AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿಸಿ ಉದಯೋನ್ಮುಖ ಮಹಿಳಾ ಏಷ್ಯಾಕಪ್​ಗೆ ಭಾರತ ‘ಎ’ ತಂಡ ಪ್ರಕಟ; ಶ್ವೇತಾ ಸೆಹ್ರಾವತ್​ಗೆ ನಾಯಕತ್ವ

Acc Emerging Women's Asia Cup: ಜೂನ್ 12 ರಂದು ಹಾಂಗ್ ಕಾಂಗ್‌ನಲ್ಲಿ ಪ್ರಾರಂಭವಾಗಲಿರುವ ಎಸಿಸಿ ಉದಯೋನ್ಮುಖ ಮಹಿಳಾ ಏಷ್ಯಾಕಪ್​ಗೆ 14 ಸದಸ್ಯರ ಭಾರತ ಮಹಿಳಾ ‘ಎ' ತಂಡವನ್ನು ಬಿಸಿಸಿಐ ಪ್ರಕಟಿಸಿದೆ.

ಎಸಿಸಿ ಉದಯೋನ್ಮುಖ ಮಹಿಳಾ ಏಷ್ಯಾಕಪ್​ಗೆ ಭಾರತ ‘ಎ' ತಂಡ ಪ್ರಕಟ; ಶ್ವೇತಾ ಸೆಹ್ರಾವತ್​ಗೆ ನಾಯಕತ್ವ
ಭಾರತ ವನಿತಾ ತಂಡ
ಪೃಥ್ವಿಶಂಕರ
|

Updated on: Jun 02, 2023 | 3:18 PM

Share

ಜೂನ್ 12 ರಂದು ಹಾಂಗ್ ಕಾಂಗ್‌ನಲ್ಲಿ ಪ್ರಾರಂಭವಾಗಲಿರುವ ಎಸಿಸಿ ಉದಯೋನ್ಮುಖ ಮಹಿಳಾ ಏಷ್ಯಾಕಪ್​ಗೆ (Acc Emerging Women’s Asia Cup) 14 ಸದಸ್ಯರ ಭಾರತ ಮಹಿಳಾ ‘ಎ’ ತಂಡವನ್ನು ಬಿಸಿಸಿಐ (BCCI) ಪ್ರಕಟಿಸಿದೆ. ತಂಡದ ನಾಯಕತ್ವವನ್ನು ಅಂಡರ್ 19 ವಿಶ್ವಕಪ್ ಸ್ಟಾರ್, ಬ್ಯಾಟಿಂಗ್ ಆಲ್‌ರೌಂಡರ್ ಶ್ವೇತಾ ಸೆಹ್ರಾವತ್ (Shweta Sehrawat) ಅವರಿಗೆ ನೀಡಲಾಗಿದೆ. ಭಾರತ ಎ ತಂಡದ ನಾಯಕತ್ವವಹಿಸಿಕೊಂಡಿರುವ ಸೆಹ್ರಾವತ್, ಇದೇ ವರ್ಷ ನಡೆದ ಅಂಡರ್ 19 ವಿಶ್ವಕಪ್​ನಲ್ಲಿ (U-19 Women’s World Cup) ಆಡಿದ ಏಳು ಇನ್ನಿಂಗ್ಸ್‌ಗಳಲ್ಲಿ 297 ರನ್ ಬಾರಿಸುವ ಮೂಲಕ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ್ತಿಯರ ಪೈಕಿ ಅಗ್ರಸ್ಥಾನ ಪಡೆದುಕೊಂಡಿದ್ದರು. ಇನ್ನು ಜೂನ್ 13 ರಂದು ಆತಿಥೇಯ ಹಾಂಕಾಂಗ್ ವಿರುದ್ಧ ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಲಿದ್ದು, ಈ ಪಂದ್ಯಾವಳಿಯ ಫೈನಲ್ ಪಂದ್ಯ ಜೂನ್ 21 ರಂದು ನಡೆಯಲಿದೆ.

ಜೂನ್ 13 ರಂದು ಮೊದಲ ಪಂದ್ಯ

ಉದಯೋನ್ಮುಖ ಮಹಿಳೆಯರ ಏಷ್ಯಾಕಪ್‌ನಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿರುವ ಭಾರತ ತಂಡ, ಜೂನ್ 13 ರಂದು ಆತಿಥೇಯ ಹಾಂಗ್ ಕಾಂಗ್ ವಿರುದ್ಧ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದ್ದು, ಜೂನ್ 15 ಮತ್ತು ಜೂನ್ 17 ರಂದು ಕ್ರಮವಾಗಿ ಥಾಯ್ಲೆಂಡ್ ಎ ಮತ್ತು ಪಾಕಿಸ್ತಾನ ಎ ತಂಡಗಳನ್ನು ಎದುರಿಸಲಿದೆ. ಪ್ರತಿ ಪೂಲ್‌ನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ.

MS Dhoni Surgery: ಸರ್ಜರಿ ಬಳಿಕ ಆಸ್ಪತ್ರೆಯಿಂದ ಧೋನಿ ಡಿಸ್ಚಾರ್ಜ್; ಚೇತರಿಸಿಕೊಳ್ಳಲು ಎಷ್ಟು ತಿಂಗಳು ಬೇಕು?

ಎಂಟು ತಂಡಗಳ ಎರಡು ಗುಂಪು

ಭಾರತ ‘ಎ’ ತಂಡ ಎ ಗುಂಪಿನ ಭಾಗವಾಗಿದ್ದು, ಇದರಲ್ಲಿ ಆತಿಥೇಯ ಹಾಂಗ್ ಕಾಂಗ್, ಥಾಯ್ಲೆಂಡ್ ‘ಎ’ ಮತ್ತು ಪಾಕಿಸ್ತಾನ ‘ಎ’ ತಂಡಗಳು ಸೇರಿವೆ. ಇನ್ನು ಬಿ ಗುಂಪಿನಲ್ಲಿ ಬಾಂಗ್ಲಾದೇಶ ‘ಎ’, ಶ್ರೀಲಂಕಾ ‘ಎ’, ಮಲೇಷ್ಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ‘ಎ’ ತಂಡಗಳು ಸ್ಥಾನ ಪಡೆದಿವೆ.

ಭಾರತ ‘ಎ’ ತಂಡ: ಶ್ವೇತಾ ಸೆಹ್ರಾವತ್ (ನಾಯಕಿ), ಸೌಮ್ಯ ತಿವಾರಿ (ಉಪನಾಯಕಿ), ತ್ರಿಶಾ ಗೊಂಗಡಿ, ಮುಸ್ಕಾನ್ ಮಲಿಕ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಉಮಾ ಚೆಟ್ರಿ (ವಿಕೆಟ್ ಕೀಪರ್), ಮಮತಾ ಮಡಿವಾಳ (ವಿಕೆಟ್ ಕೀಪರ್), ಟೈಟಾಸ್ ಸಾಧು, ಯಶಸ್ರಿ. ಎಸ್, ಕಶ್ವೀ ಗೌತಮ್, ಪಾರ್ಶವಿ ಚೋಪ್ರಾ, ಮನ್ನತ್ ಕಶ್ಯಪ್, ಬಿ. ಅನುಷಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ