AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೆಸರಿಗೆ ಮಾತ್ರ ಟೀಂ ಇಂಡಿಯಾ ಪರ ಆಡಿದ್ದಾರೆ’: ಪದೇ ಪದೇ ರಜೆ ಕೇಳುವ ಹಿರಿಯ ಆಟಗಾರರ ಮೇಲೆ ಬಿಸಿಸಿಐ ಗರಂ

BCCI: ಬಿಸಿಸಿಐ ಮತ್ತು ಆಯ್ಕೆದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಅವರು ಹೆಸರಿಗೆ ಮಾತ್ರ ಟೀಂ ಇಂಡಿಯಾ ಪರ ಆಡಿದ್ದಾರೆ ಎಂಬ ಆಶ್ಚರ್ಯಕರ ಹೇಳಿಕೆಯನ್ನು ಸಹ ನೀಡಿದ್ದಾರೆ.

‘ಹೆಸರಿಗೆ ಮಾತ್ರ ಟೀಂ ಇಂಡಿಯಾ ಪರ ಆಡಿದ್ದಾರೆ’: ಪದೇ ಪದೇ ರಜೆ ಕೇಳುವ ಹಿರಿಯ ಆಟಗಾರರ ಮೇಲೆ ಬಿಸಿಸಿಐ ಗರಂ
ರೋಹಿತ್, ವಿರಾಟ್
TV9 Web
| Updated By: ಪೃಥ್ವಿಶಂಕರ|

Updated on: Jul 07, 2022 | 2:33 PM

Share

ಏನೇ ಆಗಿರಲಿ ಅದು ಅಗತ್ಯಕ್ಕಿಂತ ಹೆಚ್ಚಾದರೆ ಹಾನಿಕಾರಕ ಎಂದು ಅನುಭವಿಗಳು ಹೇಳುತ್ತಾರೆ. ಈಗ ಟೀಂ ಇಂಡಿಯಾದಲ್ಲಿಯೂ ಇದೇ ಪರಿಸ್ಥಿತಿ ಕಾಣುತ್ತಿದೆ. ಟೀಂ ಇಂಡಿಯಾದ ಹಿರಿಯ ಆಟಗಾರರ ವರ್ತನೆಗೆ ಬಿಸಿಸಿಐ (BCCI) ಮತ್ತು ಆಯ್ಕೆದಾರರು ಕೋಪಗೊಂಡಿದ್ದಾರೆ ಎಂದು ವರದಿಯಾಗಿದೆ. ರೋಹಿತ್, ವಿರಾಟ್, ಪಾಂಡ್ಯ ಮತ್ತು ಶಮಿ (Rohit, Virat, Pandya and Shami) ವಿರುದ್ಧ ಬಿಸಿಸಿಐ ಗರಂ ಆಗಿದೆ ಎಂದು ವರದಿಯಾಗಿದೆ. ಬಿಸಿಸಿಐ ಅಸಮಾಧಾನಕ್ಕೆ ಕಾರಣ ಈ ಆಟಗಾರರ ನಿರ್ಧಾರ. ವಾಸ್ತವವಾಗಿ, ಈ ನಾಲ್ವರು ಆಟಗಾರರಿಗೆ ವಿಶ್ರಾಂತಿ ನೀಡುವ ನಿರ್ಧಾರದಿಂದ ಬಿಸಿಸಿಐ ಮತ್ತು ಆಯ್ಕೆದಾರರು ಅಸಮಾಧಾನಗೊಂಡಿದ್ದಾರೆ. ಈ ನಾಲ್ವರ ನಿರ್ಧಾರದಿಂದಾಗಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗಿಲ್ಲ. ವರದಿಗಳ ಪ್ರಕಾರ, ಬಿಸಿಸಿಐ ಮತ್ತು ಆಯ್ಕೆದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಅವರು ಹೆಸರಿಗೆ ಮಾತ್ರ ಟೀಂ ಇಂಡಿಯಾ ಪರ ಆಡಿದ್ದಾರೆ ಎಂಬ ಆಶ್ಚರ್ಯಕರ ಹೇಳಿಕೆಯನ್ನು ಸಹ ನೀಡಿದ್ದಾರೆ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ… ಇವರು ಸುದೀರ್ಘ ರಜೆಯ ನಂತರ ಇತ್ತೀಚೆಗೆ ಭಾರತ ತಂಡಕ್ಕೆ ಮರಳಿದ ಆಟಗಾರರು ಎಂಬುದು ನಿಮಗೆ ಗೊತ್ತಿರಲಿ. ಆದರೆ ಇದರ ನಂತರವೂ ಅವರು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ವಿಶ್ರಾಂತಿ ಕೋರಿದರು. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿತ್ತು. ಇದಲ್ಲದೇ ರೋಹಿತ್ ಗಾಯದ ಸಮಸ್ಯೆಯಿಂದ ಎಡ್ಜ್‌ಬಾಸ್ಟನ್ ಟೆಸ್ಟ್ ಕೂಡ ಆಡಿರಲಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲೂ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿತ್ತು. ಅದೇ ಸಮಯದಲ್ಲಿ, ಹಾರ್ದಿಕ್ ಪಾಂಡ್ಯ ದೀರ್ಘಕಾಲದವರೆಗೆ ಭಾರತೀಯ ಕ್ರಿಕೆಟ್‌ನಿಂದ ದೂರ ಸರಿದಿದ್ದರು. ನಂತರ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಪಾಂಡ್ಯ ತಂಡಕ್ಕೆ ಪುನರಾಗಮನ ಮಾಡಿದರು.

ಇದನ್ನೂ ಓದಿ: IND vs WI: ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ರೋಹಿತ್-ವಿರಾಟ್​ಗೆ ವಿಶ್ರಾಂತಿ, ಧವನ್​ಗೆ ನಾಯಕತ್ವ

ಇದನ್ನೂ ಓದಿ
Image
MS Dhoni Birthday: ಭಾರತಕ್ಕಾಗಿ ಎಲ್ಲಾ ಐಸಿಸಿ ಟ್ರೋಪಿಗಳನ್ನು ಗೆದ್ದ ಧೋನಿಗೆ ಇಂದು ಜನ್ಮದಿನ; ಫೋಟೋ ನೋಡಿ
Image
MS Dhoni Birthday: ಸವ್ಯಸಾಚಿ ಧೋನಿಗೆ 41ನೇ ಜನ್ಮದಿನ; ನಾಯಕನಾಗಿ ಮಹೀ ಸೃಷ್ಟಿಸಿದ ಐದು ಶ್ರೇಷ್ಠ ದಾಖಲೆಗಳಿವು

ಈ ಆಟಗಾರರು ಪ್ರತಿ ಆಯ್ಕೆ ಸಭೆಯಲ್ಲಿ ವಿಶ್ರಾಂತಿ ಕೇಳುತ್ತಾರೆ – ವರದಿ

ಬಿಸಿಸಿಐಗೆ ಸಂಬಂಧಿಸಿದ ಮೂಲಗಳು TOI ಗೆ ತಿಳಿಸಿದ್ದು, ಪ್ರತಿ ಆಯ್ಕೆ ಸಭೆಯಲ್ಲಿ ಆಟಗಾರರಿಗೆ ಕೆಲಸದ ಹೊರೆಯ ಸಮಸ್ಯೆ ಉದ್ಭವಿಸುತ್ತದೆ. ರೋಹಿತ್, ಕೊಹ್ಲಿ, ಪಾಂಡ್ಯ, ಬುಮ್ರಾ ಮತ್ತು ಶಮಿ ಪ್ರತಿ ಸಭೆಯಲ್ಲೂ ವಿಶ್ರಾಂತಿ ತೆಗೆದುಕೊಳ್ಳುವ ಬಗ್ಗೆ ಮಾತನಾಡುತ್ತಾರೆ. ತರಬೇತುದಾರ ಮತ್ತು ಫಿಸಿಯೋ ತಂಡದ ನಿರ್ವಹಣೆ ಬಗ್ಗೆ ಕಳುಹಿಸಲಾದ ಟಿಪ್ಪಣಿಯು ಈ ಆಟಗಾರರ ಸೌಕರ್ಯವನ್ನು ಉಲ್ಲೇಖಿಸುತ್ತದೆ.

ಮೂಲಗಳು ಮತ್ತಷ್ಟು ಹೇಳುವಂತೆ, “ಈ ಆಟಗಾರರು ಎಲ್ಲಾ ಇತರ ಸರಣಿಗಳಿಂದ ಹೊರಗುಳಿಯುತ್ತಿದ್ದಾರೆ, ಆದರೆ ಬಿಸಿಸಿಐ ಜೊತೆಗಿನ ಅವರ ವಾರ್ಷಿಕ ಒಪ್ಪಂದವೂ ಉತ್ತಮವಾಗಿದೆ. ರೋಹಿತ್ ಪೂರ್ಣ ಸಮಯದ ನಾಯಕತ್ವವನ್ನು ಪಡೆದಾಗಿನಿಂದ, ಅವರು ಕೇವಲ ಬೆರಳೆಣಿಕೆಯ ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಪಾಂಡ್ಯ ಈಗಷ್ಟೇ ಭಾರತ ತಂಡಕ್ಕೆ ಪುನರಾಗಮನ ಮಾಡಿದ್ದಾರೆ. ಬುಮ್ರಾ ಮತ್ತು ಶಮಿ ಕೂಡ ಆಯ್ದ ಪಂದ್ಯಗಳನ್ನು ಮಾತ್ರ ಆಡುತ್ತಿದ್ದಾರೆ. ಈಗ ಪ್ರತಿ ಸರಣಿಯ ನಂತರ ಕೊಹ್ಲಿಗೂ ವಿಶ್ರಾಂತಿಯ ಅಗತ್ಯವಿದೆ ಎಂದು ಬಿಸಿಸಿಐ ಅಸಮಾದಾನ ಹೊರಹಾಕಿದೆ. ಕಳೆದ ಎರಡು ವರ್ಷಗಳಲ್ಲಿ ಭಾರತ ಪರ ಗರಿಷ್ಠ ಪಂದ್ಯಗಳನ್ನು ಆಡಿದ ಏಕೈಕ ಆಟಗಾರ ಪಂತ್ ಮಾತ್ರ.

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಆಯ್ಕೆ ಇರುತ್ತದೋ ಇಲ್ಲವೋ?

ಆದರೆ, ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ರೋಹಿತ್, ಬುಮ್ರಾ, ಪಾಂಡ್ಯ ಮತ್ತು ಪಂತ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಆದರೆ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್‌ಗೆ ಹೋಗುವುದು ಅವರು ಇಂಗ್ಲೆಂಡ್ ವಿರುದ್ಧ ಹೇಗೆ ಆಡುತ್ತಾರೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.

ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ