AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BAN vs AFG: ಅಫ್ಘಾನ್ ವಿರುದ್ಧ ಸೇಡು ತೀರಿಸಿಕೊಂಡ ಬಾಂಗ್ಲಾ ಹುಲಿಗಳು

Bangladesh vs Afghanistan: 117 ರನ್​ಗಳ ಗುರಿ ಪಡೆದ ಬಾಂಗ್ಲಾದೇಶ್ ತಂಡಕ್ಕೆ ಲಿಟ್ಟನ್ ದಾಸ್ (35) ಹಾಗೂ ಅಫೀಫ್ ಹೊಸೈನ್ (24) ಉತ್ತಮ ಆರಂಭ ಒದಗಿಸಿದ್ದರು.

BAN vs AFG: ಅಫ್ಘಾನ್ ವಿರುದ್ಧ ಸೇಡು ತೀರಿಸಿಕೊಂಡ ಬಾಂಗ್ಲಾ ಹುಲಿಗಳು
Bangladesh Team
TV9 Web
| Edited By: |

Updated on: Jul 16, 2023 | 10:35 PM

Share

Bangladesh vs Afghanistan, 2nd T20I: ಸಿಲ್ಹೆಟ್ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶ್ ತಂಡವು ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಬಾಂಗ್ಲಾದೇಶ್ ಸರಣಿ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾ ತಂಡದ ನಾಯಕ ಶಕೀಬ್ ಅಲ್ ಹಸನ್ ಬೌಲಿಂಗ್ ಆಯ್ದುಕೊಂಡಿದ್ದರು.

ಆದರೆ ಪಂದ್ಯದ ಆರಂಭದಲ್ಲೇ ಮಳೆ ಶುರುವಾಗಿದ್ದರಿಂದ ತಲಾ 17 ಓವರ್​ಗಳಿಗೆ ಪಂದ್ಯವನ್ನು ಸೀಮಿತಗೊಳಿಸಲಾಯಿತು. ಅದರಂತೆ ಮೊದಲ ಇನಿಂಗ್ಸ್ ಆಡಿದ ಅಫ್ಘಾನಿಸ್ತಾನ್ ಪರ ಪ್ರಮುಖ ಬ್ಯಾಟರ್​ಗಳು ವಿಫಲರಾದರು.

ಇದಾಗ್ಯೂ ಇಬ್ರಾಹಿಂ ಝದ್ರಾನ್ (22), ಅಜ್ಮತುಲ್ಲಾ (25) ಹಾಗೂ ಕರೀಮ್ ಜನತ್ 20 ರನ್​ಗಳಿಸುವ ಮೂಲಕ ತಂಡದ ಮೊತ್ತವನ್ನು 17 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 116 ಕ್ಕೆ ತಂದು ನಿಲ್ಲಿಸಿದರು.

117 ರನ್​ಗಳ ಗುರಿ ಪಡೆದ ಬಾಂಗ್ಲಾದೇಶ್ ತಂಡಕ್ಕೆ ಲಿಟ್ಟನ್ ದಾಸ್ (35) ಹಾಗೂ ಅಫೀಫ್ ಹೊಸೈನ್ (24) ಉತ್ತಮ ಆರಂಭ ಒದಗಿಸಿದ್ದರು. ಇನ್ನು ತೌಹಿದ್ ಹೃದಯ್ 19 ರನ್​ಗಳ ಕಾಣಿಕೆ ನೀಡಿದರೆ, ನಾಯಕ ಶಕೀಬ್ ಅಲ್ ಹಸನ್ ಅಜೇಯ 18 ರನ್ ಬಾರಿಸಿದರು. ಈ ಮೂಲಕ 16.1 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 119 ರನ್​ಗಳಿಸಿ ಬಾಂಗ್ಲಾದೇಶ್ ತಂಡವು ಜಯ ಸಾಧಿಸಿತು.

ಈ ಗೆಲುವಿನೊಂದಿಗೆ 2 ಪಂದ್ಯಗಳ ಸರಣಿಯನ್ನು ಬಾಂಗ್ಲಾದೇಶ್ 2-0 ಅಂತರದಿಂದ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ್ 2 ವಿಕೆಟ್​ಗಳ ಜಯ ಸಾಧಿಸಿತ್ತು.

ಬಾಂಗ್ಲಾದೇಶ್ ಪ್ಲೇಯಿಂಗ್ 11: ಲಿಟ್ಟನ್ ದಾಸ್ (ವಿಕೆಟ್ ಕೀಪರ್) , ಅಫೀಫ್ ಹೊಸೈನ್ , ಶಾಕಿಬ್ ಅಲ್ ಹಸನ್ (ನಾಯಕ) , ತೌಹಿದ್ ಹೃದಯ್ , ನಜ್ಮುಲ್ ಹೊಸೈನ್ ಶಾಂಟೋ , ಶಮೀಮ್ ಹೊಸೈನ್ , ಮೆಹಿದಿ ಹಸನ್ ಮಿರಾಜ್ , ತಸ್ಕಿನ್ ಅಹ್ಮದ್ , ನಸುಮ್ ಅಹ್ಮದ್ , ಹಸನ್ ಮಹ್ಮದ್ , ರಹ್ ಮುಸ್ತಾಫ್ ಝುರ್.

ಅಫ್ಘಾನಿಸ್ತಾನ್ ಪ್ಲೇಯಿಂಗ್ 11: ಹಝರತುಲ್ಲಾ ಝಜೈ , ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್) , ಇಬ್ರಾಹಿಂ ಝದ್ರಾನ್ , ಕರೀಮ್ ಜನತ್ , ಮೊಹಮ್ಮದ್ ನಬಿ , ನಜೀಬುಲ್ಲಾ ಝದ್ರಾನ್ , ಅಜ್ಮತುಲ್ಲಾ ಒಮರ್ಜಾಯ್ , ರಶೀದ್ ಖಾನ್ (ನಾಯಕ) , ಮುಜೀಬ್ ಉರ್ ರಹಮಾನ್ , ವಫಾದರ್ ಮೊಮಂಡ್ , ಫಜಲ್ಹಕ್ ಫಾರೂಖಿ.

ಇದನ್ನೂ ಓದಿ: IPL 2024: RCB ತಂಡಕ್ಕೆ ಮೇಜರ್ ಸರ್ಜರಿ: ಕೋಚ್​ಗೆ ಗೇಟ್​ ಪಾಸ್..?

ಸೇಡು ತೀರಿಸಿಕೊಂಡ ಬಾಂಗ್ಲಾ ಹುಲಿಗಳು:

ಟಿ20 ಸರಣಿಯನ್ನು ಗೆಲ್ಲುವ ಮೂಲಕ ಬಾಂಗ್ಲಾದೇಶ್ ಏಕದಿನ ಸರಣಿ ಸೋಲಿನ ಸೇಡನ್ನು ತೀರಿಸಿಕೊಂಡಿದೆ. ಈ ಸರಣಿಗೂ ಮುನ್ನ ನಡೆದ 3 ಪಂದ್ಯಗಳ ಏಕದಿನ ಸರಣಿಯನ್ನು ಅಫ್ಘಾನಿಸ್ತಾನ್ ತಂಡವು 2-1 ಅಂತರದಿಂದ ಗೆದ್ದುಕೊಂಡಿತ್ತು. ಇದೀಗ ಟಿ20 ಸರಣಿಯಲ್ಲಿ ಜಯ ಸಾಧಿಸಿ ಬಾಂಗ್ಲಾದೇಶ್ ತಂಡವು ಲೆಕ್ಕ ಚುಕ್ತಾ ಮಾಡಿಕೊಂಡಿದೆ.

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!