AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adidas: ಟೀಮ್ ಇಂಡಿಯಾಕ್ಕೆ ಹೊಸ ಕಂಪನಿಯ ಪ್ರಾಯೋಜಕತ್ವ: ಇನ್ನುಂದೆ ಅಡಿಡಾಸ್ ಭಾರತದ ಕಿಟ್ ಸ್ಪಾನ್ಸರ್

BCCI: ಭಾರ​ತೀಯ ಕ್ರಿಕೆಟ್‌ ನಿಯಂತ್ರಣ ಮಂಡ​ಳಿ ಮತ್ತೊಂದು ಬಹು​ಕೋಟಿ ಒಪ್ಪಂದದ ಮೂಲಕ ಪ್ರತಿಷ್ಠಿತ ಅಡಿ​ಡಾಸ್‌ (Adidas) ಸಂಸ್ಥೆ​ಯೊಂದಿಗೆ ಕಿಟ್‌ ಪ್ರಾಯೋ​ಜ​ಕ​ತ್ವಕ್ಕೆ ಸಹಿ ಹಾಕಿದೆ.

Adidas: ಟೀಮ್ ಇಂಡಿಯಾಕ್ಕೆ ಹೊಸ ಕಂಪನಿಯ ಪ್ರಾಯೋಜಕತ್ವ: ಇನ್ನುಂದೆ ಅಡಿಡಾಸ್ ಭಾರತದ ಕಿಟ್ ಸ್ಪಾನ್ಸರ್
BCCI and Virat Kohli
Vinay Bhat
|

Updated on: May 22, 2023 | 2:05 PM

Share

ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿ ಬಿಸಿಸಿಐ (BCCI) ಜೊತೆ ಜರ್ಮನ್ ಕ್ರೀಡಾ ಸಾಮಗ್ರಿಗಳ ಕಂಪನಿ ಅಡಿಡಾಸ್ ಒಪ್ಪಂದವೊಂದಕ್ಕೆ ಸಹಿ ಹಾಕಿದೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಭಾರ​ತೀಯ ಕ್ರಿಕೆಟ್‌ ನಿಯಂತ್ರಣ ಮಂಡ​ಳಿ ಮತ್ತೊಂದು ಬಹು​ಕೋಟಿ ಒಪ್ಪಂದದ ಮೂಲಕ ಪ್ರತಿಷ್ಠಿತ ಅಡಿ​ಡಾಸ್‌ (Adidas) ಸಂಸ್ಥೆ​ಯೊಂದಿಗೆ ಕಿಟ್‌ ಪ್ರಾಯೋ​ಜ​ಕ​ತ್ವಕ್ಕೆ ಸಹಿ ಹಾಕಿದೆ. ವರದಿಗಳ ಪ್ರಕಾರ, ಈ ಜರ್ಮನ್ ಕಂಪನಿ 5 ವರ್ಷಕ್ಕೆ ಬಿಸಿಸಿಐಗೆ 350 ಕೋಟಿ ರೂ. ನೀಡಲಿದೆ. ಈ ಒಪ್ಪಂದದ ಪ್ರಕಾರ ಇನ್ನುಮುಂದೆ ಟೀಮ್ ಇಂಡಿಯಾ (Team India) ಆಟಗಾರರು ತೊಡುವ ಜೆರ್ಸಿಯ ಮೇಲೆ ಅಡಿಡಾಸ್ ಕಂಪನಿಯ ಲೋಗೋ ಇರಲಿದೆ.

“ಕಿಟ್ ಪ್ರಾಯೋಜಕರಾಗಿ ಅಡಿಡಾಸ್ ಜೊತೆಗೆ ಬಿಸಿಸಿಐ ಪಾಲುದಾರಿಕೆಯನ್ನು ಘೋಷಿಸಲು ಸಂತೋಷವಾಗಿದೆ. ನಾವು ಕ್ರಿಕೆಟ್ ಆಟವನ್ನು ಬೆಳೆಸಲು ಬದ್ಧರಾಗಿದ್ದೇವೆ ಮತ್ತು ವಿಶ್ವದ ಪ್ರಮುಖ ಕ್ರೀಡಾ ಉಡುಪುಗಳ ಬ್ರ್ಯಾಂಡ್‌ಗಳಲ್ಲಿ ಒಂದಾಗಿರುವ ಅಡಿಡಾಸ್ ಜೊತೆ ಪಾಲುದಾರರಾಗಲು ಹೆಚ್ಚು ಉತ್ಸುಕರಾಗಿದ್ದೇವೆ,” ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ
Image
Shubhman Gill: ಶುಭ್​ಮನ್ ಗಿಲ್ ಸಹೋದರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೆಲ ಆರ್​ಸಿಬಿ ಫ್ಯಾನ್ಸ್: ವೈರಲ್ ಆಗುತ್ತಿದೆ ಫೋಟೋ
Image
Virat Kohli: ಮೈದಾನದಲ್ಲಿ ಕಣ್ಣೀರಿಟ್ಟ ಸಿರಾಜ್, ಕೋಪದಲ್ಲಿ ಬಾಟಲ್ ಎಸೆದ ಕೊಹ್ಲಿ: ಇದು ಪಂದ್ಯದ ಬಳಿಕ ನಡೆದ ಘಟನೆ
Image
ಶತಕ ಬಾರಿಸಿದ ವಿರಾಟ್ ಕೊಹ್ಲಿಗೆ ಸ್ಟೇಡಿಯಂನಿಂದ ಫ್ಲೈಯಿಂಗ್ ಕಿಸ್ ಕೊಟ್ಟ ಅನುಷ್ಕಾ ಶರ್ಮಾ; ಇಲ್ಲಿದೆ ವಿಡಿಯೋ
Image
Faf Du Plessis: ಪಂದ್ಯ ಮುಗಿದ ಬಳಿಕ ನೋವು ತೋಡಿಕೊಂಡ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್: ಏನು ಹೇಳಿದ್ರು ನೋಡಿ

IPL 2023: ಕೈಕೊಟ್ಟ ಬೌಲರ್​ಗಳು: ಸೋಲಿನೊಂದಿಗೆ RCB ಅಭಿಯಾನ ಅಂತ್ಯ..!

ಇತ್ತೀಚೆಗೆ ಎಂಪಿಎಲ್ ಕಂಪನಿ, ಬಿಸಿಸಿಐ ಜೊತೆಗಿನ ಒಪ್ಪಂದವನ್ನು ಮಧ್ಯದಲ್ಲಿ ಮುರಿದುಕೊಂಡಿತ್ತು. ಇದರ ನಂತರ ಕಿಲ್ಲರ್ ಜೀನ್ಸ್ ಕಂಪನಿ ಸ್ವಲ್ಪ ಸಮಯದವರೆಗೆ ಟೀಮ್ ಇಂಡಿಯಾದ ಜೆರ್ಸಿಯ ಪ್ರಾಯೋಜಕತ್ವ ಪಡೆದುಕೊಂಡಿತ್ತು. ಆದರೆ ಈಗ ಅಡಿಡಾಸ್ ಈ ಒಪ್ಪಂದವನ್ನು ಪಡೆದುಕೊಂಡಿದೆ. 2020 ರ ವರೆಗೆ, ನೈಕ್ ಕಂಪನಿಯು ಟೀಮ್ ಇಂಡಿಯಾದೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಭಾರತ ತಂಡ ಮತ್ತು ನೈಕ್ ನಡುವಿನ ಒಡನಾಟ 14 ವರ್ಷಗಳ ಕಾಲ ನಡೆಯಿತು. ಇದರಡಿಯಲ್ಲಿ ಪ್ರತಿ ಪಂದ್ಯಕ್ಕೆ ನೈಕ್ ಕಂಪನಿ 85 ಲಕ್ಷ ರೂಪಾಯಿಗಳನ್ನು ಬಿಸಿಸಿಐಗೆ ಪಾವತಿಸುತ್ತಿತ್ತು.

ಐಪಿಎಲ್ 2023 ಮುಗಿದ ಬಳಿಕ ಟೀಮ್ ಇಂಡಿಯಾ ಆಟಗಾರರು ಆಸ್ಟ್ರೇಲಿಯಾ ವಿರುದ್ಧ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಕಣಕ್ಕಿಳಿಯಲಿದ್ದು, ಇದರಲ್ಲಿ ಅಡಿಡಾಸ್ ಕಿಟ್​ನೊಂದಿಗೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಭಾರತ ಹಾಗೂ ಆಸ್ಟ್ರೇಲಿಯಾ ತಂಡದ ಆಟಗಾರರು ಇಂಗ್ಲೆಂಡ್​ಗೆ ಪ್ರಯಾಣ ಬೆಳೆಸಲಿದ್ದಾರೆ. ಐಸಿಸಿ ಡಬ್ಲ್ಯೂಟಿಸಿ ಫೈನಲ್ ಜೂನ್ 7 ರಿಂದ 11ರ ವರೆಗೆ ನಡೆಯಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನ ಈ ಐತಿಹಾಸಿಕ ಕಾದಾಟಕ್ಕೆ ಸಾಕ್ಷಿಯಾಗಲಿದೆ.

ಈಗಾಗಲೇ ಈ ಮಹತ್ವದ ಟೂರ್ನಿಗೆ ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ಈ ಹಿಂದೆ ಟೆಸ್ಟ್ ತಂಡದಿಂದ ಹೊರಬಿದ್ದ ಅಜಿಂಕ್ಯಾ ರಹಾನೆ ಕಮ್​ಬ್ಯಾಕ್ ಮಾಡಿದ್ದಾರೆ. ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದು ಶುಭ್​ಮನ್ ಗಿಲ್ ಆಯ್ಕೆ ಆಗಿದ್ದಾರೆ. ಕೆಎಸ್ ಭರತ್ ವಿಕೆಟ್ ಕೀಪರ್ ಆಗಿರಲಿದ್ದಾರೆ. ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಮಧ್ಯಮ ಕ್ರಮಾಂಕದ ಬಲವಾಗಿದ್ದಾರೆ. ಆಲ್ರೌಂಡರ್​ಗಳಾಗಿ ನಾಲ್ವರು ಆಯ್ಕೆ ಆಗಿದ್ದು ರವಿಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಥಾಕೂರ್ ಹಾಗೂ ರವಿಚಂದ್ರನ್ ಅಶ್ವಿನ್ ಇದ್ದಾರೆ. ವೇಗಿಗಳ ವಿಭಾಗದಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕಟ್ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ