AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BAN vs NZ: ನ್ಯೂಜಿಲೆಂಡ್ ವಿರುದ್ಧದ ಸರಣಿಯೂ ವಶ: ಒಂದೇ ತಿಂಗಳಲ್ಲಿ ಮೂರು ಸರಣಿ ಗೆದ್ದ ಬಾಂಗ್ಲಾದೇಶ

ನ್ಯೂಜಿಲೆಂಡ್ ಐದನೇ ಟಿ-20 ಪಂದ್ಯದಲ್ಲಿ 27 ರನ್​ಗಳ ಗೆಲುವು ಸಾಧಿಸಿತಾದರೂ ಬಾಂಗ್ಲಾ 2-3 ಅಂತರದ ಮುನ್ನಡೆಯಿದ್ದರಿಂದ ಸರಣಿ ವಶಪಡಿಸಿಕೊಂಡಿತು.

BAN vs NZ: ನ್ಯೂಜಿಲೆಂಡ್ ವಿರುದ್ಧದ ಸರಣಿಯೂ ವಶ: ಒಂದೇ ತಿಂಗಳಲ್ಲಿ ಮೂರು ಸರಣಿ ಗೆದ್ದ ಬಾಂಗ್ಲಾದೇಶ
BAN vs NZ
TV9 Web
| Edited By: |

Updated on: Sep 11, 2021 | 10:18 AM

Share

ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಟಿ-20 ಸರಣಿಯಲ್ಲಿ ಆತಿಥೇಯ ಬಾಂಗ್ಲಾದೇಶ ತಂಡ (Bangladesh vs New Zealand ) 3-2 ಅಂತರದಿಂದ ಗೆದ್ದು ಸರಣಿ ವಶಪಡಿಸಿಕೊಂಡಿದೆ. ಈ ಮೂಲಕ ವಿಶೇಷ ಸಾಧನೆ ಮಾಡಿದೆ. ನಿನ್ನೆ ಕೊನೆಗೊಂಡ ಅಂತಿಮ ಐದನೇ ಟಿ-20 ಪಂದ್ಯದಲ್ಲಿ ನ್ಯೂಜಿಲೆಂಡ್ 27 ರನ್​ಗಳ ಗೆಲುವು ಸಾಧಿಸಿತು. ಆದರೂ ಬಾಂಗ್ಲಾ ಮೊದಲ ಪಂದ್ಯ, ಎರಡನೇ ಮತ್ತು ನಾಲ್ಕನೇ ಪಂದ್ಯದಲ್ಲಿ ಗೆದ್ದು ಬೀಗುವ ಮೂಲಕ ಸರಣಿಯನ್ನು ವಶಪಡಿಸಿಕೊಂಡಿದೆ.

ಶುಕ್ರವಾರ ನಡೆದ ಐದನೇ ಟಿ-20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಓಪನರ್​ಗಳಾದ ಫಿಲ್ ಅಲೆನ್ (41) ಹಾಗೂ ರಚಿನಾ ರವೀಂದ್ರ (17) ಅರ್ಧಶತಕದ ಭರ್ಜರಿ ಆರಂಭ ಒದಗಿಸಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಟಾಮ್ ಲಾಥಮ್ ಅಜೇಯ ಆಟವಾಡಿದರು. 37 ಎಸೆತಗಳಲ್ಲಿ ತಲಾ 2 ಬೌಂಡರಿ, ಸಿಕ್ಸರ್ ಸಿಡಿಸಿ ಅಜೇಯ 50 ರನ್ ಬಾರಿಸಿದರು.

ಆದರೆ, ಇದರ ನಡುವೆ ಬಂದ ಬ್ಯಾಟ್ಸ್​ಮನ್​ಗಳು ಯಾರೂ ಹೆಚ್ಚು ಪರಿಣಾಮಕಾರಿಯಾಗಿ ಗೋಚರಿಸಿಲ್ಲ. ಅಂತಿಮ ಹಂತದಲ್ಲಿ ಹೆನ್ರಿ ನಿಕೋಲ್ಸ್ 20 ಹಾಗೂ ಮೆಕ್ ಕಾನ್ಚಿ ಅಜೇಯ 17 ರನ್ ಬಾರಿಸಿದರು. ಪರಿಣಾಮ ಇಂಗ್ಲೆಂಡ್ 20 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 161 ರನ್ ಕಲೆಹಾಕಿತು.

ಸವಾಲಿನ ಟಾರ್ಗೆಟ್ ಬೆನ್ನಟ್ಟಿದ ಬಾಂಗ್ಲಾದೇಶ ಈ ಬಾರಿ ನಿಧಾನಗತಿಯ ಆರಂಭ ಪಡೆದುಕೊಂಡಿತು. ಓಪನರ್​ಗಳಾದ ಮೊಹಮ್ಮದ್ ನೈಮ್ 21 ಎಸೆತಗಳಲ್ಲಿ 23 ರನ್ ಹಾಗೂ ಲಿಟನ್ ದಾಸ್ 12 ಎಸೆತಗಳಲ್ಲಿ 10 ರನ್ ಗಳಿಸಿ ಔಟ್ ಆದರು.

ಮಧ್ಯಮ ಕ್ರಮಾಂಕದಲ್ಲಿ ಅಸಿಫ್ ಹುಸೈನ್ 33 ಎಸೆತಗಳಲ್ಲಿ 2 ಬೌಂಡರಿ, 3 ಸಿಕ್ಸರ್ ಬಾರಿಸಿ ಅಜೇಯ 49 ರನ್ ಸಿಡಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ನಾಯಕ ಮೊಹಮ್ಮದುಲ್ಲಾ 23 ರನ್ ಕೂಡ ಉಪಯೋಗಕ್ಕೆ ಬರಲಿಲ್ಲ. ಅಂತಿಮವಾಗಿ ಬಾಂಗ್ಲಾದೇಶ 8 ವಿಕೆಟ್ ಕಳೆದುಕೊಂಡು 134 ರನ್ ಗಳಿಸಿ ಸೋಲೊಪ್ಪಿಕೊಂಡಿತು.

ನ್ಯೂಜಿಲೆಂಡ್ ಐದನೇ ಟಿ-20 ಪಂದ್ಯದಲ್ಲಿ 27 ರನ್​ಗಳ ಗೆಲುವು ಸಾಧಿಸಿತಾದರೂ ಬಾಂಗ್ಲಾ 2-3 ಅಂತರದ ಮುನ್ನಡೆಯಿದ್ದರಿಂದ ಸರಣಿ ವಶಪಡಿಸಿಕೊಂಡಿತು. ಈ ಮೂಲಕ ಬಾಂಗ್ಲಾದೇಶ ಒಂದೇ ತಿಂಗಳಲ್ಲಿ 3 ಸರಣಿಯನ್ನ ವಶಪಡಿಸಿಕೊಂಡು ಬಲಿಷ್ಠ ತಂಡವಾಗಿ ಹೊರಹೊಮ್ಮಿದೆ.

ಇದಕ್ಕೂ ಮುನ್ನ ಬಾಂಗ್ಲಾದೇಶ ಟಿ-20 ತಂಡ ಜಿಂಬಾಬ್ವೆ ಪ್ರವಾಸ ಕೈಗೊಂಡಿತ್ತು. ಈ ವೇಳೆ 3-0 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಬಾಂಗ್ಲಾ ಹುಲಿಗಳು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದರು. ಇನ್ನೂ ಈ ಟೂರ್ನಿಯ ನಂತರ ತವರಿನಲ್ಲೇ ಆಸ್ಪ್ರೇಲಿಯಾ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನು ಆಯೋಜಿಸಲಾಗಿತ್ತು. ಇದರಲ್ಲಿ ಬಾಂಗ್ಲಾದೇಶ 4-1 ಅಂತರದಲ್ಲಿ ಭಾರೀ ಜಯಭೇರಿ ಭಾರಿಸಿತ್ತು.

Virat Kohli: ಟೆಸ್ಟ್ ಪಂದ್ಯ ರದ್ದು: ವಿರಾಟ್ ಕೊಹ್ಲಿಗಾಗಿ ಮ್ಯಾಂಚೆಸ್ಟರ್​​ಗೆ ಬರಲಿದೆ ಆರ್​ಸಿಬಿಯ ವಿಶೇಷ ವಿಮಾನ

India vs England: ಬಿಸಿಸಿಐಗೆ ತಲೆನೋವಾದ ರೋಹಿತ್, ಜಡೇಜಾ ಸೇರಿ ಟೀಮ್ ಇಂಡಿಯಾದ 6 ಸ್ಟಾರ್ ಆಟಗಾರರು

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ