IND vs ZIM: ಜಿಂಬಾಬ್ವೆ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ಶುಭ್​ಮನ್ ಗಿಲ್​ಗೆ ನಾಯಕತ್ವ

India tour of Zimbabwe: ಒಂದೆಡೆ ಟೀಂ ಇಂಡಿಯಾದ ಅನುಭವಿಗಳ ತಂಡ ಟಿ20 ವಿಶ್ವಕಪ್​ನಲ್ಲಿ ಭಾಗವಹಿಸಿದ್ದರೆ, ಇನ್ನೊಂದೆಡೆ ಭಾರತದ ಯುವ ಪಡೆ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲು ಸನ್ನದ್ಧವಾಗಿದೆ. ಅದರಂತೆ ಇದೀಗ ಟೀಂ ಇಂಡಿಯಾದ ಜಿಂಬಾಬ್ವೆ ಪ್ರವಾಸಕ್ಕೆ ಇಂದು ಬಿಸಿಸಿಐ, 15 ಸದಸ್ಯರ ತಂಡವನ್ನು ಪ್ರಕಟಿಸಿದೆ.

IND vs ZIM: ಜಿಂಬಾಬ್ವೆ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ಶುಭ್​ಮನ್ ಗಿಲ್​ಗೆ ನಾಯಕತ್ವ
ಟೀಂ ಇಂಡಿಯಾ
Follow us
|

Updated on:Jun 24, 2024 | 6:34 PM

ಒಂದೆಡೆ ಟೀಂ ಇಂಡಿಯಾದ ಅನುಭವಿಗಳ ತಂಡ ಟಿ20 ವಿಶ್ವಕಪ್​ನಲ್ಲಿ (T20 World Cup 2024) ಭಾಗವಹಿಸಿದ್ದರೆ, ಇನ್ನೊಂದೆಡೆ ಭಾರತದ ಯುವ ಪಡೆ ಜಿಂಬಾಬ್ವೆ ಪ್ರವಾಸ (India tour of Zimbabwe) ಕೈಗೊಳ್ಳಲು ಸನ್ನದ್ಧವಾಗಿದೆ. ಅದರಂತೆ ಇದೀಗ ಟೀಂ ಇಂಡಿಯಾದ ಜಿಂಬಾಬ್ವೆ ಪ್ರವಾಸಕ್ಕೆ ಇಂದು ಬಿಸಿಸಿಐ (BCCI), 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ತಂಡದ ನಾಯಕತ್ವವನ್ನು ಶುಭ್​ಮನ್​ ಗಿಲ್​ಗೆ ನೀಡಲಾಗಿದೆ. ಉಳಿದಂತೆ ತಂಡದಲ್ಲಿ ಭಾಗಶಃ ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಅಚ್ಚರಿಯ ಸಂಗತಿಯೆಂದರೆ ಟಿ20 ವಿಶ್ವಕಪ್​ನಲ್ಲಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿರುವ ಒಬ್ಬನೇ ಒಬ್ಬ ಆಟಗಾರ ಈ ಸರಣಿಗಾಗಿ ತಂಡದಲ್ಲಿ ಆಯ್ಕೆಯಾಗಿಲ್ಲ.

ಐವರಿಗೆ ಚೊಚ್ಚಲ ಅವಕಾಶ

ವೇಳಾಪಟ್ಟಿಯ ಪ್ರಕಾರ ಜುಲೈ 6ರಿಂದ ಸರಣಿ ಆರಂಭವಾಗಲಿದೆ.  ಈ ಸರಣಿಯಲ್ಲಿ ಐದು ಟಿ20 ಪಂದ್ಯಗಳು ನಡೆಯಲ್ಲಿವೆ. ಇದೀಗ ಆಯ್ಕೆಯಾಗಿರುವ ಭಾರತ ಟಿ20 ತಂಡದಲ್ಲಿ ಮೊದಲ ಬಾರಿಗೆ  ಐವರು ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಐವರು ಆಟಗಾರರು ಕಳೆದ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದವರಾಗಿದ್ದು, ಈ ಐವರಲ್ಲಿ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ನಿತೀಶ್ ರೆಡ್ಡಿ, ತುಷಾರ್ ದೇಶಪಾಂಡೆ ಮತ್ತು ಧ್ರುವ ಜುರೆಲ್‌ ಸೇರಿದ್ದಾರೆ.

ಈ ಆಟಗಾರರ ವಾಪಸ್ಸಾತಿ

ಜಿಂಬಾಬ್ವೆ ಸರಣಿಯೊಂದಿಗೆ ನಾಲ್ವರು ಆಟಗಾರರು ಟೀಂ ಇಂಡಿಯಾಕ್ಕೆ ಮರಳಿದ್ದು, ರುತುರಾಜ್ ಗಾಯಕ್ವಾಡ್‌ಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್, ವೇಗಿ ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್ ತಂಡಕ್ಕೆ ಮರಳಿದ್ದಾರೆ.

ಕೆಎಲ್ ರಾಹುಲ್​ಗಿಲ್ಲ ಸ್ಥಾನ

ಪ್ರಕಟವಾಗಿರುವ ತಂಡವನ್ನು ನೋಡಿದರೆ, ಆಯ್ಕೆ ಮಂಡಳಿ ಸಂಪೂರ್ಣವಾಗಿ ಯುವ ಆಟಗಾರರಿಗೆ ಮಣೆ ಹಾಕಿದೆ. ಆದರೆ ಐಪಿಎಲ್​ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಕನ್ನಡಿಗ ಕೆಎಲ್ ರಾಹುಲ್​ಗೆ ಮತ್ತೊಮ್ಮೆ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಟಿ20 ವಿಶ್ವಕಪ್​ನಿಂದಲೂ ರಾಹುಲ್​ರನ್ನು ಕೈಬಿಡಲಾಗಿತ್ತು. ಇದೀಗ ಜಿಂಬಾಬ್ವೆ ಸರಣಿಗೂ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ.

ಜಿಂಬಾಬ್ವೆ ಪ್ರವಾಸಕ್ಕೆ ಟೀಂ ಇಂಡಿಯಾ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ.

ಭಾರತದ ಜಿಂಬಾಬ್ವೆ ಪ್ರವಾಸದ ವೇಳಾಪಟ್ಟಿ

  • ಜುಲೈ 6 – 1ನೇ ಟಿ20, ಹರಾರೆ
  • 7 ಜುಲೈ – 2 ನೇ ಟಿ20, ಹರಾರೆ
  • ಜುಲೈ 10 – 3ನೇ ಟಿ20, ಹರಾರೆ
  • ಜುಲೈ 13 – 4ನೇ ಟಿ20, ಹರಾರೆ
  • ಜುಲೈ 14 – 5 ನೇ ಟಿ20, ಹರಾರೆ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:20 pm, Mon, 24 June 24

ತಾಜಾ ಸುದ್ದಿ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ