ಅಂಡರ್-19 ಏಷ್ಯಾಕಪ್​ಗೆ ಟೀಂ ಇಂಡಿಯಾ ಪ್ರಕಟ; ಈ ದಿನದಂದು ಭಾರತ- ಪಾಕ್ ಫೈಟ್

U19 Asia Cup 2023: ಮುಂದಿನ ತಿಂಗಳು ಅಂದರೆ ಡಿಸೆಂಬರ್​ನಲ್ಲಿ ದುಬೈನಲ್ಲಿ ನಡೆಯಲ್ಲಿರುವ ಅಂಡರ್-19 ಏಷ್ಯಾಕಪ್‌ಗೆ ಬಿಸಿಸಿಐ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಈ ಪಂದ್ಯಾವಳಿಯು ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದ್ದು, ಅಂತಿಮ ಪಂದ್ಯವು ಡಿಸೆಂಬರ್ 17 ರಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಅಂಡರ್-19 ಏಷ್ಯಾಕಪ್​ಗೆ ಟೀಂ ಇಂಡಿಯಾ ಪ್ರಕಟ; ಈ ದಿನದಂದು ಭಾರತ- ಪಾಕ್ ಫೈಟ್
ಟೀಂ ಇಂಡಿಯಾ
Follow us
|

Updated on: Nov 25, 2023 | 5:57 PM

ಮುಂದಿನ ತಿಂಗಳು ಅಂದರೆ ಡಿಸೆಂಬರ್​ನಲ್ಲಿ ದುಬೈನಲ್ಲಿ ನಡೆಯಲ್ಲಿರುವ ಅಂಡರ್-19 ಏಷ್ಯಾಕಪ್‌ಗೆ (U19 Asia Cup 2023) ಬಿಸಿಸಿಐ 15 ಸದಸ್ಯರ ಟೀಂ ಇಂಡಿಯಾವನ್ನು (Team India) ಪ್ರಕಟಿಸಿದೆ. ಈ ಪಂದ್ಯಾವಳಿಯು ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದ್ದು, ಅಂತಿಮ ಪಂದ್ಯವು ಡಿಸೆಂಬರ್ 17 ರಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು ಪ್ರಕಟವಾದ ಭಾರತದ ಅಂಡರ್ 19 ತಂಡದಲ್ಲಿ 15 ಸದಸ್ಯರು ಮತ್ತು ಮೂವರು ಮೀಸಲು ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲದೆ ಆಯ್ಕೆ ಸಮಿತಿ ಇನ್ನೂ ನಾಲ್ವರು ಮೀಸಲು ಆಟಗಾರರನ್ನು ಹೆಸರಿಸಿದೆ. ಆದರೆ ಈ 4 ಮೀಸಲು ಆಟಗಾರರು ತಂಡದೊಂದಿಗೆ ಹೋಗುವುದಿಲ್ಲ.

8 ತಂಡಗಳ ನಡುವೆ ಪಂದ್ಯಾವಳಿ

ಅಂಡರ್-19 ಏಷ್ಯಾ ಕಪ್ 2023 8 ತಂಡಗಳ ನಡುವೆ ನಡೆಯಲಿದೆ. 8 ತಂಡಗಳನ್ನು ತಲಾ ನಾಲ್ಕರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಪಾಕಿಸ್ತಾನ, ಭಾರತ, ಅಫ್ಘಾನಿಸ್ತಾನ ಮತ್ತು ನೇಪಾಳ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದರೆ, ಬಿ ಗುಂಪಿನಲ್ಲಿ ಶ್ರೀಲಂಕಾ, ಜಪಾನ್, ಯುಎಇ ಮತ್ತು ಬಾಂಗ್ಲಾದೇಶವಿದೆ. ಟೀಂ ಇಂಡಿಯಾ ಅಂಡರ್-19 ಏಷ್ಯಾಕಪ್‌ನ ಅತ್ಯಂತ ಯಶಸ್ವಿ ತಂಡವಾಗಿದ್ದು, ಈ ಟೂರ್ನಿಯಲ್ಲಿ 8 ಬಾರಿ ಪ್ರಶಸ್ತಿ ಜಯಿಸಿದೆ. ಕಳೆದ ಬಾರಿ ಅಂದರೆ 2021ರಲ್ಲಿ ನಡೆದಿದ್ದ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸಿ ಟೀಂ ಇಂಡಿಯಾ ಟ್ರೋಫಿ ಗೆದ್ದಿತ್ತು.

U-19 Asia Cup: ಪಾಕ್ ಎದುರು ಭಾರತ ಅಂಡರ್ 19 ತಂಡಕ್ಕೆ ಸೋಲು! ಕೊನೇ ಎಸೆತದಲ್ಲಿ ಗೆದ್ದ ಬದ್ಧವೈರಿ

ಭಾರತ- ಪಾಕ್ ಮುಖಾಮುಖಿ ಯಾವಾಗ?

ಟೀಂ ಇಂಡಿಯಾ ಪ್ರಕಟವಾಗುವುದರೊಂದಿಗೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಮುಖಾಮುಖಿಯ ದಿನಾಂಕವೂ ನಿಗದಿಯಾಗಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಡಿಸೆಂಬರ್ 10 ರಂದು ದುಬೈನ ಐಸಿಸಿ ಅಕಾಡೆಮಿ ಓವಲ್ 1 ಕ್ರೀಡಾಂಗಣದಲ್ಲಿ ನಡೆಯಲಿದೆ.

ಟೀಂ ಇಂಡಿಯಾದ ವೇಳಾಪಟ್ಟಿ

  • ಡಿಸೆಂಬರ್ 8 – ಭಾರತ vs ಅಫ್ಘಾನಿಸ್ತಾನ
  • ಡಿಸೆಂಬರ್ 10 – ಭಾರತ vs ಪಾಕಿಸ್ತಾನ
  • ಡಿಸೆಂಬರ್ 12  – ಭಾರತ vs ನೇಪಾಳ
  • ಡಿಸೆಂಬರ್ 15  – ಎರಡೂ ಸೆಮಿಫೈನಲ್ ಪಂದ್ಯಗಳು
  • ಡಿಸೆಂಬರ್ 17 – ಅಂತಿಮ ಪಂದ್ಯ

ಅಂಡರ್-19 ಏಷ್ಯಾಕಪ್‌ಗೆ ಭಾರತ ತಂಡ

ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ಧಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಉದಯ್ ಸಹರಾನ್ (ನಾಯಕ), ಅರವೆಲ್ಲಿ ಅವನೀಶ್ ರಾವ್ (ವಿಕೆಟ್ ಕೀಪರ್), ಸೌಮ್ಯ ಕುಮಾರ್ ಪಾಂಡೆ (ಉಪನಾಯಕ), ಮುರುಗನ್ ಅಭಿಷೇಕ್, ಇನೇಶ್ ಮಹಾಜನ್ (ವಿಕೆಟ್ ಕೀಪರ್), ಧನುಷ್ ಗೌಡ, ಆರಾಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.

ಟ್ರಾವೆಲಿಂಗ್ ಸ್ಟ್ಯಾಂಡ್‌ಬೈ ಆಟಗಾರರು: ಪ್ರೇಮ್ ದಿಯೋಕರ್, ಅಂಶ್ ಗೋಸಾಯಿ, ಮೊಹಮ್ಮದ್ ಅಮನ್

ಮೀಸಲು ಆಟಗಾರರು: ದಿಗ್ವಿಜಯ್ ಪಾಟೀಲ್, ಜಯಂತ್ ಗೋಯತ್, ಪಿ ವಿಘ್ನೇಶ್, ಕಿರಣ್ ಚೋರ್ಮಲೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು