AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WI vs BAN: ಹೀನಾಯ ಸೋಲಿನ ಬೆನ್ನಲ್ಲೇ ಬಾಂಗ್ಲಾ ತಂಡಕ್ಕೆ ಶೇ.20 ರಷ್ಟು ದಂಡ..!

West Indies vs Bangladesh: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 193 ರನ್​ ಕಲೆಹಾಕಿತ್ತು.

WI vs BAN: ಹೀನಾಯ ಸೋಲಿನ ಬೆನ್ನಲ್ಲೇ ಬಾಂಗ್ಲಾ ತಂಡಕ್ಕೆ ಶೇ.20 ರಷ್ಟು ದಂಡ..!
Bangladesh Team
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 07, 2022 | 10:48 AM

ಡೊಮಿನಿಕಾದಲ್ಲಿ ನಡೆದ ವೆಸ್ಟ್ ಇಂಡೀಸ್ (West Indies vs Bangladesh) ವಿರುದ್ದದ ಎರಡನೇ ಟಿ20 ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್​ಗಾಗಿ ಬಾಂಗ್ಲಾದೇಶಕ್ಕೆ ಪಂದದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ. ನಿಗದಿತ ಸಮಯಕ್ಕಿಂತ ನಿಧಾನವಾಗಿ ಓವರ್​ಗಳನ್ನು ಪೂರ್ಣಗೊಳಿಸಿದ್ದಕ್ಕಾಗಿ ಐಸಿಸಿ ಎಲೈಟ್ ಪ್ಯಾನೆಲ್ ಆಫ್ ಮ್ಯಾಚ್ ರೆಫರಿ ರಿಚಿ ರಿಚರ್ಡ್‌ಸನ್ ಈ ದಂಡ ವಿಧಿಸಿದರು. ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಪ್ರಕಾರ, ಕನಿಷ್ಠ ಓವರ್-ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ, ಆಟಗಾರರು ತಮ್ಮ ತಂಡವು ನಿಗದಿತ ಸಮಯದಲ್ಲಿ ಬೌಲಿಂಗ್ ಮಾಡಲು ವಿಫಲರಾದರೆ ಪ್ರತಿ ಓವರ್‌ಗೆ ಅವರ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡವನ್ನು ವಿಧಿಸಲಾಗುತ್ತದೆ.

ತಂಡದ ನಿಧಾನಗತಿಯ ಬೌಲಿಂಗ್​ ತಪ್ಪನ್ನು ಬಾಂಗ್ಲಾದೇಶದ ನಾಯಕ ಮಹಮ್ಮದುಲ್ಲಾ ಒಪ್ಪಿಕೊಂಡಿದ್ದು, ಹೀಗಾಗಿ ಔಪಚಾರಿಕ ವಿಚಾರಣೆಯ ಅಗತ್ಯವಿರಲಿಲ್ಲ ಎಂದು ಮ್ಯಾಚ್ ರೆಫರಿ ತಿಳಿಸಿದ್ದಾರೆ. ಆನ್-ಫೀಲ್ಡ್ ಅಂಪೈರ್‌ಗಳಾದ ಲೆಸ್ಲಿ ರೈಫರ್ ಜೂನಿಯರ್ ಮತ್ತು ನಿಗೆಲ್ ಡುಗಿಡ್, ಮೂರನೇ ಅಂಪೈರ್ ಗ್ರೆಗೊರಿ ಬ್ರಾಥ್‌ವೈಟ್ ಮತ್ತು ನಾಲ್ಕನೇ ಅಂಪೈರ್ ಪ್ಯಾಟ್ರಿಕ್ ಗುಸ್ಟರ್ಡ್ ಅವರು ರೆಫರಿಗೆ ಬಾಂಗ್ಲಾದೇಶದ ವಿರುದ್ದ ಸ್ಲೋ ಓವರ್​ ರೇಟ್ ದೂರನ್ನು ನೀಡಿದ್ದರು. ಇತ್ತ ಪಂದ್ಯ ಸೋತಿದ್ದ ಬಾಂಗ್ಲಾದೇಶ ತಂಡವು ಇದೀಗ ಪಂದ್ಯದ ಶುಲ್ಕದ ಶೇ.20 ರಷ್ಟು ದಂಡ ಪಾವತಿಸಬೇಕಾಗಿ ಬಂದಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 193 ರನ್​ ಕಲೆಹಾಕಿತ್ತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಬಾಂಗ್ಲಾದೇಶ ತಂಡವು 6 ವಿಕೆಟ್ ನಷ್ಟಕ್ಕೆ 158 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದರೊಂದಿಗೆ ವಿಂಡೀಸ್ 35 ರನ್​ಗಳಿಂದ ಭರ್ಜರಿ ಜಯ ಸಾಧಿಸಿತು. ವೆಸ್ಟ್ ಇಂಡೀಸ್ ಪರ 28 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 2 ಫೋರ್​ನೊಂದಿಗೆ 61 ರನ್​ ಬಾರಿಸಿದ್ದ ರೋವ್​ಮನ್ ಪೊವೆಲ್​ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇದನ್ನೂ ಓದಿ
Image
IND vs ENG: ಟೀಮ್ ಇಂಡಿಯಾ ಆಟಗಾರರು ವಿಶೇಷ ಕ್ಯಾಪ್ ಧರಿಸಿ ಕಣಕ್ಕಿಳಿದಿದ್ದು ಯಾಕೆ ಗೊತ್ತಾ?
Image
6,6,6,6,6: ಒಂದೇ ಓವರ್​ನಲ್ಲಿ ಸಿಕ್ಸ್​ಗಳ ಸುರಿಮಳೆ: ಟಿ20 ಬ್ಲಾಸ್ಟ್​ನಲ್ಲಿ ಹೊಸ ದಾಖಲೆ
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!
Image
Test Cricket Records: ಟೆಸ್ಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ್ದು ಯಾರು ಗೊತ್ತಾ?
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ