AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ವಾರದ ಹಿಂದೆ ಜನಿಸಿದ ಮಗಳ ಸಾವಿನ ನೋವಲ್ಲು ಶತಕ ಸಿಡಿಸಿ ತಂಡಕ್ಕೆ ನೆರವಾದ ವಿಷ್ಣು ಸೋಲಂಕಿ

Ranji Trophy: ವಿಷ್ಣು ಸೋಲಂಕಿ ಕೆಲ ದಿನಗಳ ಹಿಂದೆಯಷ್ಟೇ ತಂದೆಯಾದರು. ಅವರ ಮನೆಯ ಅಂಗಳದಲ್ಲಿ ಹೆಣ್ಣು ಮಗು ಜನಿಸಿತು. ಆದರೆ ಅನಾರೋಗ್ಯದ ಕಾರಣದಿಂದ ಆ ಮಗು ಸಾವನ್ನಪ್ಪಿತು.

Ranji Trophy: ವಾರದ ಹಿಂದೆ ಜನಿಸಿದ ಮಗಳ ಸಾವಿನ ನೋವಲ್ಲು ಶತಕ ಸಿಡಿಸಿ ತಂಡಕ್ಕೆ ನೆರವಾದ ವಿಷ್ಣು ಸೋಲಂಕಿ
ವಿಷ್ಣು ಸೋಲಂಕಿ
TV9 Web
| Updated By: ಪೃಥ್ವಿಶಂಕರ|

Updated on: Feb 26, 2022 | 3:15 PM

Share

ಈ ಕ್ರಿಕೆಟರ್ ವಿರಾಟ್ ಕೊಹ್ಲಿ (Virat Kohli) ಅಥವಾ ರಿಷಬ್ ಪಂತ್ (Rishabh Pant) ಅಂತಹ ಪ್ರಸಿದ್ಧ ಆಟಗಾರನಲ್ಲ. ಆದರೆ ಆತ ಆಟದ ಮೇಲೆ ತೋರಿದ ಉತ್ಸಾಹ ಅವರಿಗಿಂತ ಕಡಿಮೆಯಿಲ್ಲ. ತಂದೆಗೆ ತನ್ನ ಮಗುವಿನ ಮರಣದ ನೋವನ್ನು ಅರಗಿಸಿಕೊಳ್ಳುವುದು ಸುಲಭದ ಮಾತಲ್ಲ. ಆದರೆ, ಕ್ರಿಕೆಟ್‌ನ ವಿಷಯಕ್ಕೆ ಬಂದಾಗ, ತಂಡ ಸಂಕಷ್ಟದಲ್ಲಿದ್ದಾಗ ನೆರವಾಗಿ ಆ ಕ್ರಿಕೆಟರ್​ ಉತ್ಸಾಹಕ್ಕೆ ವಿಶಿಷ್ಟ ಉದಾಹರಣೆಯನ್ನು ನೀಡಿದರು. ನಾವು ಚಂಡೀಗಢ ವಿರುದ್ಧದ ರಣಜಿ ಟ್ರೋಫಿ ( Ranji Trophy) ಪಂದ್ಯದಲ್ಲಿ ಶತಕ ಸಿಡಿಸಿರುವ ವಿಷ್ಣು ಸೋಲಂಕಿ (Vishnu Solanki) ಬಗ್ಗೆ ಮಾತನಾಡುತ್ತಿದ್ದೇವೆ. ವಿಷ್ಣು ಸೋಲಂಕಿ ಕೆಲ ದಿನಗಳ ಹಿಂದೆಯಷ್ಟೇ ತಂದೆಯಾದರು. ಅವರ ಮನೆಯ ಅಂಗಳದಲ್ಲಿ ಹೆಣ್ಣು ಮಗು ಜನಿಸಿತು. ಆದರೆ ಅನಾರೋಗ್ಯದ ಕಾರಣದಿಂದ ಆ ಮಗು ಸಾವನ್ನಪ್ಪಿತು. ಮಗಳ ಸಾವು ವಿಷ್ಣುವನ್ನು ಬೆಚ್ಚಿಬೀಳಿಸಿತ್ತು. ಅವರ ಕುಟುಂಬದಲ್ಲಿ ಶೋಕ ಮಡುಗಟ್ಟಿತ್ತು. ಆದರೆ, ಬರೋಡಾ ಪರ ಕ್ರಿಕೆಟ್ ಆಡುವ ವಿಷ್ಣು ನೋವನ್ನು ಬದಿಗಿಟ್ಟು ರಣಜಿ ಟ್ರೋಫಿಯಲ್ಲಿ ಶತಕ ಸಿಡಿಸಿ ತಂಡಕ್ಕೆ ನೆರವಾಗಿದ್ದಾರೆ.

ವಿಷ್ಣು ಚಂಡೀಗಢದ ವಿರುದ್ಧ ಬರೋಡಾ ಪರ ಉತ್ತಮ ಆಟ ಪ್ರದರ್ಶಿಸಿಸಿ ಅದ್ಭುತ ಶತಕಕ್ಕೆ ಸ್ಕ್ರಿಪ್ಟ್ ಬರೆದರು. ಕಷ್ಟಗಳನ್ನು ದಾಟಿ ವಿಷ್ಣು ಸೋಲಂಕಿ ಈ ಶತಕ ಬಾರಿಸಿದ್ದನ್ನು ನೋಡಿದ ಬರೋಡಾ ಕ್ರಿಕೆಟ್ ಸಂಸ್ಥೆಯ ಸಿಇಒ ಅವರನ್ನು ರಿಯಲ್ ಹೀರೋ ಎಂದು ಬಣ್ಣಿಸಿದ್ದಾರೆ. ಇಷ್ಟೇ ಅಲ್ಲ, ವಿಷ್ಣು ಸೋಲಂಕಿ ಅವರ ಈ ದಿಟ್ಟ ಇನ್ನಿಂಗ್ಸ್‌ಗೆ ಎದುರಾಳಿ ತಂಡದ ಆಟಗಾರರು ಸಹ ಸೆಲ್ಯೂಟ್ ಹೊಡೆದಿದೆ.

ಸೋಲಂಕಿ ಆಟಕ್ಕೆ ಎದುರಾಳಿ ಸಲಾಂ

ರಣಜಿ ಟ್ರೋಫಿ ಎಲೈಟ್ ಗುಂಪಿನ ಬಿ ಪಂದ್ಯದಲ್ಲಿ ಚಂಡೀಗಢ ವಿರುದ್ಧ ವಿಷ್ಣು ಸೋಲಂಕಿ 12 ಬೌಂಡರಿಗಳ ಸಹಾಯದಿಂದ 104 ರನ್ ಗಳಿಸಿದರು. ಅವರ ಬ್ಯಾಟ್‌ನಿಂದ ಈ ಶತಕದ ಇನ್ನಿಂಗ್ಸ್‌ನಿಂದಾಗಿ ತಂಡವು ಚಂಡೀಗಢ ವಿರುದ್ಧ ಪ್ರಾಬಲ್ಯ ಮೆರೆದಿದೆ. ಈಗ ಸೌರಾಷ್ಟ್ರ ಪರ ರಣಜಿ ಟ್ರೋಫಿ ಆಡುತ್ತಿರುವ ಬ್ಯಾಟ್ಸ್‌ಮನ್ ಶೆಲ್ಡನ್ ಜಾಕ್ಸನ್ ಸೋಶೀಯಲ್ ಮೀಡಿಯಾದಲ್ಲಿ ಸೋಲುಂಕಿ ಶತಕಕ್ಕೆ ಅಭಿನಂದನೆ ತಿಳಿಸಿದ್ದಾರೆ.ಜೊತೆಗೆ ವಿಷ್ಣು ಮತ್ತು ಅವರ ಕುಟುಂಬಕ್ಕೆ ನಾನು ನಮಸ್ಕರಿಸುತ್ತೇನೆ. ಅವರ ಬ್ಯಾಟ್‌ನಿಂದ ಇನ್ನೂ ಹೆಚ್ಚಿನ ಶತಕಗಳು ಬರಲಿ ಎಂದು ನಾನು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:IND vs SL: ಧರ್ಮಶಾಲಾದಲ್ಲಿ ಅಂಕಿಅಂಶಗಳೇ ಭಾರತಕ್ಕೆ ವಿಲನ್; ಶ್ರೀಲಂಕಾಗೆ ಗೆಲುವಿನ ಅವಕಾಶ!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ