ಯಾನ್ ಮಾಡುವಂತೆ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ದದ ಸೋಲಿನೊಂದಿಗೆ ಟ್ವಿಟರ್​ನಲ್ಲಿ #BanIPL ಹ್ಯಾಷ್​ ಟ್ಯಾಗ್ ಟ್ರೆಂಡ್ ಆಗಿತ್ತು. ಈ ಹ್ಯಾಷ್​ ಟ್ಯಾಗ್ ಈಗಲೂ ಮುಂದುವರೆದಿದ್ದು, ಅನೇಕ ಕ್ರಿಕೆಟ್​ ಪ್ರೇಮಿಗಳು ನಮಗೆ ಐಪಿಎಲ್​ಗಿಂತ ಟೀಮ್ ಇಂಡಿಯಾದ ಪ್ರದರ್ಶನ ಮುಖ್ಯ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಭಾರತ ತಂಡದ 2 ಪಂದ್ಯಗಳ ಪ್ರದರ್ಶನ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ.

ಸದ್ಯ ಸತತ ಎರಡು ಸೋಲನುಭವಿಸಿರುವ ಭಾರತಕ್ಕೆ ಇನ್ನೂ ಮೂರು ಪಂದ್ಯಗಳಿವೆ. ಅಫ್ಘಾನಿಸ್ತಾನ್, ನಮೀಬಿಯಾ ಹಾಗೂ ಸ್ಕಾಟ್ಲೆಂಡ್ ವಿರುದ್ದ ಭರ್ಜರಿ ಜಯ ಸಾಧಿಸಿ ನೆಟ್​ ರನ್​ರೇಟ್ ಹೆಚ್ಚಿಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ. ಒಂದು ವೇಳೆ ಈ ಮೂರು ಪಂದ್ಯಗಳಲ್ಲಿ ಭಾರತ ಜಯಿಸಿದರೂ ಸೆಮಿಫೈನಲ್​ಗೇರುವುದು ಅನುಮಾನ. ಏಕೆಂದರೆ ಅಫ್ಘಾನಿಸ್ತಾನ್-ನ್ಯೂಜಿಲೆಂಡ್ ನಡುವಣ ಪಂದ್ಯದಲ್ಲಿ ಅಫ್ಘಾನಿಸ್ತಾನ್ ಗೆದ್ದರೆ ಮಾತ್ರ ಟೀಮ್ ಇಂಡಿಯಾಗೆ ನೆಟ್​ ರನ್​ ರೇಟ್​​ ಮೂಲಕ ಸೆಮಿಫೈನಲ್ ಪ್ರವೇಶಿಸುವ ಅವಕಾಶ ದೊರೆಯಲಿದೆ. ಹೀಗಾಗಿ ಮುಂದಿನ 3 ಪಂದ್ಯಗಳಲ್ಲೂ ಜಯ ಸಾಧಿಸಿದರೂ ಸೆಮಿಫೈನಲ್ ಅವಕಾಶಕ್ಕಾಗಿ ಭಾರತ ತಂಡ ಅಫ್ಘಾನಿಸ್ತಾನ್-ನ್ಯೂಜಿಲೆಂಡ್ ನಡುವಣ ಪಂದ್ಯದ ಫಲಿತಾಂಶವನ್ನು ಎದುರು ನೋಡಬೇಕು.

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

(Ban IPL Trends On Twitter After Team India’s 8 Wicket Loss To New Zealand)

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ