AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶ್ ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಔಟ್

ನಜ್ಮುಲ್ ಹೊಸೈನ್ ಶಾಂಟೊ 2023 ರಲ್ಲಿ ಬಾಂಗ್ಲಾದೇಶ್ ಪರ ಎಲ್ಲಾ ಸ್ವರೂಪಗಳಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್. ಈ ವರ್ಷ ಶಾಂಟೊ ನಾಲ್ಕು ಶತಕಗಳು ಮತ್ತು ಐದು ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಈ ವರ್ಷ ಒಟ್ಟು 1,078 ರನ್ ಕಲೆಹಾಕುವ ಮೂಲಕ ಬಾಂಗ್ಲಾದೇಶ್ ತಂಡ ಟಾಪ್ ಸ್ಕೋರರ್ ಎನಿಸಿಕೊಂಡಿದ್ದಾರೆ.

ಬಾಂಗ್ಲಾದೇಶ್ ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಔಟ್
nazmul hasan shanto
TV9 Web
| Edited By: |

Updated on:Sep 05, 2023 | 6:58 PM

Share

ಏಷ್ಯಾಕಪ್​ನಲ್ಲಿ ಸೂಪರ್-4 ಹಂತಕ್ಕೇರಿರುವ ಬಾಂಗ್ಲಾದೇಶ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ನಜ್ಮುಲ್ ಹೊಸೈನ್ ಶಾಂಟೊ ಅವರು ಮಂಡಿರಜ್ಜು ಗಾಯದಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಇತ್ತ ಬಾಂಗ್ಲಾದೇಶ್ ತಂಡವು ಸೂಪರ್-4 ಹಂತಕ್ಕೇರಲು ಮುಖ್ಯ ಕಾರಣ ನಜ್ಮುಲ್ ಅವರ ಉತ್ತಮ ಪ್ರದರ್ಶನ.

ಏಕೆಂದರೆ ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ವಿರುದ್ಧದ ಪಂದ್ಯಗಳಲ್ಲಿ ಕ್ರಮವಾಗಿ 89 ಮತ್ತು 104 ರನ್ ಬಾರಿಸಿ ಮಿಂಚಿದ್ದರು. ಆದರೆ ಅಫ್ಘಾನ್​ ವಿರುದ್ಧದ ಪಂದ್ಯದ ವೇಳೆ ನಜ್ಮುಲ್ ಎಡ ಮಂಡಿ ನೋವಿಗೆ ಒಳಗಾಗಿದ್ದರು. ಹೀಗಾಗಿ ಫೀಲ್ಡಿಂಗ್​ನಿಂದ ಹಿಂದೆ ಸರಿದಿದ್ದರು.

ಇದೀಗ ಶಾಂಟೊ ಅವರ ಎಂಆರ್‌ಐ ಸ್ಕ್ಯಾನ್ ವರದಿ ಬಂದಿದ್ದು, ಅವರ ಸ್ನಾಯುಗಳಲ್ಲಿ ಸಮಸ್ಯೆಯಿರುವುದು ದೃಢಪಟ್ಟಿದೆ ಎಂದು ತಂಡದ ಫಿಸಿಯೋ ಬೈಜೆದುಲ್ ಇಸ್ಲಾಂ ಖಾನ್ ಹೇಳಿದ್ದಾರೆ. ಅಲ್ಲದೆ ಮುನ್ನೆಚ್ಚರಿಕೆಯಾಗಿ, ಶಾಂಟೊ ಅವರು ಏಷ್ಯಾಕಪ್​ನಲ್ಲಿ ಕಣಕ್ಕಿಳಿಯುವುದಿಲ್ಲ. ಬದಲಾಗಿ ಏಕದಿನ ವಿಶ್ವಕಪ್​ಗೂ ಮುನ್ನ ಸಂಪೂರ್ಣ ಫಿಟ್​ನೆಸ್ ಸಾಧಿಸುವತ್ತ ಗಮನ ಹರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಅಂದರೆ ಇದೀಗ ಬಾಂಗ್ಲಾದೇಶ್ ನಿರ್ಣಾಯಕ ಹಂತಕ್ಕೇರಿದರೂ ಎಡಗೈ ದಾಂಡಿಗ ನಜ್ಮುಲ್ ಹೊಸೈನ್ ಹೊರಗುಳಿಯುತ್ತಿರುವುದು ಬಾಂಗ್ಲಾ ತಂಡ ಪಾಲಿಗೆ ಹಿನ್ನಡೆಯನ್ನುಂಟು ಮಾಡಲಿದೆ.

ಏಕೆಂದರೆ ನಜ್ಮುಲ್ 2023 ರಲ್ಲಿ ಬಾಂಗ್ಲಾದೇಶ್ ಪರ ಎಲ್ಲಾ ಸ್ವರೂಪಗಳಲ್ಲಿ ನಾಲ್ಕು ಶತಕಗಳು ಮತ್ತು ಐದು ಅರ್ಧಶತಕಗಳನ್ನು ಬಾರಿಸಿದ ಆಟಗಾರ. ಅಷ್ಟೇ ಅಲ್ಲದೆ ಈ ವರ್ಷ ಒಟ್ಟು 1,078 ರನ್ ಕಲೆಹಾಕುವ ಮೂಲಕ ಬಾಂಗ್ಲಾದೇಶ್ ತಂಡ ಟಾಪ್ ಸ್ಕೋರರ್ ಎನಿಸಿಕೊಂಡಿದ್ದಾರೆ.

ಇದೀಗ ಏಷ್ಯಾಕಪ್ ಸೂಪರ್-4 ಹಂತದ ಪಂದ್ಯಗಳಿಂದ ಅವರು ಹೊರಗುಳಿದಿದ್ದು, ಇದಾಗ್ಯೂ ಲಾಹೋರ್​ನಲ್ಲಿ ಬುಧವಾರ ಪಾಕಿಸ್ತಾನ್ ವಿರುದ್ಧ ನಡೆಯಲಿರುವ ಮೊದಲ ಸೂಪರ್ ಫೋರ್​ ಪಂದ್ಯದಲ್ಲಿ ಶಕೀಬ್ ಅಲ್ ಹಸನ್ ಪಡೆ ಗೆಲುವು ದಾಖಲಿಸಿದೆಯಾ ಕಾದು ನೋಡಬೇಕಿದೆ.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

ಬಾಂಗ್ಲಾದೇಶ್ ತಂಡ: ಶಕೀಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ತಂಝಿದ್ ತಮೀಮ್,  ತೌಹಿದ್ ಹೃದಯ್, ಮುಶ್ಫಿಕರ್ ರಹೀಮ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹ್ಮದ್, ಶೇಖ್ ಮಹಿದಿ, ನಸುಮ್ ಅಹ್ಮದ್, ಶಮೀಮ್ ಹೊಸೈನ್, ಶರೀಫುಲ್ ಇಸ್ಲಾಂ, ಇಬಾದತ್ ಹೊಸೈನ್, ನಯಿಮ್ ಶೇಖ್.

Published On - 6:57 pm, Tue, 5 September 23

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು