AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಮೂರೇ ದಿನಕ್ಕೆ ಮುಗಿದ ಮೊದಲ ಟೆಸ್ಟ್: 2ನೇ ಟೆಸ್ಟ್​ಗೆ ಪಿಚ್ ಬದಲು..!

India vs West Indies: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಅಕ್ಟೋಬರ್ 10 ರಿಂದ ಶುರುವಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ವೆಸ್ಟ್ ಇಂಡೀಸ್ ಪಾಲಿಗೆ ನಿರ್ಣಾಯಕ. ಏಕೆಂದರೆ ಮೊದಲ ಪಂದ್ಯದಲ್ಲಿ ಸೋತಿರುವ ವಿಂಡೀಸ್ ಪಡೆ ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಸರಣಿಯನ್ನು 1-1 ಅಂತರದಿಂದ ಡ್ರಾ ಮಾಡಿಕೊಳ್ಳಬಹುದು.

IND vs WI: ಮೂರೇ ದಿನಕ್ಕೆ ಮುಗಿದ ಮೊದಲ ಟೆಸ್ಟ್: 2ನೇ ಟೆಸ್ಟ್​ಗೆ ಪಿಚ್ ಬದಲು..!
Team India
ಝಾಹಿರ್ ಯೂಸುಫ್
|

Updated on: Oct 08, 2025 | 10:09 AM

Share

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯವು ಕೇವಲ ಮೂರೇ ದಿನಕ್ಕೆ ಮುಕ್ತಾಯಗೊಂಡಿತ್ತು. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ  ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ ಕಲೆಹಾಕಿದ್ದು ಕೇವಲ 162 ರನ್​ಗಳು ಮಾತ್ರ. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 448 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು.

286 ರನ್​ಗಳ ಪ್ರಥಮ ಇನಿಂಗ್ಸ್ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ತಂಡವು ಕೇವಲ 146 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 140 ರನ್​ಗಳ ಭರ್ಜರಿ ಜಯ ಸಾಧಿಸಿತು.

ಇತ್ತ ಕೇವಲ ಮೂರೇ ದಿನಕ್ಕೆ ಪಂದ್ಯ ಮುಗಿದಿರುವುದು ಇದೀಗ ಚಿಂತೆಗೆ ಕಾರಣವಾಗಿದೆ. ಅಂದರೆ ಐದು ದಿನಗಳ ಟೆಸ್ಟ್ ಪಂದ್ಯವು ಕೇವಲ ಮೂರು ದಿನಕ್ಕೆ ಕೊನೆಗೊಂಡಿದ್ದರಿಂದ ಪ್ರೇಕ್ಷಕರಿಗೆ ಹೆಚ್ಚಿನ ಮನರಂಜನೆ ಸಿಕ್ಕಿಲ್ಲ. ಅದರಲ್ಲೂ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಬೌಲರ್​ಗಳು ಸಂಪೂರ್ಣ ಪಾರುಪತ್ಯ ಮೆರೆದಿದ್ದರು.

ಹೀಗಾಗಿಯೇ ಇದೀಗ ಎರಡನೇ ಪಂದ್ಯಕ್ಕೆ ಬ್ಯಾಟಿಂಗ್ ಸ್ನೇಹಿ ಪಿಚ್​ ನಿರ್ಮಿಸಲು ನಿರ್ಧರಿಸಲಾಗಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಟೆಸ್ಟ್ ಪಂದ್ಯಗಳಿಗೆ ಸ್ಪಿನ್ ಸ್ನೇಹಿ ಪಿಚ್​ಗಳಿರುವುದು ವಾಡಿಕೆ. ಆದರೆ ಈ ಬಾರಿ ಬ್ಯಾಟ್ಸ್​ಮನ್​ಗಳಿಗೆ ಅನುಕೂಲಕರವಾಗುವಂತಹ ಪಿಚ್ ಸಿದ್ಧಪಡಿಸಲು ಸೂಚಿಸಲಾಗಿದೆ.

ಅದರಂತೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟ್ಸ್​ಮನ್​ಗಳ ಅಬ್ಬರ ಕಾಣಬಹುದು. ಈ ಮೂಲಕ ದ್ವಿತೀಯ ಟೆಸ್ಟ್ ಪಂದ್ಯವನ್ನು ಐದು ದಿನದಾಟಗಳವರೆಗೆ ಕೊಂಡೊಯ್ಯಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

ಆದರೆ ಇತ್ತ ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ ಅತ್ಯುತ್ತಮ ಫಾರ್ಮ್​ನಲ್ಲಿದ್ದು, ಅವರೊಂದಿಗೆ ಜಸ್​ಪ್ರೀತ್ ಬುಮ್ರಾ ಕೂಡ ನಿಖರ ದಾಳಿ ಸಂಘಟಿಸುತ್ತಿದ್ದಾರೆ. ಇವರೊಂದಿಗೆ ಅನುಭವಿ ಸ್ಪಿನ್ನರ್​ಗಳಾದ ರವೀಂದ್ರ ಜಡೇಜಾ ಹಾಗೂ ಕುಲ್ದೀಪ್ ಯಾದವ್ ಕಮಾಲ್ ಮಾಡುತ್ತಿದ್ದಾರೆ. ಹೀಗಾಗಿ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಬ್ಯಾಟರ್​ಗಳ ಟೀಮ್ ಇಂಡಿಯಾ ಬೌಲರ್​ಗಳ ಮುಂದೆ ಸೆಟೆದು ನಿಲ್ಲಲಿದ್ದಾರಾ ಎಂಬುದೇ ಪ್ರಶ್ನೆ.

ವೆಸ್ಟ್ ಇಂಡೀಸ್ ಟೆಸ್ಟ್ ತಂಡ: ರೋಸ್ಟನ್ ಚೇಸ್ (ನಾಯಕ), ಜೋಮೆಲ್ ವಾರಿಕನ್, ಕೆವ್ಲಾನ್ ಆಂಡರ್ಸನ್, ಅಲಿಕ್ ಅಥನಾಝ್, ಜಾನ್ ಕ್ಯಾಂಪ್ಬೆಲ್, ತೇಜ್ನರೈನ್ ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶೈ ಹೋಪ್, ಟೆವಿನ್ ಇಮ್ಲಾಚ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ, ಜೇಡನ್ ಸೀಲ್ಸ್, ಜೋಹಾನ್ ಲೇನ್.

ಇದನ್ನೂ ಓದಿ: ಆಸ್ಟ್ರೇಲಿಯಾ ತಂಡಕ್ಕೆ ಆಘಾತದ ಮೇಲೆ ಆಘಾತ..!

ಭಾರತ ಟೆಸ್ಟ್ ತಂಡ: ಶುಭ್​​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ