AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿಸಿ ಉದಯೋನ್ಮುಖ ಮಹಿಳಾ ಏಷ್ಯಾಕಪ್​ಗೆ ಭಾರತ ‘ಎ’ ತಂಡ ಪ್ರಕಟ; ಶ್ವೇತಾ ಸೆಹ್ರಾವತ್​ಗೆ ನಾಯಕತ್ವ

Acc Emerging Women's Asia Cup: ಜೂನ್ 12 ರಂದು ಹಾಂಗ್ ಕಾಂಗ್‌ನಲ್ಲಿ ಪ್ರಾರಂಭವಾಗಲಿರುವ ಎಸಿಸಿ ಉದಯೋನ್ಮುಖ ಮಹಿಳಾ ಏಷ್ಯಾಕಪ್​ಗೆ 14 ಸದಸ್ಯರ ಭಾರತ ಮಹಿಳಾ ‘ಎ' ತಂಡವನ್ನು ಬಿಸಿಸಿಐ ಪ್ರಕಟಿಸಿದೆ.

ಎಸಿಸಿ ಉದಯೋನ್ಮುಖ ಮಹಿಳಾ ಏಷ್ಯಾಕಪ್​ಗೆ ಭಾರತ ‘ಎ' ತಂಡ ಪ್ರಕಟ; ಶ್ವೇತಾ ಸೆಹ್ರಾವತ್​ಗೆ ನಾಯಕತ್ವ
ಭಾರತ ವನಿತಾ ತಂಡ
ಪೃಥ್ವಿಶಂಕರ
|

Updated on: Jun 02, 2023 | 3:18 PM

Share

ಜೂನ್ 12 ರಂದು ಹಾಂಗ್ ಕಾಂಗ್‌ನಲ್ಲಿ ಪ್ರಾರಂಭವಾಗಲಿರುವ ಎಸಿಸಿ ಉದಯೋನ್ಮುಖ ಮಹಿಳಾ ಏಷ್ಯಾಕಪ್​ಗೆ (Acc Emerging Women’s Asia Cup) 14 ಸದಸ್ಯರ ಭಾರತ ಮಹಿಳಾ ‘ಎ’ ತಂಡವನ್ನು ಬಿಸಿಸಿಐ (BCCI) ಪ್ರಕಟಿಸಿದೆ. ತಂಡದ ನಾಯಕತ್ವವನ್ನು ಅಂಡರ್ 19 ವಿಶ್ವಕಪ್ ಸ್ಟಾರ್, ಬ್ಯಾಟಿಂಗ್ ಆಲ್‌ರೌಂಡರ್ ಶ್ವೇತಾ ಸೆಹ್ರಾವತ್ (Shweta Sehrawat) ಅವರಿಗೆ ನೀಡಲಾಗಿದೆ. ಭಾರತ ಎ ತಂಡದ ನಾಯಕತ್ವವಹಿಸಿಕೊಂಡಿರುವ ಸೆಹ್ರಾವತ್, ಇದೇ ವರ್ಷ ನಡೆದ ಅಂಡರ್ 19 ವಿಶ್ವಕಪ್​ನಲ್ಲಿ (U-19 Women’s World Cup) ಆಡಿದ ಏಳು ಇನ್ನಿಂಗ್ಸ್‌ಗಳಲ್ಲಿ 297 ರನ್ ಬಾರಿಸುವ ಮೂಲಕ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ್ತಿಯರ ಪೈಕಿ ಅಗ್ರಸ್ಥಾನ ಪಡೆದುಕೊಂಡಿದ್ದರು. ಇನ್ನು ಜೂನ್ 13 ರಂದು ಆತಿಥೇಯ ಹಾಂಕಾಂಗ್ ವಿರುದ್ಧ ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಲಿದ್ದು, ಈ ಪಂದ್ಯಾವಳಿಯ ಫೈನಲ್ ಪಂದ್ಯ ಜೂನ್ 21 ರಂದು ನಡೆಯಲಿದೆ.

ಜೂನ್ 13 ರಂದು ಮೊದಲ ಪಂದ್ಯ

ಉದಯೋನ್ಮುಖ ಮಹಿಳೆಯರ ಏಷ್ಯಾಕಪ್‌ನಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿರುವ ಭಾರತ ತಂಡ, ಜೂನ್ 13 ರಂದು ಆತಿಥೇಯ ಹಾಂಗ್ ಕಾಂಗ್ ವಿರುದ್ಧ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದ್ದು, ಜೂನ್ 15 ಮತ್ತು ಜೂನ್ 17 ರಂದು ಕ್ರಮವಾಗಿ ಥಾಯ್ಲೆಂಡ್ ಎ ಮತ್ತು ಪಾಕಿಸ್ತಾನ ಎ ತಂಡಗಳನ್ನು ಎದುರಿಸಲಿದೆ. ಪ್ರತಿ ಪೂಲ್‌ನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ.

MS Dhoni Surgery: ಸರ್ಜರಿ ಬಳಿಕ ಆಸ್ಪತ್ರೆಯಿಂದ ಧೋನಿ ಡಿಸ್ಚಾರ್ಜ್; ಚೇತರಿಸಿಕೊಳ್ಳಲು ಎಷ್ಟು ತಿಂಗಳು ಬೇಕು?

ಎಂಟು ತಂಡಗಳ ಎರಡು ಗುಂಪು

ಭಾರತ ‘ಎ’ ತಂಡ ಎ ಗುಂಪಿನ ಭಾಗವಾಗಿದ್ದು, ಇದರಲ್ಲಿ ಆತಿಥೇಯ ಹಾಂಗ್ ಕಾಂಗ್, ಥಾಯ್ಲೆಂಡ್ ‘ಎ’ ಮತ್ತು ಪಾಕಿಸ್ತಾನ ‘ಎ’ ತಂಡಗಳು ಸೇರಿವೆ. ಇನ್ನು ಬಿ ಗುಂಪಿನಲ್ಲಿ ಬಾಂಗ್ಲಾದೇಶ ‘ಎ’, ಶ್ರೀಲಂಕಾ ‘ಎ’, ಮಲೇಷ್ಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ‘ಎ’ ತಂಡಗಳು ಸ್ಥಾನ ಪಡೆದಿವೆ.

ಭಾರತ ‘ಎ’ ತಂಡ: ಶ್ವೇತಾ ಸೆಹ್ರಾವತ್ (ನಾಯಕಿ), ಸೌಮ್ಯ ತಿವಾರಿ (ಉಪನಾಯಕಿ), ತ್ರಿಶಾ ಗೊಂಗಡಿ, ಮುಸ್ಕಾನ್ ಮಲಿಕ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಉಮಾ ಚೆಟ್ರಿ (ವಿಕೆಟ್ ಕೀಪರ್), ಮಮತಾ ಮಡಿವಾಳ (ವಿಕೆಟ್ ಕೀಪರ್), ಟೈಟಾಸ್ ಸಾಧು, ಯಶಸ್ರಿ. ಎಸ್, ಕಶ್ವೀ ಗೌತಮ್, ಪಾರ್ಶವಿ ಚೋಪ್ರಾ, ಮನ್ನತ್ ಕಶ್ಯಪ್, ಬಿ. ಅನುಷಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ