ಟೀಮ್ ಇಂಡಿಯಾಗೆ 5 ಕೋಟಿ ರೂ. ನೀಡಿದ ಬಿಸಿಸಿಐ

U19 Women's T20 World Cup 2025: ಭಾರತ ತಂಡವು ಅಂಡರ್-19 ಮಹಿಳಾ ಟಿ20 ವಿಶ್ವಕಪ್​ ಗೆಲ್ಲುತ್ತಿರುವುದು ಇದು 2ನೇ ಬಾರಿ. ಇದಕ್ಕೂ ಮುನ್ನ 2023 ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಶಫಾಲಿ ವರ್ಮಾ ನೇತೃತ್ವದ ಅಂಡರ್-19 ಮಹಿಳಾ ತಂಡವು ಇಂಗ್ಲೆಂಡ್ ತಂಡವನ್ನು ಮಣಿಸಿ ಚೊಚ್ಚಲ ಬಾರಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ ಟೀಮ್ ಇಂಡಿಯಾ ಮತ್ತೆ ಚಾಂಪಿಯನ್ ಪಟ್ಟಕ್ಕೇರಿದೆ.

ಟೀಮ್ ಇಂಡಿಯಾಗೆ 5 ಕೋಟಿ ರೂ. ನೀಡಿದ ಬಿಸಿಸಿಐ
Team India
Follow us
ಝಾಹಿರ್ ಯೂಸುಫ್
|

Updated on: Feb 03, 2025 | 8:54 AM

ಅಂಡರ್-19 ಮಹಿಳಾ ಟಿ20 ವಿಶ್ವಕಪ್​ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ 5 ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿದೆ. ಕೌಲಾಲಂಪುರದ ಬೇಯುಮಾಸ್ ಓವಲ್ ಮೈದಾನದಲ್ಲಿ ನಡೆದ ಅಂಡರ್-19 ಮಹಿಳಾ ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ಭಾರತ ತಂಡವು ಸೌತ್ ಆಫ್ರಿಕಾ ತಂಡವನ್ನು ಮಣಿಸಿ 2ನೇ ಬಾರಿ ವಿಶ್ವ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.

ಈ ಶ್ರೇಷ್ಠ ಸಾಧನೆಗಾಗಿ ಬಿಸಿಸಿಐ 5 ಕೋಟಿ ರೂ. ಬಹುಮಾನವನ್ನು ಘೋಷಿಸಿದ್ದು, ಈ ನಗದು ಬಹುಮಾನವನ್ನು ಆಟಗಾರರು ಹಾಗೂ ಸಿಬ್ಬಂದಿಗಳು ಹಂಚಿಕೊಳ್ಳಲಿದ್ದಾರೆ.

ಇದಕ್ಕೂ ಮುನ್ನ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಅಂಡರ್-19 ಮಹಿಳಾ ತಂಡವು 20 ಓವರ್​​ಗಳಲ್ಲಿ 82 ರನ್​ಗಳಿಸಿ ಆಲೌಟ್ ಆಗಿತ್ತು. ಟೀಮ್ ಇಂಡಿಯಾ ಪರ ಪರುಣಿಕಾ ಸಿಸೋಡಿಯಾ, ಆಯುಷಿ ಶುಕ್ಲಾ, ವೈಷ್ಣವಿ ಶರ್ಮಾ ತಲಾ 2 ವಿಕೆಟ್ ಕಬಳಿಸಿದರೆ, ಗೊಂಗಡಿ ತ್ರಿಷಾ 3 ವಿಕೆಟ್ ಪಡೆದು ಮಿಂಚಿದರು.

ಇನ್ನು 83 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಗೊಂಗಡಿ ತ್ರಿಷಾ 33 ಎಸೆತಗಳಲ್ಲಿ ಅಜೇಯ 44 ರನ್ ಬಾರಿಸಿದರೆ, ಸಾನಿಕಾ ಚಲ್ಕೆ ಅಜೇಯ 26 ರನ್​ ಚಚ್ಚಿದರು. ಈ ಮೂಲಕ ಭಾರತ ತಂಡವು 11.2 ಓವರ್​ಗಳಲ್ಲಿ 84 ರನ್ ಬಾರಿಸಿ 9 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿತು.

ಸೌತ್ ಆಫ್ರಿಕಾ ಮಹಿಳಾ U19 (ಪ್ಲೇಯಿಂಗ್ XI): ಜೆಮ್ಮಾ ಬೋಥಾ, ಸಿಮೋನ್ ಲೌರೆನ್ಸ್, ಡಿಯಾರಾ ರಾಮ್ಲಕನ್, ಫೇ ಕೌಲಿಂಗ್, ಕೈಲಾ ರೆನೆಕೆ (ನಾಯಕಿ), ಕರಾಬೊ ಮೆಸೊ (ವಿಕೆಟ್ ಕೀಪರ್), ಮೈಕೆ ವ್ಯಾನ್ ವೂರ್ಸ್ಟ್, ಸೆಶ್ನಿ ನಾಯ್ಡು, ಆಶ್ಲೀಗ್ ವ್ಯಾನ್ ವೈಕ್, ಮೊನಾಲಿಸಾ ಲೆಗೋಡಿ, ನ್ತಾಬಿಸೆಂಗ್ ನಿನಿ.

ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಪವರ್​ಗೆ ವಿರಾಟ್ ಕೊಹ್ಲಿಯ ದಾಖಲೆ ಉಡೀಸ್

ಭಾರತ ಮಹಿಳಾ U19 (ಪ್ಲೇಯಿಂಗ್ XI): ಜಿ ಕಮಲಿನಿ (ವಿಕೆಟ್ ಕೀಪರ್), ಗೊಂಗಡಿ ತ್ರಿಶಾ, ಸನಿಕಾ ಚಲ್ಕೆ, ನಿಕಿ ಪ್ರಸಾದ್ (ನಾಯಕಿ), ಈಶ್ವರಿ ಅವ್ಸಾರೆ, ಮಿಥಿಲಾ ವಿನೋದ್, ಆಯುಷಿ ಶುಕ್ಲಾ, ಜೋಶಿತಾ ವಿಜೆ, ಶಬ್ನಮ್ ಎಂಡಿ ಶಕಿಲ್, ಪರುಣಿಕಾ ಸಿಸೋಡಿಯಾ, ವೈಷ್ಣವಿ ಶರ್ಮಾ.

ಸೆಲೆಬ್ರಿಟಿಗಳಿಲ್ಲದೆ ಸರಳವಾಗಿ ಮದುವೆಯಾದ ಬಿಲಿಯನೇರ್ ಮಗ ಜೀತ್ ಅದಾನಿ
ಸೆಲೆಬ್ರಿಟಿಗಳಿಲ್ಲದೆ ಸರಳವಾಗಿ ಮದುವೆಯಾದ ಬಿಲಿಯನೇರ್ ಮಗ ಜೀತ್ ಅದಾನಿ
ದೆಹಲಿ ನಾಯಕರ ಭೇಟಿ ಬಳಿಕ ಶಾಸಕ ಯತ್ನಾಳ್​ ಹೇಳಿದ್ದಿಷ್ಟು
ದೆಹಲಿ ನಾಯಕರ ಭೇಟಿ ಬಳಿಕ ಶಾಸಕ ಯತ್ನಾಳ್​ ಹೇಳಿದ್ದಿಷ್ಟು
ರಕ್ಷಿತಾರನ್ನು ಮದುವೆಯಾದಾಗ ಅಂಬರೀಶ್ ಹೇಳಿದ್ದನ್ನು ಮೆಲಕು ಹಾಕಿದ ಪ್ರೇಮ್
ರಕ್ಷಿತಾರನ್ನು ಮದುವೆಯಾದಾಗ ಅಂಬರೀಶ್ ಹೇಳಿದ್ದನ್ನು ಮೆಲಕು ಹಾಕಿದ ಪ್ರೇಮ್
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ