ಹೀಗೊಂದು ಔಟ್: ಮೊಬೈಲ್ ಜೇಬಿನಲ್ಲಿಟ್ಟುಕೊಂಡು ಔಟಾದ ಬ್ಯಾಟರ್

Viral News: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯೂತ್ ಕ್ಲಬ್ 35 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 195 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಆತಿಥೇಯ ಪೊಮೊನಾಲ್ ತಂಡ 5 ವಿಕೆಟ್‌ಗೆ 139 ರನ್ ಗಳಿಸಲಷ್ಟೇ ಶಕ್ತವಾಯಿತು.

ಹೀಗೊಂದು ಔಟ್: ಮೊಬೈಲ್ ಜೇಬಿನಲ್ಲಿಟ್ಟುಕೊಂಡು ಔಟಾದ ಬ್ಯಾಟರ್
ಸಾಂದರ್ಭಿಕ ಚಿತ್ರ
Follow us
| Edited By: Zahir Yusuf

Updated on: Dec 02, 2021 | 7:00 PM

ಕ್ರಿಕೆಟ್‌ನಲ್ಲಿ ಔಟಾಗುವ ನಿಯಮಗಳು ಬಹುತೇಕ ಎಲ್ಲರಿಗೂ ತಿಳಿದಿವೆ. ಬ್ಯಾಟರ್​ ಬೌಲ್ಡ್, ಕ್ಯಾಚ್ ಅಥವಾ ಎಲ್​ಬಿಡಬ್ಲ್ಯೂ, ರನೌಟ್ ಅಥವಾ ಹಿಟ್ ವಿಕೆಟ್ ವಿಧಾನದಿಂದ ಔಟ್ ಆಗುತ್ತಾರೆ. ಆದರೆ ಇಲ್ಲೊಬ್ಬ ಆಟಗಾರ ಮೊಬೈಲ್ ಔಟಾಗಿದ್ದಾರೆ ಎಂದರೆ ನಂಬಲೇಬೇಕು. ಅಂತಹದೊಂದು ವಿಚಿತ್ರ ಘಟನೆ ನಡೆದಿರುವುದು ಆಸ್ಟ್ರೇಲಿಯಾದಲ್ಲಿ. ಆಸ್ಟ್ರೇಲಿಯಾದ ಅಂಡರ್-16 ಪಂದ್ಯಾವಳಿಯಲ್ಲಿ (ಗ್ರಾಂಪಿಯನ್ಸ್ ಕ್ರಿಕೆಟ್ ಅಸೋಸಿಯೇಷನ್ ​​ಜೂನಿಯರ್ಸ್ ಅಂಡರ್-16 ಪಂದ್ಯಾವಳಿ) ಮಾರ್ಕಸ್ ಎಲಿಯಟ್ ಎಂಬ ಕಿರಿಯ ಕ್ರಿಕೆಟಿಗ ವಿಚಿತ್ರವಾಗಿ ಔಟ್ ಆಗಿ ಸುದ್ದಿಯಾಗಿದ್ದಾನೆ.

ಪೊಮೊನಾಲ್ ಹಾಗೂ ಯೂತ್ ಕ್ಲಬ್ ನಡುವಣ ಈ ಪಂದ್ಯದಲ್ಲಿ ಮಾರ್ಕಸ್ ಮೊಬೈಲ್​ನಿಂದಾಗಿ ಔಟಾದರು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಯೂತ್​ ಕ್ಲಬ್​ ತಂಡವು ಆರಂಭದಲ್ಲೇ ಮೂರು ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತ್ತು. ಇದೇ ವೇಳೆ ಮಾರ್ಕಸ್ ಎಲಿಯಟ್ ಕಣಕ್ಕಿಳಿದಿದ್ದರು. ಆದರೆ ಡ್ರೆಸಿಂಗ್​ ರೂಮ್​ನಲ್ಲಿದ್ದ ಮಾರ್ಕಸ್ ಮೊಬೈಲ್ ಅನ್ನು ಜೇಬಿನಲ್ಲಿಟ್ಟುಕೊಂಡಿರುವುದು ಮರೆತಿದ್ದ. ಇತ್ತ ವಿಕೆಟ್ ಬೀಳುತ್ತಿದ್ದಂತೆ ಕ್ರೀಸ್​ಗೆ ಆಗಮಿಸಿದ್ದ.

ಅದರಂತೆ ಬ್ಯಾಟ್ ಮಾಡುವ ವೇಳೆ ಜೇಬಿನಲ್ಲಿದ್ದ ಮೊಬೈಲ್ ವಿಕೆಟ್​ ಮೇಲೆ ಬಿದ್ದಿದೆ. ಅತ್ತ ಬೇಲ್ಸ್ ಬೀಳುತ್ತಿದ್ದಂತೆ ಪೊಮೊನಾಲ್ ವಿಕೆಟ್ ಕೀಪರ್ ಅಪೀಲ್ ಮಾಡಿದ್ದಾರೆ. ಇದಾದ ಬಳಿಕ ಅಂಪೈರ್ ನಿಯಮದ ಪ್ರಕಾರ ಹಿಟ್ ವಿಕೆಟ್ ನೀಡಿದರು. ಅದರಂತೆ ಮೊಬೈಲ್ ಮೂಲಕ ಹಿಟ್​ ವಿಕೆಟ್ ಆದ ಮೊದಲ ಆಟಗಾರ ಎಂಬ ದಾಖಲೆ ಮಾರ್ಕಸ್ ಎಲಿಯಟ್ ಪಾಲಾಯಿತು.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯೂತ್ ಕ್ಲಬ್ 35 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 195 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಆತಿಥೇಯ ಪೊಮೊನಾಲ್ ತಂಡ 5 ವಿಕೆಟ್‌ಗೆ 139 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಯೂತ್​ ಕ್ಲಬ್ ಈ ಪಂದ್ಯವನ್ನು ಇನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಗೆದ್ದುಕೊಂಡಿತು. ಆದರೆ ಈ ಪಂದ್ಯವು ಮಾರ್ಕಸ್ ಅವರ ಹಿಟ್ ವಿಕೆಟ್ ನಿಂದಾಗಿ ಇತಿಹಾಸದ ಪುಟಗಳಲ್ಲಿ ದಾಖಲಾಗಿರುವುದು ವಿಶೇಷ.

ಇದನ್ನೂ ಓದಿ: IPL 2022: ದುಡ್ಡಿಗಿಂತ RCB ತಂಡವೇ ಮುಖ್ಯ: ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಂದ ಬಹುಪರಾಕ್

ಇದನ್ನೂ ಓದಿ: 8 ಫ್ರಾಂಚೈಸಿ ಉಳಿಸಿಕೊಂಡ ಆಟಗಾರರ ಪಟ್ಟಿ ಹೀಗಿದೆ

ಇದನ್ನೂ ಓದಿ: 27 ಆಟಗಾರರು ರಿಟೈನ್: ಬಿಡುಗಡೆಯಾದ ಆಟಗಾರರ ಪಟ್ಟಿ ಇಲ್ಲಿದೆ

(Batsman given hit wicket after mobile phone falls on stumps)

ತಾಜಾ ಸುದ್ದಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!