AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WI vs BAN: ಹೀನಾಯ ಸೋಲಿನ ಬೆನ್ನಲ್ಲೇ ಬಾಂಗ್ಲಾ ತಂಡಕ್ಕೆ ಶೇ.20 ರಷ್ಟು ದಂಡ..!

West Indies vs Bangladesh: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 193 ರನ್​ ಕಲೆಹಾಕಿತ್ತು.

WI vs BAN: ಹೀನಾಯ ಸೋಲಿನ ಬೆನ್ನಲ್ಲೇ ಬಾಂಗ್ಲಾ ತಂಡಕ್ಕೆ ಶೇ.20 ರಷ್ಟು ದಂಡ..!
Bangladesh Team
TV9 Web
| Edited By: |

Updated on: Jul 07, 2022 | 10:48 AM

Share

ಡೊಮಿನಿಕಾದಲ್ಲಿ ನಡೆದ ವೆಸ್ಟ್ ಇಂಡೀಸ್ (West Indies vs Bangladesh) ವಿರುದ್ದದ ಎರಡನೇ ಟಿ20 ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್​ಗಾಗಿ ಬಾಂಗ್ಲಾದೇಶಕ್ಕೆ ಪಂದದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ. ನಿಗದಿತ ಸಮಯಕ್ಕಿಂತ ನಿಧಾನವಾಗಿ ಓವರ್​ಗಳನ್ನು ಪೂರ್ಣಗೊಳಿಸಿದ್ದಕ್ಕಾಗಿ ಐಸಿಸಿ ಎಲೈಟ್ ಪ್ಯಾನೆಲ್ ಆಫ್ ಮ್ಯಾಚ್ ರೆಫರಿ ರಿಚಿ ರಿಚರ್ಡ್‌ಸನ್ ಈ ದಂಡ ವಿಧಿಸಿದರು. ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಪ್ರಕಾರ, ಕನಿಷ್ಠ ಓವರ್-ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ, ಆಟಗಾರರು ತಮ್ಮ ತಂಡವು ನಿಗದಿತ ಸಮಯದಲ್ಲಿ ಬೌಲಿಂಗ್ ಮಾಡಲು ವಿಫಲರಾದರೆ ಪ್ರತಿ ಓವರ್‌ಗೆ ಅವರ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡವನ್ನು ವಿಧಿಸಲಾಗುತ್ತದೆ.

ತಂಡದ ನಿಧಾನಗತಿಯ ಬೌಲಿಂಗ್​ ತಪ್ಪನ್ನು ಬಾಂಗ್ಲಾದೇಶದ ನಾಯಕ ಮಹಮ್ಮದುಲ್ಲಾ ಒಪ್ಪಿಕೊಂಡಿದ್ದು, ಹೀಗಾಗಿ ಔಪಚಾರಿಕ ವಿಚಾರಣೆಯ ಅಗತ್ಯವಿರಲಿಲ್ಲ ಎಂದು ಮ್ಯಾಚ್ ರೆಫರಿ ತಿಳಿಸಿದ್ದಾರೆ. ಆನ್-ಫೀಲ್ಡ್ ಅಂಪೈರ್‌ಗಳಾದ ಲೆಸ್ಲಿ ರೈಫರ್ ಜೂನಿಯರ್ ಮತ್ತು ನಿಗೆಲ್ ಡುಗಿಡ್, ಮೂರನೇ ಅಂಪೈರ್ ಗ್ರೆಗೊರಿ ಬ್ರಾಥ್‌ವೈಟ್ ಮತ್ತು ನಾಲ್ಕನೇ ಅಂಪೈರ್ ಪ್ಯಾಟ್ರಿಕ್ ಗುಸ್ಟರ್ಡ್ ಅವರು ರೆಫರಿಗೆ ಬಾಂಗ್ಲಾದೇಶದ ವಿರುದ್ದ ಸ್ಲೋ ಓವರ್​ ರೇಟ್ ದೂರನ್ನು ನೀಡಿದ್ದರು. ಇತ್ತ ಪಂದ್ಯ ಸೋತಿದ್ದ ಬಾಂಗ್ಲಾದೇಶ ತಂಡವು ಇದೀಗ ಪಂದ್ಯದ ಶುಲ್ಕದ ಶೇ.20 ರಷ್ಟು ದಂಡ ಪಾವತಿಸಬೇಕಾಗಿ ಬಂದಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 193 ರನ್​ ಕಲೆಹಾಕಿತ್ತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಬಾಂಗ್ಲಾದೇಶ ತಂಡವು 6 ವಿಕೆಟ್ ನಷ್ಟಕ್ಕೆ 158 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದರೊಂದಿಗೆ ವಿಂಡೀಸ್ 35 ರನ್​ಗಳಿಂದ ಭರ್ಜರಿ ಜಯ ಸಾಧಿಸಿತು. ವೆಸ್ಟ್ ಇಂಡೀಸ್ ಪರ 28 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 2 ಫೋರ್​ನೊಂದಿಗೆ 61 ರನ್​ ಬಾರಿಸಿದ್ದ ರೋವ್​ಮನ್ ಪೊವೆಲ್​ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇದನ್ನೂ ಓದಿ
Image
IND vs ENG: ಟೀಮ್ ಇಂಡಿಯಾ ಆಟಗಾರರು ವಿಶೇಷ ಕ್ಯಾಪ್ ಧರಿಸಿ ಕಣಕ್ಕಿಳಿದಿದ್ದು ಯಾಕೆ ಗೊತ್ತಾ?
Image
6,6,6,6,6: ಒಂದೇ ಓವರ್​ನಲ್ಲಿ ಸಿಕ್ಸ್​ಗಳ ಸುರಿಮಳೆ: ಟಿ20 ಬ್ಲಾಸ್ಟ್​ನಲ್ಲಿ ಹೊಸ ದಾಖಲೆ
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!
Image
Test Cricket Records: ಟೆಸ್ಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ್ದು ಯಾರು ಗೊತ್ತಾ?
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ