AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಅರ್ಧ ಶತಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

India Women vs South Africa Women, Final: ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್​ನ ಫೈನಲ್ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್​ಗಳಲ್ಲಿ 246 ರನ್​ಗಳಿಸಿ ಆಲೌಟ್ ಆಗಿ 52 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಟೀಮ್ ಇಂಡಿಯಾಗೆ ಅರ್ಧ ಶತಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ
Team India
ಝಾಹಿರ್ ಯೂಸುಫ್
|

Updated on:Nov 03, 2025 | 10:31 AM

Share

ಭಾರತ ಮಹಿಳಾ ತಂಡ ಚೊಚ್ಚಲ ಬಾರಿ ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ತಂಡವನ್ನು ಸೋಲಿಸಿ ಟೀಮ್ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದೆ. ಈ ಸಾಧನೆಗೈದ ಟೀಮ್ ಇಂಡಿಯಾಗೆ ಭಾರತೀಯ ಕ್ರಿಕೆಟ್ ಮಂಡಳಿ ಅರ್ಧ ಶತಕೋಟಿಗೂ ಅಧಿಕ ಬಹುಮಾನ ಮೊತ್ತ ಘೋಷಿಸಿದೆ.

ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದಿರುವ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ 51 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ. ಈ ಬಗ್ಗೆ ಮಾತನಾಡಿದ ಭಾರತೀಯ ಕ್ರಿಕೆಟ್ ಮಂಡಳಿಯ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಟೀಮ್ ಇಂಡಿಯಾ ಪ್ರದರ್ಶನದಿಂದಾಗಿ ಬಿಸಿಸಿಐಗೆ ತುಂಬಾ ಸಂತೋಷವಾಗಿದೆ. ಈ ಸ್ಮರಣೀಯ ಗೆಲುವಿಗಾಗಿ ಬಿಸಿಸಿಐ 51 ಕೋಟಿ ರೂ.  51 ಕೋಟಿ ರೂಪಾಯಿಗಳನ್ನು ಬಹುಮಾನವಾಗಿ ನೀಡಲಿದೆ ಎಂದು ತಿಳಿಸಿದ್ದಾರೆ.

ಈ 51 ಕೋಟಿ ರೂ. ಅನ್ನು ಟೀಮ್ ಇಂಡಿಯಾ ಆಟಗಾರರು, ಆಯ್ಕೆದಾರರು ಮತ್ತು ಅಮೋಲ್ ಮುಝುಂದಾರ್ ನೇತೃತ್ವದ ಸಹಾಯಕ ಸಿಬ್ಬಂದಿಗೆ ನೀಡಲಾಗುವುದು ಎಂದು ದೇವಜಿತ್ ಸೈಕಿಯಾ ತಿಳಿಸಿದ್ದಾರೆ.

125 ಕೋಟಿ ಪಡೆದಿದ್ದ ಪುರುಷರ ತಂಡ:

2024ರ ಟಿ20 ವಿಶ್ವಕಪ್ ಗೆದ್ದ ಭಾರತ ಪುರುಷರ ತಂಡಕ್ಕೆ ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿತ್ತು. ಈ ಬಹುಮಾನವನ್ನು ಆಟಗಾರರು ಹಾಗೂ ಕೋಚಿಂಗ್ ಸಿಬ್ಬಂದಿಗಳಿಗೆ ಹಂಚಲಾಗಿತ್ತು. ಅದರಂತೆ…

  • ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡ 15 ಆಟಗಾರರು ತಲಾ 5 ಕೋಟಿ ರೂ. ಪಡೆದಿದ್ದರು.
  • ಟೀಮ್ ಇಂಡಿಯಾದ ಮೀಸಲು ಆಟಗಾರರಾಗಿದ್ದ ರಿಂಕು ಸಿಂಗ್, ಶುಭಮನ್ ಗಿಲ್, ಅವೇಶ್ ಖಾನ್ ಮತ್ತು ಖಲೀಲ್ ಅಹ್ಮದ್ ತಲಾ 1 ಕೋಟಿ ರೂ. ಲಭಿಸಿತ್ತು.
  • ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ 5 ಕೋಟಿ ರೂ. ನೀಡಲಾಗಿತ್ತು.
  • ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್ ಕೋಚ್ ಪರಾಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಅವರಿಗೆ ತಲಾ 2.5 ಕೋಟಿ ರೂ. ಲಭಿಸಿತ್ತು.
  • ಟೀಮ್ ಇಂಡಿಯಾ ಫಿಸಿಯೋಥೆರಪಿಸ್ಟ್‌ಗಳಾದ ಕಮಲೇಶ್ ಜೈನ್, ಯೋಗೇಶ್ ಪರ್ಮಾರ್ ಮತ್ತು ತುಳಸಿ ರಾಮ್ ಯುವರಾಜ್​ಗೆ ತಲಾ 2 ಕೋಟಿ ರೂ. ಪಡೆದಿದ್ದರು.
  • ಭಾರತ ತಂಡ ಥ್ರೋಡೌನ್ ಸ್ಪೆಷಲಿಸ್ಟ್​ಗಳಾದ ರಾಘವಿಂದ್ರ ದಿವಿಗಿ, ನುವಾನ್ ಉದೆನೆಕೆ ಮತ್ತು ದಯಾನಂದ್ ಗರಾನಿಗೆ ತಲಾ 2 ಕೋಟಿ ರೂ. ಪಡೆದಿದ್ದರು.
  • ಟೀಮ್ ಇಂಡಿಯಾ ಮಸಾಜ್ ಥೆರಪಿಸ್ಟ್‌ಗಳಾದ ರಾಜೀವ್ ಕುಮಾರ್ ಮತ್ತು ಅರುಣ್ ಕಾನಡೆಗೆ ತಲಾ 2 ಕೋಟಿ ರೂ. ಭಾರತ ತಂಡದ ಸ್ಟ್ರೆಂಗ್ತ್ ಅ್ಯಂಡ್ ಕಂಡೀಷನಿಂಗ್ ಕೋಚ್ ಸೋಹಮ್ ದೇಸಾಯಿಗೆ 2 ಕೋಟಿ ರೂ. ನೀಡಲಾಗಿತ್ತು.
  • ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಸೇರಿದಂತೆ ಆಯ್ಕೆ ಸಮಿತಿಯ ಸದಸ್ಯರಿಗೆ ತಲಾ 1 ಕೋಟಿ ರೂ. ಪಡೆದಿದ್ದರು.

ಇದೀಗ ಇದೇ ಮಾದರಿಯಲ್ಲಿ ಭಾರತ ಮಹಿಳಾ ತಂಡಕ್ಕೆ ನೀಡಲಾದ 51 ಕೋಟಿ ರೂ. ಬಹುಮಾನ ಮೊತ್ತವನ್ನು ಹಂಚಲಾಗುತ್ತದೆ.

ಇದನ್ನೂ ಓದಿ: Laura Wolvaardt: ಕೈ ಕೊಟ್ಟ ವಿಶ್ವಕಪ್​ನಲ್ಲೂ ಕೈ ಹಿಡಿದ ವಿಶ್ವ ದಾಖಲೆ

ಐಸಿಸಿಯಿಂದ ಸಿಕ್ಕ ಬಹುಮಾನ ಮೊತ್ತ ಎಷ್ಟು?

  • ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾಗೆ ಬಹುಮಾನ ಮೊತ್ತವಾಗಿ 4.48 ಅಮೆರಿಕನ್ ಮಿಲಿಯನ್ ಡಾಲರ್ ಲಭಿಸಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಸುಮಾರು 40 ಕೋಟಿ ರೂ.
  • ರನ್ನರ್ ಅಪ್ ಆಗಿರುವ ಸೌತ್ ಆಫ್ರಿಕಾ 2.24 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ ಮೊತ್ತವಾಗಿ ಪಡೆದುಕೊಂಢಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಸುಮಾರು 20 ಕೋಟಿ ರೂ.

Published On - 10:23 am, Mon, 3 November 25

Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​