AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಒಪ್ಪಂದಕ್ಕೊಳಪಟ್ಟಿರುವ 51 ಆಟಗಾರರಿಗೆ ಬಿಸಿಸಿಐ ನೀಡುವ ವೇತನವೆಷ್ಟು?

BCCI Central Contracts 2026: ಬಿಸಿಸಿಐ 2025-26ರ ಕೇಂದ್ರ ಒಪ್ಪಂದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 51 ಆಟಗಾರರು (30 ಪುರುಷ, 21 ಮಹಿಳೆ) A, B, C ಗ್ರೇಡ್‌ಗಳಲ್ಲಿ ಸ್ಥಾನ ಪಡೆದಿದ್ದಾರೆ. ಈ ಬಾರಿ A+ ಗ್ರೇಡ್ ರದ್ದುಪಡಿಸಲಾಗಿದ್ದು, ಪುರುಷರಿಗೆ 1 ರಿಂದ 7 ಕೋಟಿ ರೂ., ಮಹಿಳೆಯರಿಗೆ 10 ರಿಂದ 50 ಲಕ್ಷ ರೂ. ವಾರ್ಷಿಕ ವೇತನ ನೀಡಲಾಗುವುದು.

ಕೇಂದ್ರ ಒಪ್ಪಂದಕ್ಕೊಳಪಟ್ಟಿರುವ 51 ಆಟಗಾರರಿಗೆ ಬಿಸಿಸಿಐ ನೀಡುವ ವೇತನವೆಷ್ಟು?
mens and womens Team
ಪೃಥ್ವಿಶಂಕರ
|

Updated on:Feb 09, 2026 | 10:21 PM

Share

2026 ರ ಆವೃತ್ತಿಯ ನೂತನ ಕೇಂದ್ರ ಒಪ್ಪಂದ ಪಟ್ಟಿಯನ್ನು ಬಿಸಿಸಿಐ (BCCI Central Contracts 2025-26) ಇಂದು ಪ್ರಕಟಿಸಿದೆ. ಕೇಂದ್ರ ಒಪ್ಪಂದಕ್ಕೆ ಒಟ್ಟು 51 ಆಟಗಾರರು ಒಳಪಟ್ಟಿದ್ದು, ಇದರಲ್ಲಿ 30 ಪುರುಷ ಆಟಗಾರರು ಮತ್ತು 20 ಮಹಿಳಾ ಆಟಗಾರ್ತಿಯರು ಸೇರಿದ್ದಾರೆ. ಈ 51 ಆಟಗಾರರನ್ನು ಎ,ಬಿ ಮತ್ತು ಸಿ ಎಂಬ ಮೂರು ಗ್ರೇಡ್​​ಗಳಲ್ಲಿ ವಿಂಗಡಿಸಲಾಗಿದೆ. ಈ ಹಿಂದೆ ಪುರುಷರ ಒಪ್ಪಂದದಲ್ಲಿ ಎ+ ಗ್ರೇಡ್ ಅನ್ನು ಜಾರಿಗೆ ತಂದಿದ್ದ ಬಿಸಿಸಿಐ, ಈ ಗ್ರೇಡ್​ನಲ್ಲಿ ಸ್ಥಾನ ಪಡೆಯುವ ಆಟಗಾರರಿಗೆ ವಾರ್ಷಿಕವಾಗಿ 7 ಕೋಟಿ ರೂ. ಎ ಗ್ರೇಡ್‌ನಲ್ಲಿ ಸ್ಥಾನ ಪಡೆಯುವ ಆಟಗಾರರಿಗೆ 5 ಕೋಟಿ ರೂ. ಬಿ ಗ್ರೇಡ್‌ನಲ್ಲಿ ಸ್ಥಾನ ಪಡೆಯುವ ಆಟಗಾರರಿಗೆ 3 ಕೋಟಿ ರೂ. ಮತ್ತು ಸಿ ಗ್ರೇಡ್‌ನಲ್ಲಿ ಸ್ಥಾನ ಪಡೆಯುವ ಆಟಗಾರರಿಗೆ 1 ಕೋಟಿ ರೂ. ವೇತನ ನೀಡುತ್ತಿತ್ತು. ಆದರೆ ಈ ಬಾರಿ ಎ+ ಗ್ರೇಡ್ ಅನ್ನು ಬಿಸಿಸಿಐ ರದ್ದುಗೊಳಿಸಿದೆ. ಉಳಿದಂತೆ ಪ್ರಸ್ತುತ ಜಾರಿಯಲ್ಲಿರುವ ಈ 3 ಗ್ರೇಡ್‌ನಲ್ಲಿ ಯಾವ ಆಟಗಾರರಿಗೆ ಸ್ಥಾನ ಸಿಕ್ಕಿದೆ ಮತ್ತು ಅವರಿಗೆ ಸಿಗುವ ವೇತನವೆಷ್ಟು ಎಂಬುದನ್ನು ನೋಡುವುದಾದರೆ..

ಪುರುಷರ ಆಟಗಾರರ ಸಂಬಳ

ಎ ಗ್ರೇಡ್: ಶುಭ್​ಮನ್ ಗಿಲ್, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಎ ಗ್ರೇಡ್‌ನಲ್ಲಿ ಸ್ಥಾನ ಪಡೆದಿದ್ದಾರೆ. ವರದಿಗಳ ಪ್ರಕಾರ ಈ ಮೂವರಲ್ಲಿ ಬುಮ್ರಾ ಮಾತ್ರ 7 ಕೋಟಿ ರೂಪಾಯಿ ವೇತನ ಪಡೆಯಲಿದ್ದಾರೆ. ಉಳಿದಂತೆ ಶುಭ್​ಮನ್ ಗಿಲ್ ಮತ್ತು ರವೀಂದ್ರ ಜಡೇಜಾ ತಲಾ 5 ಕೋಟಿ ರೂಪಾಯಿ ವೇತನ ಪಡೆಯಲಿದ್ದಾರೆ.

ಬಿ ಗ್ರೇಡ್: ಒಟ್ಟು 11 ಆಟಗಾರರು ಬಿ ಗ್ರೇಡ್‌ನಲ್ಲಿ ಸ್ಥಾನ ಪಡೆದಿದ್ದು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ವಾಷಿಂಗ್ಟನ್ ಸುಂದರ್, ಕೆಎಲ್ ರಾಹುಲ್, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಕುಲ್ದೀಪ್ ಯಾದವ್, ಯಶಸ್ವಿ ಜೈಸ್ವಾಲ್ ಮತ್ತು ಶ್ರೇಯಸ್ ಅಯ್ಯರ್​ಗೆ ವಾರ್ಷಿಕವಾಗಿ 3 ಕೋಟಿ ರೂ. ವೇತನ ನೀಡಲಾಗುತ್ತದೆ.

ಸಿ ಗ್ರೇಡ್: ಒಟ್ಟು 17 ಆಟಗಾರರು ಸಿ ಗ್ರೇಡ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಇವರಲ್ಲಿ ಅಕ್ಷರ್ ಪಟೇಲ್, ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಧ್ರುವ ಜುರೆಲ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ನಿತೀಶ್ ರೆಡ್ಡಿ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್ ಸೇರಿದ್ದು ಈ ಆಟಗಾರರಿಗೆ ವಾರ್ಷಿಕವಾಗಿ 1 ಕೋಟಿ ರೂ. ವೇತನ ಸಿಗಲಿದೆ.

ಪುರುಷ ಹಾಗೂ ಮಹಿಳಾ ತಂಡಗಳ ಹೊಸ ಕೇಂದ್ರ ಒಪ್ಪಂದ ಪಟ್ಟಿ ಪ್ರಕಟಿಸಿದ ಬಿಸಿಸಿಐ

ಮಹಿಳಾ ಆಟಗಾರ್ತಿಯರ ಸಂಬಳ

ಎ ಗ್ರೇಡ್: ಪುರುಷ ಕ್ರಿಕೆಟಿಗರಿಗೆ ಸಿಗುವ ವೇತನಕ್ಕೆ ಹೋಲಿಸಿದರೆ ಮಹಿಳಾ ಆಟಗಾರ್ತಿಯರು ಕಡಿಮೆ ಮೊತ್ತದ ವೇತನ ಪಡೆಯುತ್ತಾರೆ. ಅದರಂತೆ ಈ ಬಾರಿ ಬಿಸಿಸಿಐ 21 ಮಹಿಳಾ ಆಟಗಾರ್ತಿಯರಿಗೆ ಕೇಂದ್ರ ಒಪ್ಪಂದದಲ್ಲಿ ಸ್ಥಾನ ನೀಡಿದೆ. ಇದರಲ್ಲಿ ಹರ್ಮನ್‌ಪ್ರೀತ್ ಕೌರ್, ಸ್ಮೃತಿ ಮಂಧಾನ, ದೀಪ್ತಿ ಶರ್ಮಾ ಮತ್ತು ಜೆಮಿಮಾ ರೋಡ್ರಿಗಸ್ ಎ ಗ್ರೇಡ್‌ನಲ್ಲಿ ಸ್ಥಾನ ಪಡೆದಿದ್ದು, ಈ ನಾಲ್ವರು ಆಟಗಾರ್ತಿಯರು ವಾರ್ಷಿಕವಾಗಿ 50 ಲಕ್ಷ ರೂ. ವೇತನ ಪಡೆಯುತ್ತಾರೆ.

ಬಿ ಗ್ರೇಡ್: ರೇಣುಕಾ ಠಾಕೂರ್, ಶೆಫಾಲಿ ವರ್ಮಾ, ರಿಚಾ ಘೋಷ್, ಸ್ನೇಹ ರಾಣಾ, ರಾಧಾ ಯಾದವ್, ಅಮಂಜೋತ್ ಕೌರ್, ಪ್ರತೀಕಾ ರಾವಲ್, ಕ್ರಾಂತಿ ಗೌಡ್, ಉಮಾ ಛೆಟ್ರಿ ಮತ್ತು ಅರುಂಧತಿ ರೆಡ್ಡಿ ಗ್ರೇಡ್ ಬಿ ನಲ್ಲಿ ಸ್ಥಾನ ಪಡೆದಿದ್ದು, ಇವರಿಗೆ ವಾರ್ಷಿಕವಾಗಿ 30 ಲಕ್ಷ ರೂ. ವೇತನ ಸಿಗಲಿದೆ.

ಸಿ ಗ್ರೇಡ್: ಸಿ ಗ್ರೇಡ್‌ನಲ್ಲಿ ಶ್ರೀ ಚರಣಿ, ಯಾಸ್ತಿಕಾ ಭಾಟಿಯಾ, ಹರ್ಲೀನ್ ಡಿಯೋಲ್, ಕಶ್ವಿ ಗೌತಮ್, ಜಿ ಕಮಲಿನಿ, ವೈಷ್ಣವಿ ಶರ್ಮಾ ಮತ್ತು ತೇಜಲ್ ಸೇರಿದ್ದು, ಇವರಿಗೆ ವಾರ್ಷಿಕ 10 ಲಕ್ಷ ರೂ. ವೇತನ ಸಿಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:20 pm, Mon, 9 February 26

Follow Us
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ