AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 3rd ODI: ರಾಜ್ಕೋಟ್​ನಲ್ಲಿ ಸುರಿಯಲಿದೆ ರನ್ ಮಳೆ: ಸೌರಾಷ್ಟ್ರ ಸ್ಟೇಡಿಯಂ ಪಿಚ್ ರಿಪೋರ್ಟ್ ನೋಡಿ

IND vs AUS 3rd ODI Pitch Report: ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ನಡೆಯಲಿರುವ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನ ಪಿಚ್ ಬಗ್ಗೆ ನೋಡುವುದಾದರೆ, ಇದು ಬ್ಯಾಟಿಂಗ್ ಸ್ನೇಹಿ ಆಗಿದೆ. ಬ್ಯಾಟರ್​ಗಳಿಗೆ ಈ ಪಿಚ್ ಸ್ವರ್ಗ ಎಂದೇ ಹೇಳಬಹುದು. ಈ ಮೈದಾನವು ಇಂದೋರ್‌ಗಿಂತ ದೊಡ್ಡದಾಗಿದೆ, ಆದರೆ ಇಲ್ಲಿನ ಪಿಚ್ ಬ್ಯಾಟರ್‌ಗಳಿಗೆ ಸಂಪೂರ್ಣ ತಲೆಬಾಗುತ್ತದೆ.

IND vs AUS 3rd ODI: ರಾಜ್ಕೋಟ್​ನಲ್ಲಿ ಸುರಿಯಲಿದೆ ರನ್ ಮಳೆ: ಸೌರಾಷ್ಟ್ರ ಸ್ಟೇಡಿಯಂ ಪಿಚ್ ರಿಪೋರ್ಟ್ ನೋಡಿ
Rajkot Pitch IND vs AUS 3rd ODI
Follow us
Vinay Bhat
|

Updated on: Sep 26, 2023 | 11:53 AM

ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ಸೆಪ್ಟೆಂಬರ್ 27 ರಂದು ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಸೋಮವಾರ ಸಂಜೆಯೇ ರಾಜ್ಕೋಟ್​ಗೆ ತಲುಪಿದ್ದಾರೆ. ವಿಶ್ರಾಂತಿಯಲ್ಲಿದ್ದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಹಾಗೂ ಇನ್ನೂ ಕೆಲ ಆಟಗಾರರು ಮೂರನೇ ಪಂದ್ಯದಲ್ಲಿ ಆಡಲಿದ್ದು, ತಂಡ ಸೇರಿಕೊಂಡಿದ್ದಾರೆ.

ಈಗಾಗಲೇ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾಕ್ಕೆ ಮೂರನೇ ಏಕದಿನ ಕೂಡ ಮುಖ್ಯವಾಗಿದೆ. ಯಾಕೆಂದರೆ ಈ ಸರಣಿ ಮುಗಿದ ಬಳಿಕ ಭಾರತ ನೇರವಾಗಿ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಕಾರಣ ಆಟಗಾರರು ಫಾರ್ಮ್​ಗೆ ಮರಳಬೇಕು. ಅತ್ತ ಆಸೀಸ್ ಕ್ಲೀನ್ ಸ್ವೀಪ್ ತಪ್ಪಿಸಲು ಹೋರಾಡ ಬೇಕಿದೆ. ಹೀಗಾಗಿ ರಾಜ್‌ಕೋಟ್‌ನಲ್ಲಿ ನಡೆಯಲಿರುವ ಪಂದ್ಯ ಕುತೂಹಲ ಕೆರಳಿಸಿದೆ. ಸದ್ಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದ ಪಿಚ್ ಹೇಗಿದೆ ಎಂಬುದನ್ನು ನೋಡೋಣ.

ಈ ಸಲ ವಿಶ್ವಕಪ್ ನಮ್ದೆ​: ಟೀಮ್ ಇಂಡಿಯಾ ಅಭಿಮಾನಿಗಳ​ ಹೀಗೊಂದು ಲೆಕ್ಕಾಚಾರ

ಇದನ್ನೂ ಓದಿ
Image
ವಿಶ್ವಕಪ್​ನಿಂದ ಅಕ್ಷರ್ ಪಟೇಲ್ ಹೊರಕ್ಕೆ?: ಬಿಸಿಸಿಐಯಿಂದ ಬಿಗ್ ಅಪ್ಡೇಟ್
Image
IND vs AUS ಮೂರನೇ ಏಕದಿನಕ್ಕೆ ಮಳೆಯ ಕಾಟ?: ರಾಜ್ಕೋಟ್ ಹವಾಮಾನ ಹೀಗಿದೆ
Image
ನಾಳೆ ತೃತೀಯ ಏಕದಿನ: ಇನ್ನೂ ತಂಡ ಸೇರಿಕೊಳ್ಳದ ರೋಹಿತ್ ಶರ್ಮಾ?
Image
ವಿಶ್ವಕಪ್​ನಲ್ಲಿ ಸೆಮಿಫೈನಲ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಇರ್ಫಾನ್

ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಪಿಚ್:

ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನ ಪಿಚ್ ಬಗ್ಗೆ ನೋಡುವುದಾದರೆ, ಭಾರತದಲ್ಲಿನ ಹೆಚ್ಚಿನ ಮೇಲ್ಮೈಗಳಂತೆ, SCA ಸ್ಟೇಡಿಯಂನಲ್ಲಿನ ವಿಕೆಟ್​ಗಳು ಸಹ ಬ್ಯಾಟಿಂಗ್ ಸ್ನೇಹಿ ಆಗಿದೆ. ದೇಶೀಯ ಮತ್ತು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಇಲ್ಲಿ ದೊಡ್ಡ ಸ್ಕೋರ್ ಆಗುತ್ತದೆ. ಇಲ್ಲಿಯವರೆಗೆ ನಡೆದ ಮೂರು ಏಕದಿನ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಎಲ್ಲ ಪಂದ್ಯಗಳನ್ನು ಗೆದ್ದಿದೆ. ಬ್ಯಾಟರ್​ಗಳಿಗೆ ಈ ಪಿಚ್ ಸ್ವರ್ಗ ಎಂದೇ ಹೇಳಬಹುದು. ಈ ಮೈದಾನವು ಇಂದೋರ್‌ಗಿಂತ ದೊಡ್ಡದಾಗಿದೆ, ಆದರೆ ಇಲ್ಲಿನ ಪಿಚ್ ಬ್ಯಾಟರ್‌ಗಳಿಗೆ ಸಂಪೂರ್ಣ ತಲೆಬಾಗುತ್ತದೆ. ಎರಡೂ ಬದಿಯಲ್ಲಿ ಬೌಂಡರಿಗಳು ಚಿಕ್ಕದಾಗಿರುವುದರಿಂದ ರನ್‌ಗಳು ಹೆಚ್ಚು ಬರುತ್ತದೆ.

ರಾಜ್ಕೋಟ್ ಹವಾಮಾನ ವರದಿ:

ಇಂದೋರ್​ನಲ್ಲಿ ನಡೆದ ಎರಡನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿತ್ತು. ಆಸ್ಟ್ರೇಲಿಯಾ ಟಾರ್ಗೆಟ್ ಬೆನ್ನಟ್ಟುವ ನಡುವೆ ಮಳೆ ಬಂದ ಕಾರಣ ಡಕ್ವರ್ತ್ ಲೂಯಿಸ್ ನಿಯಮವನ್ನು ಅಳವಡಿಸಲಾಯಿತು. ಆದರೆ, ಇಂಡೋ-ಆಸೀಸ್ ತೃತೀಯ ಏಕದಿನಕ್ಕೆ ವರುಣನ ಕಾಟ ಇಲ್ಲ. ಬುಧವಾರ (ಸೆಪ್ಟೆಂಬರ್ 27) ಹೆಚ್ಚಾಗಿ ಮೋಡ ಕವಿದ ವಾತಾವರಣ ಇರಲಿದೆ. ಇಂದು ಮಳೆ ಬೀಳುವ ನಿರೀಕ್ಷೆ ಇದ್ದು, ಪಂದ್ಯದ ದಿನ ಮಳೆಯ ಸಾಧ್ಯತೆ ಕಮ್ಮಿ. ಗರಿಷ್ಠ ತಾಪಮಾನವು 34 C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ, ಆದರೆ ದಿನದ ಆಟದ ಕೊನೆಯಲ್ಲಿ 25 C ಗೆ ಕಡಿಮೆಯಾಗುತ್ತದೆ. ಬುಧವಾರ ಮಳೆ ಬೀಳುವ ಸಾಧ್ಯತೆ ಕೇವಲ 6 ಪ್ರತಿಶತದಷ್ಟು ಮಾತ್ರ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ