AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2026: ಮುಂಬರುವ ಏಷ್ಯಾಕಪ್‌ಗೆ ಭಾರತ ತಂಡ ಪ್ರಕಟ

Women's Asia Cup Rising Stars 2026: ಬಿಸಿಸಿಐ 2026ರ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಮೆಂಟ್‌ಗೆ ಭಾರತ ಎ ತಂಡವನ್ನು ಪ್ರಕಟಿಸಿದೆ. ಫೆಬ್ರವರಿ 13 ರಿಂದ 22 ರವರೆಗೆ ನಡೆಯುವ ಈ ಟೂರ್ನಿಗೆ 15 ಸದಸ್ಯರ ತಂಡ ರಚನೆಯಾಗಿದ್ದು, ರಾಧಾ ಯಾದವ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಸೀನಿಯರ್ ಆಟಗಾರ್ತಿಯರಾದ ತೇಜಲ್ ಹಸಬ್ನಿಸ್, ಮಿನ್ನು ಮಣಿ ಸಹ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಭಾರತ ಎ ತಂಡವು ಯುಎಇ, ಪಾಕಿಸ್ತಾನ ಮತ್ತು ನೇಪಾಳ ವಿರುದ್ಧ ಆಡಲಿದೆ.

Asia Cup 2026: ಮುಂಬರುವ ಏಷ್ಯಾಕಪ್‌ಗೆ ಭಾರತ ತಂಡ ಪ್ರಕಟ
Radha Yadav
ಪೃಥ್ವಿಶಂಕರ
|

Updated on:Jan 24, 2026 | 4:38 PM

Share

ಫೆಬ್ರವರಿ 13 ರಿಂದ ಆರಂಭವಾಗಲಿರುವ2026 ರ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಮೆಂಟ್​ಗಾಗಿ (Women’s Asia Cup Rising Stars 2026) ಬಿಸಿಸಿಐ ಭಾರತ ಎ ತಂಡವನ್ನು ಪ್ರಕಟಿಸಿದೆ. ಈ ಟೂರ್ನಮೆಂಟ್​ಗಾಗಿ ಆಯ್ಕೆ ಸಮಿತಿಯು 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಭಾರತೀಯ ಸೀನಿಯರ್ ತಂಡದ ಆಟಗಾರರ್ತಿಯರಿಗೂ ಆಯ್ಕೆ ಸಮಿತಿ ಅವಕಾಶ ನೀಡಿದೆ. ಮುಂಬೈಕರ್ ರಾಧಾ ಯಾದವ್ (Radha Yadav) ಈ ಟೂರ್ನಮೆಂಟ್​ನಲ್ಲಿ ಭಾರತ ಎ ತಂಡವನ್ನು ಮುನ್ನಡೆಸಲಿದ್ದಾರೆ. ಇವರಲ್ಲದೆ, ತೇಜಲ್ ಹಸನ್ಬಿಸ್, ಮಿನ್ನು ಮಣಿ ಮತ್ತು ಸೈಮಾ ಠಾಕೋರ್ ಅವರಂತಹ ಸೀನಿಯರ್ ತಂಡದ ಆಟಗಾರರ್ತಿಯರು ಕೂಡ ಈ ತಂಡದಲ್ಲಿದ್ದಾರೆ.

ಏಷ್ಯಾಕಪ್ ಬಗ್ಗೆ ಪ್ರಮುಖ ಮಾಹಿತಿ

ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026 ಟೂರ್ನಮೆಂಟ್‌ನಲ್ಲಿ ಒಟ್ಟು 8 ತಂಡಗಳು ಸ್ಪರ್ಧಿಸಲಿವೆ. ಈ ಟೂರ್ನಮೆಂಟ್‌ ಫೆಬ್ರವರಿ 13 ರಿಂದ 22 ರವರೆಗೆ ನಡೆಯಲಿದೆ. ಈ 8 ತಂಡಗಳನ್ನು ತಲಾ 4 ರ ಪ್ರಕಾರ ಎ ಮತ್ತು ಬಿ ಎಂಬ 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಟೂರ್ನಮೆಂಟ್‌ನಲ್ಲಿ ಒಟ್ಟು 15 ಪಂದ್ಯಗಳು ನಡೆಯಲಿವೆ. ಅಲ್ಲದೆ, ಪ್ರತಿ ತಂಡಕ್ಕೆ ಗುಂಪು ಹಂತದಲ್ಲಿ 3 ಪಂದ್ಯಗಳನ್ನು ಆಡುವ ಅವಕಾಶ ಸಿಗುತ್ತದೆ. ಭಾರತ ಎ ತಂಡವನ್ನು ಗುಂಪು ಎ ನಲ್ಲಿ ಸೇರಿಸಲಾಗಿದೆ. ಭಾರತದ ಜೊತೆಗೆ, ಈ ಗುಂಪಿನಲ್ಲಿ ಪಾಕಿಸ್ತಾನ ಮಹಿಳಾ ಎ, ಯುಎಇ ಮತ್ತು ನೇಪಾಳ ಮಹಿಳಾ ತಂಡಗಳು ಸೇರಿವೆ.

ಭಾರತ ಎ ಮಹಿಳಾ ತಂಡದ ವೇಳಾಪಟ್ಟಿ

  • ಫೆಬ್ರವರಿ 13, ಯುಎಇ vs ಭಾರತ
  • ಫೆಬ್ರವರಿ 15, ಪಾಕಿಸ್ತಾನ vs ಭಾರತ
  • ಫೆಬ್ರವರಿ 17, ನೇಪಾಳ vs ಭಾರತ

ಭಾರತ ಎ ತಂಡ: ಹುಮೈರಾ ಕಾಜಿ, ವೃಂದಾ ದಿನೇಶ್, ಅನುಷ್ಕಾ ಶರ್ಮಾ, ದೀಯಾ ಯಾದವ್*, ತೇಜಲ್ ಹಸಬ್ನಿಸ್, ನಂದನಿ ಕಶ್ಯಪ್ [ವಿಕೆಟ್ ಕೀಪರ್], ಮಮತಾ ಎಂ [ವಿಕೆಟ್ ಕೀಪರ್], ರಾಧಾ ಯಾದವ್ [ನಾಯಕಿ], ಸೋನಿಯಾ ಮೆಂಧಿಯಾ, ಮಿನ್ನು ಮಣಿ, ತನುಜಾ ಕನ್ವೆರ್, ಪ್ರೇಮಾ ರಾವತ್, ಸೈಮಾ ಠಾಕೋರ್, ಜಿಂತಾಮಣಿ ಕಲಿತಾ, ನಂದನಿ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Sat, 24 January 26

ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ