IND vs BAN: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ಐಪಿಎಲ್ ಸ್ಟಾರ್ಸ್​ಗೆ ಮಣೆ

IND vs BAN: ಪ್ರಸ್ತುತ ಭಾರತ ಮತ್ತು ಬಾಂಗ್ಲಾದೇಶ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದ್ದು, ಆ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 6 ರಂದು ನಡೆಯಲ್ಲಿದ್ದು, ಇದೀಗ ಬಿಸಿಸಿಐ ಈ ಸರಣಿಗೆ 15 ಸದಸ್ಯರ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದೆ.

IND vs BAN: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ಐಪಿಎಲ್ ಸ್ಟಾರ್ಸ್​ಗೆ ಮಣೆ
ಟೀಂ ಇಂಡಿಯಾ
Follow us
|

Updated on:Sep 28, 2024 | 10:22 PM

ಪ್ರಸ್ತುತ ಭಾರತ ಮತ್ತು ಬಾಂಗ್ಲಾದೇಶ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದ್ದು, ಆ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 6 ರಂದು ನಡೆಯಲ್ಲಿದ್ದು, ಇದೀಗ ಬಿಸಿಸಿಐ ಈ ಸರಣಿಗೆ 15 ಸದಸ್ಯರ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದೆ. ಎಂದಿನಂತೆ ತಂಡದ ನಾಯಕತ್ವ ಸೂರ್ಯಕುಮಾರ್ ಯಾದವ್ ಅವರ ಕೈಯಲ್ಲಿದ್ದು, ಇಬ್ಬರು ಆಟಗಾರರು ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರೆ, ಒಬ್ಬ ಬೌಲರ್ 3 ವರ್ಷಗಳ ನಂತರ ತಂಡದಕ್ಕೆ ಮರಳಿದ್ದಾರೆ. ಆದರೆ, ಎಲ್ಲಾ ಊಹಾಪೋಹಗಳು ಮತ್ತು ನಿರೀಕ್ಷೆಗಳ ನಡುವೆಯೂ ಸ್ಟಾರ್ ವಿಕೆಟ್ ಕೀಪರ್ ಇಶಾನ್ ಕಿಶನ್ ಆಯ್ಕೆಗಾರರ ಮನಗೆಲ್ಲುವಲ್ಲಿ ವಿಫಲರಾಗಿದ್ದಾರೆ.

ತಂಡಕ್ಕೆ ಆಯ್ಕೆಯಾಗಿರುವ ಎರಡು ಹೊಸ ಮುಖಗಳಲ್ಲಿ ಇಬ್ಬರು ಕೂಡ ಐಪಿಎಲ್ ಸ್ಟಾರ್​ಗಳೆ ಆಗಿದ್ದಾರೆ. ಅದರಲ್ಲಿ ಒಬ್ಬರು ಐಪಿಎಲ್​ನಲ್ಲಿ ಲಕ್ನೋ ಪರ ಬೌಲಿಂಗ್​ನಲ್ಲಿ ಬೆಂಕಿ ಉಂಡೆಗಳನ್ನು ಉಗುಳಿದ್ದ ಯುವ ವೇಗಿ ಮಯಾಂಕ್ ಯಾದವ್ ಸೇರಿದ್ದರೆ, ಇನ್ನೊಬ್ಬರು ಸನ್​ರೈಸರ್ಸ್​ ಹೈದರಾಬಾದ್ ಪರ ತಮ್ಮ ಆಲ್​ರೌಂಡರ್ ಆಟದ ಮೂಲಕ ಗಮನ ಸೆಳೆದಿದ್ದ ನಿತೀಶ್ ಕುಮಾರ್ ರೆಡ್ಡಿ ಆಗಿದ್ದಾರೆ. ಈ ಇಬ್ಬರು ಆಟಗಾರರು ಪ್ಲೇಯಿಂಗ್ ಇಲೆವೆನ್​ನಲ್ಲಿ ಆಯ್ಕೆಯಾಗುವ ಸಾಧ್ಯತೆ ಇದ್ದು, ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಆಡಲಿದ್ದಾರೆ.

ಪಂತ್​ಗೆ ವಿಶ್ರಾಂತಿ

ಈ ಹಿಂದೆ ಕೇಳಿಬಂದ ಊಹಪೋಹಗಳು ನಿಜವಾಗಿದ್ದು, ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ರಿಷಬ್ ಪಂತ್​ಗೆ ವಿಶ್ರಾಂತಿ ನೀಡಲಾಗಿದೆ. ಇದಕ್ಕೆ ಕಾರಣವೂ ಇದ್ದು ಈ ಸರಣಿಯ ನಂತರ ಟೀಂ ಇಂಡಿಯಾ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಗಳನ್ನು ಆಡಬೇಕಿದೆ. ಹೀಗಾಗಿ ಕೆಲಸದ ಹೊರೆ ನಿರ್ವಹಣೆಗಾಗಿ ಪಂತ್​ಗೆ ವಿಶ್ರಾಂತಿ ನೀಡಲಾಗಿದೆ. ಅವರ ಜಾಗದಲ್ಲಿ ಜಿತೇಶ್ ಶರ್ಮಾ ಎರಡನೇ ವಿಕೆಟ್ ಕೀಪರ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ:ಸೂರ್ಯಕುಮಾರ್ ಯಾದವ್, (ನಾಯಕ) ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.

2 ತಿಂಗಳ ನಂತರ ಟಿ20 ತಂಡ ಅಖಾಡಕ್ಕೆ

ಭಾರತ ಮತ್ತು ಬಾಂಗ್ಲಾದೇಶ ನಡುವಿನ 3 ಪಂದ್ಯಗಳ ಟಿ20 ಸರಣಿ ಅಕ್ಟೋಬರ್ 6 ರಿಂದ ಆರಂಭವಾಗಲಿದೆ. ಈ ಸರಣಿಯೊಂದಿಗೆ ಎರಡು ತಿಂಗಳ ನಂತರ ಟಿ20 ತಂಡ ಮತ್ತೆ ಮೈದಾನಕ್ಕೆ ಮರಳಲಿದೆ. ಇದಕ್ಕೂ ಮುನ್ನ ಜುಲೈ ಅಂತ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿ ಟಿ20 ಸರಣಿಯನ್ನು ಆಡಿತ್ತು. ಆ ಸರಣಿಯಲ್ಲಿ ಆಡಿದ್ದ ಅನೇಕ ಆಟಗಾರರೂ ಈ ಸರಣಿಗೂ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಪ್ರಮುಖ ಆಟಗಾರರಾದ ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ಅಕ್ಷರ್ ಪಟೇಲ್ ಮತ್ತು ಮೊಹಮ್ಮದ್ ಸಿರಾಜ್ ಅವರಿಗೆ ಮೇಲೆ ಹೇಳಿದಂತೆ ಕೆಲಸದ ಹೊರೆ ನಿರ್ವಹಣೆಗಾಗಿ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:05 pm, Sat, 28 September 24

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!